Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫಿಲ್ಮ್‌ ಸ್ಟೈಲ್‌ ಬಾಂಬ್‌ ಸ್ಫೋಟಿಸಿ ಜೈಲಿನಲ್ಲಿರುವ ಉಗ್ರ ನಾಸೀರ್‌ ಬಿಡುಗಡೆ ಪ್ಲ್ಯಾನ್‌ – ಶಾಕಿಂಗ್‌ ಸಂಚು ಬಯಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಫಿಲ್ಮ್‌ ಸ್ಟೈಲ್‌ ಬಾಂಬ್‌ ಸ್ಫೋಟಿಸಿ ಜೈಲಿನಲ್ಲಿರುವ ಉಗ್ರ ನಾಸೀರ್‌ ಬಿಡುಗಡೆ ಪ್ಲ್ಯಾನ್‌ – ಶಾಕಿಂಗ್‌ ಸಂಚು ಬಯಲು

Bengaluru City

ಫಿಲ್ಮ್‌ ಸ್ಟೈಲ್‌ ಬಾಂಬ್‌ ಸ್ಫೋಟಿಸಿ ಜೈಲಿನಲ್ಲಿರುವ ಉಗ್ರ ನಾಸೀರ್‌ ಬಿಡುಗಡೆ ಪ್ಲ್ಯಾನ್‌ – ಶಾಕಿಂಗ್‌ ಸಂಚು ಬಯಲು

Public TV
Last updated: July 10, 2025 2:13 pm
Public TV
Share
3 Min Read
t nasir nia bengaluru blast
SHARE

– ಬಂಧಿತರನ್ನು ತೀವ್ರ ವಿಚಾರಣೆ ನಡೆಸುತ್ತಿರುವ ಎನ್‌ಐಎ
– ದಾಳಿ ನಡೆಸಿ ಉಗ್ರರ ಯೋಜನೆ ವಿಫಲಗೊಳಿಸಿದ್ದ ಸಿಸಿಬಿ

ಬೆಂಗಳೂರು: ಬಾಂಬ್‌ ಸ್ಫೋಟಿಸಿ (Bomb Blast) ಸಿನಿಮಾ ಸ್ಟೈಲ್‌ನಲ್ಲಿ ಪರಪ್ಪನ ಅಗ್ರಹಾರದಿಂದ (Parappana Agrahara) ಪರಾರಿಯಾಗಲು ಟಿ ನಾಸೀರ್‌ (T Nasir) ಮುಂದಾಗಿದ್ದ ಸ್ಫೋಟಕ ವಿಚಾರ ರಾಷ್ಟ್ರೀಯ ತನಿಖಾ ದಳದ (NIA) ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.

ಹೌದು. 2008ರ ಬೆಂಗಳೂರು ಸ್ಫೋಟದಲ್ಲಿ (Bengaluru Blast) ಜೈಲುಪಾಲಾಗಿರುವ ಲಷ್ಕರ್‌ ಸಂಘಟನೆಯ ಉಗ್ರ ನಾಸೀರ್‌ ಮುಸ್ಲಿಂ ಯುವಕರ ತಂಡ ಬಳಸಿ ಹೊರ ಬರಲು ಖತರ್ನಾಕ್‌ ಪ್ಲ್ಯಾನ್‌ ಮಾಡಿದ್ದ ವಿಚಾರ ಎನ್‌ಐಎ ಮೂಲಗಳಿಂದ ತಿಳಿದು ಬಂದಿದೆ.

ASI Chand Pasha

ಏನಿದು ಯೋಜನೆ?
ಸದ್ಯದ ಪರಿಸ್ಥಿತಿಯಲ್ಲಿ ಹೊರ ಬರಲು ಸಾಧ್ಯವಿಲ್ಲ ಎಂಬುದನ್ನು ಅರಿತಿದ್ದ ನಾಸೀರ್‌ ಜೈಲಿನಲ್ಲೇ ಪ್ಲ್ಯಾನ್‌ ಮಾಡಿದ್ದ. ಪ್ರಕರಣ ಸಂಬಂಧ ನಾಸೀರ್‌ನನ್ನು ಜೈಲಿನಿಂದ ಹಲವು ಬಾರಿ ನ್ಯಾಯಾಲಯಕ್ಕೆ ಕರೆದುಕೊಂಡು ಹೋಗಲಾಗುತ್ತಿತ್ತು. ಈ ಜೈಲಿನಿಂದ ನ್ಯಾಯಾಲಯಕ್ಕೆ ಹೋಗುವಾಗ ಬಾಂಬ್‌ ಸ್ಫೋಟಿಸಲು ಸಂಚು ರೂಪಿಸಿದ್ದ. ಬಾಂಬ್‌ ಸ್ಫೋಟಗೊಂಡಾಗ ಪೊಲೀಸರ ಗಮನ ಬೇರೆಡೆ ಹೋಗುತ್ತದೆ. ಈ ವೇಳೆ ಪರಾರಿಯಾಗಬಹುದು ಎಂಬ ಲೆಕ್ಕಾಚಾರವನ್ನು ನಾಸೀರ್‌ ಹಾಕಿಕೊಂಡಿದ್ದ. ಇದನ್ನೂ ಓದಿ: ಜೈಲಲ್ಲಿರೊ ಉಗ್ರ ನಾಸೀರ್‌ಗೆ ಮನೋವೈದ್ಯನಿಂದ ಮೊಬೈಲ್ ಸಪ್ಲೈ – ಶಂಕಿತ ಉಗ್ರರು 6 ದಿನ ಎನ್ಐಎ ಕಸ್ಟಡಿಗೆ

ಈ ಸಂಚು ರೂಪಿಸಲು ಎಎಸ್‌ಐ ಚಾಂದ್‌ ಪಾಷಾ ನೆರವು ನೀಡುವುದಾಗಿ ಹೇಳಿದ್ದ. ಸಿಎಆರ್ ಉತ್ತರ ವಿಭಾಗದಲ್ಲಿರುವ ಚಾಂದ್‌ ಪಾಷಾ ನಾಸೀರ್‌ನನ್ನು ಬೆಂಗಳೂರು, ಕೇರಳ ಹಾಗೂ ಇತರೇ ರಾಜ್ಯಗಳ ಕೋರ್ಟ್‌ಗೆ ಕರೆದೊಯ್ಯುವ ಮಾಹಿತಿಯನ್ನು ಸಂಘಟನೆಯ ಕೆಲವು ವ್ಯಕ್ತಿಗಳು ಹಾಗೂ ಮುಂಗಡವಾಗಿ ಟಿ.ನಾಸೀರ್‌ಗೂ ನೀಡುತ್ತಿದ್ದ. ಇದಕ್ಕಾಗಿ ಚಾಂದ್‌ ಪಾಷಾಗೆ ನಾಸೀರ್‌ ಕಡೆಯಿಂದ ಹಣ ಸಂದಾಯವಾಗುತ್ತಿತ್ತು.

prison radicalisation case NIA

ನಾಸೀರ್‌ ಬಂದೋಬಸ್ತ್‌ಗೆ ನಿಯೋಜನೆಗೊಂಡಿದ್ದರಿಂದ ಚಾನ್ ಪಾಷಾಗೆ ವಾಹನದ ರೂಟ್‌ ಮ್ಯಾಪ್‌ ಎಲ್ಲವೂ ಚೆನ್ನಾಗಿ ಗೊತ್ತಿತ್ತು. ನಾಸೀರ್‌ ಜೀಪ್ ಹತ್ತಿಸಿ ವಾಹನ ಬರುತ್ತಿದ್ದಂತೆ ಬಾಂಬ್‌ ಸ್ಫೋಟಿಸಬೇಕು. ಪ್ರತಿ ಮಾಹಿತಿ ನಾನು ನೀಡುತ್ತೇನೆ ಎಂದು ಜುನೈದ್‌ ಅಹಮದ್‌ ಟೀಂಗೆ ಚಾನ್ ಪಾಷಾ ಹೇಳಿದ್ದ. ಈ ಪ್ಲ್ಯಾನ್‌ನಂತೆ ಜುನೈದ್‌ ತಂಡ ಬಾಂಬ್‌ ಸ್ಫೋಟಿಸಲು ಸಂಚು ಮಾಡುತ್ತಿತ್ತು. ಆದರೆ 2023 ರಲ್ಲಿ ಖಚಿತ ಮಾಹಿತಿ ಮೇರೆಗೆ ಜುನೈದ್‌ ತಂಡದ ಚಟುವಟಿಕೆ ತಿಳಿದು ಈ ಯೋಜನೆಯನ್ನು ಸಿಸಿಬಿ ಪೊಲೀಸರು ವಿಫಲಗೊಳಿಸಿದ್ದರು.

ಈ ಬಾರಿಯೂ ಅದೇ ರೀತಿ ಸಂಚು ಹೂಡಿದ್ದ ಶಂಕೆ ವ್ಯಕ್ತವಾಗಿದ್ದು ಬಂಧಿತ ಮೂವರನ್ನು ಎನ್‌ಐಎ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ಜನನಿಬಿಡ ಸ್ಥಳದಲ್ಲಿ ಸ್ಫೋಟಕ್ಕೆ ಸಂಚು– ಸಿಸಿಬಿಯಿಂದ ಐವರು ಅರೆಸ್ಟ್

ಸಿಸಿಬಿ ದಾಳಿಯಲ್ಲಿ ಪತ್ತೆಯಾದ ವಸ್ತುಗಳು
ಸಿಸಿಬಿ ದಾಳಿಯಲ್ಲಿ ಪತ್ತೆಯಾದ ವಸ್ತುಗಳು

‌ಎಲ್ಲಿದ್ದಾನೆ ಜುನೈದ್‌?
ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ನಡೆಸಿ, ಭಾರಿ ಅನಾಹುತ ಎಸಗಲು ಸಂಚು ರೂಪಿಸಿದ್ದ ಖಚಿತ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು  ಜುಲೈ 23, 2023  ರಲ್ಲಿ  ಸುಲ್ತಾನ್‌ಪಾಳ್ಯ, ಡಿ.ಜೆ.ಹಳ್ಳಿ, ಆರ್‌.ಟಿ.ನಗರ, ಕೊಡಿಗೇಹಳ್ಳಿಯಲ್ಲಿ ಕಾರ್ಯಾಚರಣೆ ನಡೆಸಿ ಸೈಯದ್ ಸುಹೇಲ್‌ ಖಾನ್‌, ಜಾಹೀದ್‌ ತಬ್ರೇಸ್‌, ಸೈಯದ್‌ ಮುದಾಸೀರ್‌ ಪಾಷಾ, ಮಹಮದ್‌ ಫೈಸಲ್‌, ಮಹಮದ್‌ ಉಮರ್‌ನನ್ನು ಬಂಧಿಸಿದ್ದರು.

ಜೈಲಿನಲ್ಲಿದ್ದ ಐವರಿಗೆ ಟಿ. ನಾಸೀರ್‌ ಉಗ್ರ ಚಟುವಟಿಕೆಗಳ ಬಗ್ಗೆ ತರಬೇತಿ ನೀಡುತ್ತಿದ್ದ. 7 ನಾಡ ಬಂದೂಕು, 45 ಗುಂಡುಗಳು, ಸ್ಯಾಟ್‌ಲೈಟ್‌ ಫೋನ್ ಮಾದರಿಯ ವಾಕಿಟಾಕಿಗಳು, 12 ಮೊಬೈಲ್‌, ಡ್ರಾಗರ್‌ ಸೇರಿದಂತೆ ವಿವಿಧ ವಸ್ತುಗಳನ್ನು ಜಪ್ತಿ ಮಾಡಿಕೊಳ್ಳಲಾಗಿತ್ತು. ಪ್ರಕರಣದ ಪ್ರಮುಖ ಸೂತ್ರಧಾರ ಜುನೈದ್‌ ಅಹಮದ್‌ ದುಬೈಗೆ ಪರಾರಿಯಾಗಿದ್ದಾನೆ. ಶಂಕಿತ ಉಗ್ರ ಜುನೈದ್‌ ಅಹಮದ್‌ನ ತಾಯಿ ಅನೀಸ್‌ ಫಾತಿಮಾಳನ್ನು ಎನ್‌ಐಎ ಈಗ ಬಂಧಿಸಿದೆ.

TAGGED:bengaluruBengaluru BlastNIAT Nasirಎನ್‍ಐಎಟಿ ನಾಸೀರ್‌ಪರಪ್ಪನ ಅಗ್ರಹಾರಬೆಂಗಳೂರು
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

kea
Bengaluru City

ಎಂ.ಫಾರ್ಮಾ ಅಂತಿಮ ಸುತ್ತಿನ ಸೀಟು ಹಂಚಿಕೆ: ಕೆಇಎ

Public TV
By Public TV
34 seconds ago
31 Karnataka Congress MLAs Write To High Command Demanding Cabinet Expansion Letter Goes Viral
Bengaluru City

ಕುರ್ಚಿ ಕದನದ ಮಧ್ಯೆ ಹೊಸಬರಿಗೆ ಮಂತ್ರಿ ಸ್ಥಾನಕ್ಕೆ ಬೇಡಿಕೆ – ಪತ್ರ ಬರೆದ 31 ಶಾಸಕರು ಯಾರು?

Public TV
By Public TV
14 minutes ago
Siddaramaiah Chikkaballapura MGNREGA Programme
Districts

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಕರೆ

Public TV
By Public TV
18 minutes ago
Ranaji Final
Cricket

ಫಸ್ಟ್‌ ಟೈಮ್ ಹುಬ್ಬಳ್ಳಿಯಲ್ಲಿ ರಣಜಿ ಫೈನಲ್ ಮ್ಯಾಚ್‌ – ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ವಾಣಿಜ್ಯ ನಗರಿ!

Public TV
By Public TV
57 minutes ago
Tamil Nadu Archana Patnaik
Latest

ತಮಿಳುನಾಡಿನಲ್ಲಿ `SIR’ ಅಭಿಯಾನ – ಅಂತಿಮ ಮತದಾರರ ಪಟ್ಟಿ ಪ್ರಕಟ; 97 ಲಕ್ಷ ಮತದಾರರ ಹೆಸರು ಡಿಲೀಟ್

Public TV
By Public TV
2 hours ago
ಸಾಂದರ್ಭಿಕ ಚಿತ್ರ
Bengaluru City

ನಮ್ಗೂ ಅವಕಾಶ ಕೊಡಿ – ಸಚಿವ ಸಂಪುಟ‌ ಪುನಾರಚನೆಗೆ 31 ಹೊಸ ಶಾಸಕರ ಪತ್ರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?