Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕತ್ತಿಗೆ ಮಚ್ಚು ಹಿಡಿದು ಮನೆಯ ಸದಸ್ಯರ ಕೂಡಿ ಹಾಕಿ ಫಿಲ್ಮಿ ಸ್ಟೈಲ್‌ ದರೋಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಕತ್ತಿಗೆ ಮಚ್ಚು ಹಿಡಿದು ಮನೆಯ ಸದಸ್ಯರ ಕೂಡಿ ಹಾಕಿ ಫಿಲ್ಮಿ ಸ್ಟೈಲ್‌ ದರೋಡೆ

Dakshina Kannada

ಕತ್ತಿಗೆ ಮಚ್ಚು ಹಿಡಿದು ಮನೆಯ ಸದಸ್ಯರ ಕೂಡಿ ಹಾಕಿ ಫಿಲ್ಮಿ ಸ್ಟೈಲ್‌ ದರೋಡೆ

Public TV
Last updated: March 23, 2022 2:57 pm
Public TV
Share
3 Min Read
home
SHARE

– ದಕ್ಷಿಣ ಕನ್ನಡ ಜಿಲ್ಲೆಯ ಸಂಪಾಜೆ ಗ್ರಾಮದಲ್ಲಿ ಘಟನೆ
– 6 ಜನರಿಂದ ಕೃತ್ಯ, 5.50 ಲಕ್ಷ ದೋಚಿದ ಕಳ್ಳರು

ಮಂಗಳೂರು: ಎಳನೀರು ಕೊಚ್ಚುವ ಮಚ್ಚು ಹಿಡಿದು ಮನೆಗೆ ಎಂಟ್ರಿ, ಮನೆಯವರ ಬಾಯಿಗೆ ಪ್ಲಾಸ್ಟರ್‌ ತುರುಕಿ ಬೆದರಿಕೆ, ಕತ್ತಿನಿಂದಲೇ ಮಾಂಗಲ್ಯ ಸರ ಕಳ್ಳತನ, ಹಿರಿಯ ಮಹಿಳೆಯ ಕತ್ತಿಗೆ ಕತ್ತಿಯನ್ನು ಹಿಡಿದು ಹಣ ನೀಡುವಂತೆ ಬೆದರಿಕೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದಲ್ಲಿ ಸಿನಿಮಾ ಸ್ಟೈಲ್‌ ದರೋಡೆ ನಡೆದಿದೆ. ಮಾ.21ರ ಭಾನುವಾರ ರಾತ್ರಿ 6 ಮಂದಿ ದರೋಡೆಕೋರರು ಅಂಬರೀಶ್‌ ಭಟ್‌ ಅವರ ನಿವಾಸ ʼಅಂಬಾಶ್ರಾಮʼಕ್ಕೆ ನುಗ್ಗಿ ಕೃತ್ಯ ಎಸಗಿದ್ದು ಗ್ರಾಮದ ಜನತೆ ಬೆಚ್ಚಿ ಬಿದ್ದಿದ್ದಾರೆ.

ದರೋಡೆಕೋರರು ಒಟ್ಟು 4 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು 1.5 ಲಕ್ಷ ರೂ. ನಗದು ಸೇರಿ ಒಟ್ಟು 5.50 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಕದ್ದು ಪರಾರಿಯಾಗಿದ್ದಾರೆ. ಈ ಸಂಬಂಧ ಸುಳ್ಯ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 395(ದರೋಡೆ) ಅಡಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮೂರು ವರ್ಷಗಳಲ್ಲಿ ಅನುಭವ ಮಂಟಪ ನಿರ್ಮಾಣ: ಆರ್‌. ಅಶೋಕ್

Police jeep

ಅಂಬರೀಶ್‌ ಭಟ್‌ ಗ್ರಾಮದಲ್ಲಿ ಪೌರೋಹಿತ್ಯ ಉದ್ಯೋಗದ ಜೊತೆ ಜ್ಯೋತಿಷ್ಯ ಹೇಳುತ್ತಿದ್ದಾರೆ. ಭಾನುವಾರ ಸಂಜೆ ಅಂಬರೀಶ್‌ ಭಟ್‌ ಪುತ್ರ ಶ್ರೀವತ್ಸ ಜೊತೆ ಮದೆನಾಡು ಗ್ರಾಮಕ್ಕೆ ಕೆಲಸದ ನಿಮಿತ್ತ ತೆರಳಿದ್ದರು. ಈ ಸಂದರ್ಭದಲ್ಲಿ ಮನೆಯಲ್ಲಿ ಅಂಬರೀಶ್‌ ಭಟ್‌ ಪತ್ನಿ ಪುಷ್ಪಾ, ಸೊಸೆ ಆಶಾ, ತಂದೆ ಗೋವಿಂದ ಭಟ್‌, ತಾಯಿ ಸರಸ್ವತಿ ಮತ್ತು ಇಬ್ಬರು ಮೊಮ್ಮಕ್ಕಳು ಇದ್ದರು.

ದರೋಡೆ ಹೇಗಾಯ್ತು?
ರಾತ್ರಿ 8:30ರ ವೇಳೆಗೆ ಹೊರಗಡೆ ನಾಯಿ ಬೊಗಳುವ ಸದ್ದು ಕೇಳಿ ಚಾವಡಿಯ ಬಳಿ ಆಶಾ ಬಂದಿದ್ದಾರೆ. ಈ ವೇಳೆ ಮುಖಕ್ಕೆ ಮಾಸ್ಕ್, ಕೈಗೆ ಗ್ಲೌಸ್ ಹಾಗೂ ಮಾರಕಾಸ್ತ್ರಗಳನ್ನು ಹಿಡಿದಿದ್ದ 3 ಮಂದಿ ದರೋಡೆಕೋರರನ್ನು ಕಂಡು ಗಾಬರಿಯಾಗಿದ್ದಾರೆ. ದರೋಡೆಕೋರರಲ್ಲಿ ಒಬ್ಬಾತ ನೇರವಾಗಿ ಆಶಾ ಅವರ ಬಳಿ ಬಂದು ಮಾಂಗಲ್ಯ ಸರವನ್ನು ಹಿಡಿದು ಎಳೆದಿದ್ದಾನೆ.

ಈ ವೇಳೆ ಏನು ನಡೆಯುತ್ತಿದೆ ಎಂದು ನೋಡಲು ಗೋವಿಂದ ಭಟ್‌, ಸರಸ್ವತಿ ಬಂದಿದ್ದಾರೆ. ಈ ವೇಳೆ ಸರಸ್ವತಿ ಅವರನ್ನು ಬೀಳಿಸಿದ ದರೋಡೆಕೋರ ಮಾರಕಾಸ್ತ್ರವನ್ನು ಕತ್ತಿನ ಬಳಿ ಹಿಡಿದು ಹಣ ಎಲ್ಲಿ ಎಂದು ಬೆದರಿಸಿ ಕೇಳಿದ್ದಾನೆ.

ಗಾಬರಿಯಾದ ಮನೆ ಸದಸ್ಯರು ಹಣ, ಚಿನ್ನ ಇರುವ ಜಾಗವನ್ನು ತೋರಿಸಿದ್ದಾರೆ. ಬಳಿಕ ಗೋವಿಂದ ಭಟ್‌ ಅವರ ಬಾಯಿಗೆ ಪ್ಲಾಸ್ಟರ್ ಹಚ್ಚಿ, ಮನೆಯಲ್ಲಿದ್ದ ಎಲ್ಲಾ ಸದಸ್ಯರನ್ನೂ ಊಟದ ಕೋಣೆಯಲ್ಲಿ ಕೂರಿಸಿ, ಕೂಡಿ ಹಾಕಿದ್ದಾರೆ. ನಂತರ ಅಂಬರೀಶ್‌ ಭಟ್‌ ಪತ್ನಿ ಪುಷ್ಪಾ ಕೈಯಿಂದಲೇ ಬಲವಂತವಾಗಿ ಗೋಡ್ರೇಜ್‌ ಬಾಗಿಲು ತೆಗೆಸಿದ್ದಾರೆ. ಈ ವೇಳೆ ಗೋಡ್ರೇಜ್‌ನಲ್ಲಿದ್ದ 3 ಲಕ್ಷ ರೂ.ಗೂ ಅಧಿಕ ಮೌಲ್ಯದ ಚಿನ್ನ, 1.50 ಲಕ್ಷ ರೂ.ನಗದು, ಒಂದು ಸ್ಯಾಮ್‌ಸಂಗ್‌ ಮೊಬೈಲ್ ಅನ್ನು ಎಗರಿಸಿದ್ದಾರೆ. ಇದನ್ನೂ ಓದಿ: ಬಪ್ಪನಾಡು ದೇವಸ್ಥಾನ ಹಾಗೂ ಮಾರಿಕಾಂಬಾ ದೇವಸ್ಥಾನ ಕಟ್ಟಿದವರು ಮುಸ್ಲಿಮರು: ರಿಜ್ವಾನ್

police 2

ಮೂವರು ದರೋಡೆಕೋರು ಒಳಗಡೆ ಬಂದಿದ್ದರೆ ಮೂವರು ಹೊರಗಡೆ ಇದ್ದರು. ದರೋಡೆಯ ಬಳಿಕ ಹೊರಗಡೆ ಇದ್ದವರು ದರೋಡೆಕೋರರ ಕೈಯಿಂದ ಹಣ, ಚಿನ್ನದ ಗಂಟನ್ನು ಪಡೆದಿದ್ದಾರೆ. ಕೊನೆಗೆ ಪರಾರಿಯಾಗುವುದಕ್ಕೂ ಮೊದಲು ಯಾರಿಗೂ ಹೇಳದಂತೆ ಮನೆಯ ಸದಸ್ಯರಿಗೆ ಬೆದರಿಕೆ ಹಾಕಿದ್ದಾರೆ.

ಈ‍ ಘಟನೆ ರಾತ್ರಿ ಸುಮಾರು 8:30 ರಿಂದ 9 ಗಂಟೆಯ ವೇಳೆ ನಡೆದಿದೆ. ದರೋಡೆಕೋರರು ಅಪರಿಚಿತರಾಗಿದ್ದು, ತಮಿಳು ಭಾಷೆಯಲ್ಲಿ ಹಾಗೂ ಸನ್ನೆಗಳ ಮೂಲಕ ಸಂವಹನ ಮಾಡಿ ಕೃತ್ಯ ಎಸಗಿದ್ದಾರೆ.

ಶ್ರೀವತ್ಸ ಅವರು ಬೆಂಗಳೂರಿನಲ್ಲಿ ಐಟಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದಾರೆ. ವರ್ಕ್ ಫ್ರಂ ಹೋಂ ಇರುವ ಹಿನ್ನೆಲೆಯಲ್ಲಿ ಪತ್ನಿ ಮತ್ತು ಮಕ್ಕಳ ಜೊತೆ ಸ್ವಗ್ರಾಮಕ್ಕೆ ಬಂದು ಉದ್ಯೋಗ ಮಾಡುತ್ತಿದ್ದಾರೆ.

TAGGED:dakshina kannadarobberyಕಳ್ಳತನದಕ್ಷಿಣ ಕನ್ನಡದರೋಡೆಪೊಲೀಸ್ಸಂಪಾಜೆ
Share This Article
Facebook Whatsapp Whatsapp Telegram

Cinema news

Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood

You Might Also Like

Donald Trump 2
Latest

ಮುಂದುವರಿದ ಟ್ರಂಪ್‌ ಹುಚ್ಚಾಟ – ಎಲ್ಲಾ ದೇಶಗಳ ಮೇಲಿನ ಹೆಚ್ಚುವರಿ ಸುಂಕ 15% ಗೆ ಹೆಚ್ಚಿಸಿದ ಟ್ರಂಪ್‌

Public TV
By Public TV
51 minutes ago
Chikkamagaluru Manu
Chikkamagaluru

ಪತ್ನಿಗೆ ಯುವಕನಿಂದ ಮೆಸೇಜ್‌ – ಮನನೊಂದು ನೇಣಿಗೆ ಶರಣಾದ ಪತಿ?

Public TV
By Public TV
54 minutes ago
pramod muthalik
Bagalkot

ಪ್ರಮೋದ್ ಮುತಾಲಿಕ್, ಪುನಿತ್ ಕೆರೆಹಳ್ಳಿಗೆ ಬಾಗಲಕೋಟೆ ಪ್ರವೇಶಿಸದಂತೆ ನಿರ್ಬಂಧ

Public TV
By Public TV
2 hours ago
Siddaramaiah 8
Bengaluru City

16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಶಾಲಾ – ಕಾಲೇಜುಗಳಲ್ಲಿ ಮೊಬೈಲ್‌ ಬ್ಯಾನ್‌ ಮಾಡಲು ಚಿಂತನೆ!

Public TV
By Public TV
2 hours ago
Father in law sets fire to house of young man who married his daughter in Mandya
Crime

ಮಗಳನ್ನು ಪ್ರೀತಿಸಿ ಮದುವೆಯಾದ ಯುವಕನ ಮನೆಗೆ ಬೆಂಕಿ ಇಟ್ಟ ಮಾವ!

Public TV
By Public TV
3 hours ago
siddaramaiah
Bengaluru City

5 ಲಕ್ಷ ಲಂಚ ಪಡೆಯುವಾಗ್ಲೇ ಸಿಕ್ಕಿಬಿದ್ದ ಬಿಜೆಪಿ ಶಾಸಕ – ನಾವ್ಯಾರು ತನಿಖೆಗೆ ಅಡ್ಡಿ ಬರಲ್ಲ ಎಂದ ಸಿಎಂ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?