ಕ್ಷುಲ್ಲಕ ಕಾರಣಕ್ಕೆ 2 ಕೋಮಿನ ನಡುವೆ ಗಲಾಟೆ- ಪರಿಸ್ಥಿತಿ ನಿಯಂತ್ರಣಕ್ಕೆ ಲಾಠಿ ಪ್ರಹಾರ

Public TV
1 Min Read
GDG GALATE

ಗದಗ: ಕ್ಷುಲ್ಲಕ ಕಾರಣದಿಂದ 2 ಕೋಮಿನ ನಡುವೆ ಗಲಾಟೆ ನಡೆದ ಘಟನೆ ಗದಗ ನಗರದ ಜುಮ್ಮಾ ಮಸೀದಿ ಬಳಿ ನಡೆದಿದೆ.

ದಿನಾಂಕ 25ರಂದು ನಗರದ ಮುನ್ಸಿಪಲ್ ಕಾಲೇಜ್ ಆವರಣದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಶ್ರೀರಾಮಸೇನೆಯಿಂದ ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಮಂದಿರ ನಿರ್ಮಾಣಕ್ಕೆ ಜನಾಗ್ರಹ ಸಭೆ ನಡೆಯಲಿದೆ. ಗುರುವಾರ ಕಾರ್ಯಕ್ರಮ ಪ್ರಚಾರ ನಡೆಯುತ್ತಿತ್ತು. ಆಗ ಕಿಡಿಗೇಡಿಗಳು ಆಟೋ ವಾಹನವನ್ನ ಅಡ್ಡಗಟ್ಟಿ ಬಳಿಕ ಚಾಲಕನಿಗೆ ಥಳಿಸಿ ವಾಹನಕ್ಕೆ ಕಟ್ಟಿದ್ದ ಧ್ವಜ ಹರಿದು ಪರಾರಿಯಾಗಿದ್ದಾರೆ.

GDG

ಇದು 2 ಕೋಮುಗಳ ನಡುವಿನ ಗಲಾಟೆಗೆ ಕಾರಣವಾಗಿದೆ. ನಂತರ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ಹರಸಾಹಸ ಪಟ್ಟಿದ್ದಾರೆ. ಆದರೂ ಏನು ಪ್ರಯೋಜವಾಗಿಲ್ಲ. ಈ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಕೊನೆಗೆ ಗುಂಪು ಚದುರಿಸಲು ಪೊಲೀಸರು ಲಘುಲಾಠಿ ಚಾರ್ಜ್ ಮಾಡಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದು, ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *