ಗದಗ: ಬಿಜೆಪಿ (BJP) ಅಭ್ಯರ್ಥಿ ಅನಿಲ್ ಮೆಣಸಿನಕಾಯಿ ಪರ ಚುನಾವಣಾ (Election) ಪ್ರಚಾರಕ್ಕೆ ತಾರಾ ಮೆರುಗು ಸಿಕ್ಕಿದೆ.
ಸ್ಯಾಂಡಲ್ವುಡ್ನ ಖ್ಯಾತ ನಟ ಭುವನ್ ಹಾಗೂ ಬಹುಭಾಷಾ ನಟಿ ಹರ್ಷಿಕಾ ಪೂಣಚ್ಚಾ (Harshika Poonacha) ಗದಗ (Gadag) ಹಾಗೂ ಬೆಟಗೇರಿ ಅವಳಿ ನಗರದ ಅನೇಕ ವಾರ್ಡ್ಗಳಲ್ಲಿ ಭಾನುವಾರ ಸಂಚರಿಸಿ ಅನಿಲ್ ಪರ ಪ್ರಚಾರ ಮಾಡಿದ್ದಾರೆ. ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಬಿಸಿಲಿನ ಬೇಗೆಯನ್ನು ಲೆಕ್ಕಿಸದೆ ನಟ ನಟಿಯರಿಬ್ಬರೂ ಮತದಾರರ ಮನೆ ಮನೆಗೆ ತೆರಳಿ ಬಿರುಸಿನ ಪ್ರಚಾರ ನಡೆಸಿದ್ದಾರೆ. ಇದನ್ನೂ ಓದಿ: ಆಸ್ಪತ್ರೆಯಲ್ಲೇ ಕುಳಿತು ಪ್ರಚಾರದ ರೂಟ್ ಮ್ಯಾಪ್ ಸಿದ್ಧಪಡಿಸಿದ ಹೆಚ್ಡಿಕೆ
ಈ ವೇಳೆ ಹರ್ಷಿಕಾ ಪೂಣಚ್ಚಾ ಮಾತನಾಡಿ, ನನಗೆ ಮತ್ತು ಅನಿಲ್ ಮೆಣಸಿನಕಾಯಿ ಅವರಿಗೆ ಬಹಳ ವರ್ಷಗಳಿಂದ ಪರಿಚಯವಿದೆ. ಅವರು ಉತ್ತಮ ಅಭ್ಯರ್ಥಿಯಾಗಿದ್ದು, ಸ್ವ-ಇಚ್ಛೆಯಿಂದ ಅವರ ಪರ ಪ್ರಚಾರಕ್ಕೆ ಬಂದಿದ್ದೇನೆ. ಅವರಿಗೆ ಗದಗದ ಅಭಿವೃದ್ಧಿಯ ಬಗ್ಗೆ ದೂರದೃಷ್ಟಿ ಇದೆ. ಆದರೆ ದುರದೃಷ್ಟವಶಾತ್ ಕಳೆದ ಬಾರಿ ಕಡಿಮೆ ಅಂತರದಿಂದ ಸೋತಿದ್ದರು. ಈಗಿನ ಕಾಂಗ್ರೆಸ್ ಶಾಸಕರು ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ. ವಸತಿ ರಹಿತರಿಗೆ ಮನೆ ಹಂಚಿಕೆ ಮಾಡಿಲ್ಲ. ಸರಿಯಾಗಿ ಕುಡಿಯುವ ನೀರು ಸಿಗುತ್ತಿಲ್ಲ. ಚರಂಡಿ ವ್ಯವಸ್ಥೆ ಸರಿ ಇಲ್ಲ. ಅಲ್ಲದೆ ಗದಗ ಹಾಗೂ ಬೆಟಗೇರಿಯಲ್ಲಿ ಸಾಕಷ್ಟು ಸಮಸ್ಯೆಗಳಿದ್ದು, ಇವು ದೂರವಾಗಬೇಕಾದರೆ ಈ ಬಾರಿ ಅನಿಲ್ ಅವರನ್ನು ಗೆಲ್ಲಿಸಬೇಕು ಎಂದು ಮತದಾರರಲ್ಲಿ ಮನವಿ ಮಾಡಿದ್ದಾರೆ.
ಯುವಕರಿಗೆ ಉದ್ಯೋಗ, ಬಡ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಬೇಕು ಎಂಬ ಹಂಬಲವಿದ್ದರೆ ಈ ಬಾರಿ ಗದಗದಲ್ಲಿ ಅನಿಲ ಮೆಣಸಿನಕಾಯಿ ಅವರನ್ನು ಗೆಲ್ಲಿಸಲೇಬೇಕೆಂದು ಮನವಿ ಮಾಡಿಕೊಂಡರು. ಈ ವೇಳೆ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಹಾಜರಿದ್ದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರ ನಾಮಪತ್ರ ಸಲ್ಲಿಕೆ ದಿನ ನಟ ಕಿಚ್ಚ ಸುದೀಪ್ (Sudeep), ಸಿಎಂ ಜೊತೆ ರೋಡ್ ಶೋನಲ್ಲಿ ಭಾಗಿಯಾಗಿದ್ದರು. ಶಿಗ್ಗಾಂವಿ ಕ್ಷೇತ್ರದ ಜನರ ಸಹಕಾರದೊಂದಿಗೆ ಬೊಮ್ಮಾಯಿಯವರನ್ನು ಗೆಲ್ಲಿಸುತ್ತೇನೆ ಎಂದಿದ್ದರು. ಇದನ್ನೂ ಓದಿ: ಸಿದ್ದರಾಮಯ್ಯ ಮೇಲಿನ ಆರೋಪ ಇಡೀ ಕುರುಬ ಸಮಾಜಕ್ಕೆ ಮಾಡ್ತಿರೋ ಅವಮಾನವಲ್ಲವೇ – ಕಾಂಗ್ರೆಸ್ ಪ್ರಶ್ನೆ