ನಾಳೆ ರಾಜ್ಯಾದ್ಯಂತ ನಡೆಯಲಿರುವ ಕರ್ನಾಟಕ ಬಂದ್ ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಬೆಂಬಲ ಸೂಚಿಸಿದ್ದು, ಕಲಾವಿದರೊಂದಿಗೆ ನಾಳೆ ಬೀದಿಗೆ ಇಳಿದು ಹೋರಾಟ ಮಾಡಲಿದೆ. ಬೆಳಗ್ಗೆಯಷ್ಟೇ ನಾಳಿನ ಬಂದ್ ನಲ್ಲಿ ಭಾಗಿಯಾಗುವಂತೆ ಮತ್ತು ಮುಂದಾಳತ್ವ ವಹಿಸಿಕೊಳ್ಳುವಂತೆ ಶಿವರಾಜ್ ಕುಮಾರ್ ಅವರಿಗೆ ಫಿಲ್ಮ್ ಚೇಂಬರ್ ಮನವಿ ಮಾಡಿತ್ತು. ನಂತರ ನಿಖಿಲ್ ಕುಮಾರಸ್ವಾಮಿ (Nikhil Kumar) ಅವರನ್ನು ಭೇಟಿ ಮಾಡಿ, ಬಂದ್ ನಲ್ಲಿ ಭಾಗಿಯಾಗುವಂತೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಚರ್ಚಿಸಿದ್ದಾರೆ.
ನಾಳೆ ನಡೆಯಲಿರುವ ಕರ್ನಾಟಕ ಬಂದ್ (Karnataka Band) ಹೋರಾಟಕ್ಕೆ ಚಿತ್ರಮಂದಿರಗಳ ಮಾಲೀಕರು ಕೂಡ ಬೆಂಬಲ ಸೂಚಿಸಿದ್ದು, ನಾಳೆ ಬೆಳಿಗ್ಗೆಯಿಂದಲೇ ಕರ್ನಾಟಕದ ಎಲ್ಲ ಚಿತ್ರಮಂದಿರಗಳು ಬಾಗಿಲು ಹಾಕಲಿವೆ. ಸಂಜೆ ಹೋರಾಟ ಮುಗಿದ ಬಳಿಕ ಮತ್ತೆ ಚಿತ್ರ ಪ್ರದರ್ಶನಗಳನ್ನು ಆರಂಭಿಸಲಿವೆ ಎಂದು ಕರ್ನಾಟಕ ಚಿತ್ರ ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ.ಚಂದ್ರಶೇಖರ್ ತಿಳಿಸಿದ್ದಾರೆ.
ಶುಕ್ರವಾರ ನಡೆಯಲಿರುವ ಕರ್ನಾಟಕ ಬಂದ್ ಗೆ ರಾಜ್ಯದ ಎಲ್ಲ ಚಿತ್ರಮಂದಿರಗಳು ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತಾ, ಸಂಜೆವರೆಗೆ ಪ್ರದರ್ಶನಗಳನ್ನು ಸ್ಥಗಿತಗೊಳಿಸಿ ಸಂಜೆ ನಂತರ ಪ್ರದರ್ಶನಗಳು ಮಾಮೂಲಿನಂತೆ ಪ್ರದರ್ಶನಗೊಳ್ಳುತ್ತವೆ. ಕಾವೇರಿ ನಮ್ಮದು. ರಾಜ್ಯ ಭಾಷೆ, ನೀರು ಮತ್ತು ನೆಲದ ವಿಷಯದಲ್ಲಿ ಯಾವುದೇ ರಾಜಿ ಇಲ್ಲದೇ ಸರ್ಕಾರ, ರೈತರ ಮತ್ತು ಹೋರಾಟಗಾರರ ಬೆಂಬಲಕ್ಕೆ ಸದಾ ಸಿದ್ಧರಿದ್ದೇವೆ ಎಂದು ತಿಳಿಸಿದ್ದಾರೆ ಅಧ್ಯಕ್ಷರು.
Web Stories