ಉಡುಪಿ: ಇಲ್ಲಿನ ಶಿರೂರು ಮಠದ ಆವರಣದಲ್ಲಿರುವ ಬಾವಿಯಲ್ಲಿ ಮದ್ಯದ ಬಾಟಲ್ ಪತ್ತೆಯಾಗಿದ್ದು, ಇದೀಗ ತನಿಖೆ ಚುರುಕುಗೊಂಡಿದೆ.
ಶಿರೂರು ಶ್ರೀಗಳ ಅನುಮನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ಶೋಧ ಕಾರ್ಯ ಮುಂದುವರಿದೆ. ಈ ವೇಳೆ ಜಗದೀಶ್ ಪೂಜಾರಿ ಎಂಬವರು ಶಿರೂರು ಮಠ ಮತ್ತು ಕೃಷ್ಣಮಠದ ಪಕ್ಕದಲ್ಲಿರುವ ಬಾವಿಯಲ್ಲಿ ಮದ್ಯದ ಬಾಟಲಿ ಇರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ ಶಿರೂರು ಮಠದ ಬಾವಿಯಲ್ಲಿ ಪೊಲೀಸರು ಹುಡುಕಾಟ ನಡೆಸಿದ ವೇಳೆ ಮದ್ಯದ ಬಾಟಲ್ ಇರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಉಡುಪಿ ಶಿರೂರು ಮಠದ ಸಿಸಿಟಿವಿ ಡಿವಿಆರ್ ನಾಪತ್ತೆ!
- Advertisement 2
- Advertisement 3
ಕೂಡಲೇ ತನಿಖೆ ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡ, ಬಾವಿಯಲ್ಲಿದ್ದ ಕೆಲವು ವಸ್ತುಗಳನ್ನು ಕೊಕ್ಕೆಯೊಂದರ ಮೂಲಕ ಮೇಲೆತ್ತಿ ಕೊಂಡೊಯ್ದಿದ್ದಾರೆ. ಸಂಗ್ರಹಿಸಿದ ವಸ್ತುಗಳನ್ನು ಪ್ಲಾಸ್ಟಿಕ್ ಚೀಲದಲ್ಲಿ ಭದ್ರತೆಗೊಳಿಸಿ ರವಾನೆ ಮಾಡಲಾಗಿದೆ.
- Advertisement 4
ಇನ್ನು ಸೋಮವಾರವಷ್ಟೇ ಮಠದ ಮುಂಭಾಗದಲ್ಲಿದ್ದ ಸಿಸಿಟಿವಿ ಡಿವಿಆರ್ ನಾಪತ್ತೆಯಾಗಿದೆ ಎನ್ನಲಾಗುತ್ತಿತ್ತು. ಆದ್ರೆ ಇದೀಗ ಸಿ.ಸಿ ಕ್ಯಾಮರಾದ ಡಿ.ವಿ.ಆರ್ ಪತ್ತೆಯಾಗಿದೆ ಅಂತ ಹೇಳಲಾಗುತ್ತಿದ್ದು, ಆದ್ರೆ ಪೊಲೀಸರು ಈ ಬಗ್ಗೆ ಯಾವುದೇ ಮಾಹಿತಿ ಬಿಟ್ಟುಕೊಡುತ್ತಿಲ್ಲ. ಇದನ್ನೂ ಓದಿ: ಶಿರೂರು ಮೂಲ ಮಠದಲ್ಲಿ ಸಿಕ್ಕಿದ್ದು ಪಾಯ್ಸನ್ ಅಲ್ಲ, ಜ್ಯೂಸ್ ಬಾಟಲ್!