ಕಲಬುರಗಿ: ಜಿಲ್ಲೆಯ ಸೇಡಂ ತಾಲೂಕಿನ ಕೋಡ್ಲಾ ಸಮೀಪದ ಸಿಮೆಂಟ್ ಕಾರ್ಖಾನೆಯಲ್ಲಿ ರಕ್ತದೊತ್ತಡದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗುತ್ತಿರುವ ಬಿಹಾರ ಮೂಲದ ಕಾರ್ಮಿಕನ (Bihar Labour)ಮೃತದೇಹವನ್ನು ಅಮಾನವೀಯವಾಗಿ ಎಳೆದೊಯ್ದ ಘಟನೆಗೆ ಸಂಬಂಧಿಸಿದಂತೆ ಕಾರ್ಖಾನೆಯ 6 ಸಿಬ್ಬಂದಿ ವಿರುದ್ಧ ಸೇಡಂ ಪೊಲೀಸ್ ಠಾಣೆಯಲ್ಲಿ (Sedam Police Station) ಪ್ರಕರಣ ದಾಖಲಾಗಿದೆ.
Advertisement
ಬಿಹಾರ ಮೂಲದ ಚಂದನ್ಸಿಂಗ್ ಕಳೆದ ಎರಡು ದಿನಗಳ ಹಿಂದೆ ಅಧಿಕ ರಕ್ತದೊತ್ತಡಂದಾಗಿ ಕುಸಿದು ಬಿದ್ದು ಸಾವನ್ನಪ್ಪಿದ ಬಳಿಕ ಶವ ಸಾಗಣೆ ಸಂದರ್ಭದಲ್ಲಿ ಕೆಲವು ಸಿಬ್ಬಂದಿ ಆತನ ಮೃತದೇಹವನ್ನ ದರದರನೆ ಎಳೆದೊಯ್ದಿದ್ದರು. ಈ ಸಂಬಂಧ ಉತ್ತರ ಭಾರತದ ಕಾರ್ಮಿಕರಾದ ಹೈದರ್ ಅಲಿ, ಅಜಯ್, ರವಿಶಂಕರ್, ಹರಿಂದರ್, ರಮೇಶ್ಚಂದ್ರ ಹಾಗೂ ಅಖಿಲೇಶ್ ವಿರುದ್ಧ ಪೋಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Advertisement
ಈ ಮಧ್ಯೆ, ಕಾರ್ಮಿಕನ ಸಾವಿಗೆ ನ್ಯಾಯ ಒದಗಿಸುವಂತೆ ಕೋರಿ ಸಹ ಕಾರ್ಮಿಕರು ಕಾರ್ಖಾನೆ ಆವರಣದಲ್ಲಿ ಶವವಿಟ್ಟು ಪ್ರತಿಭಟನೆ ನಡೆಸುವ ನೆಪದಲ್ಲಿ ಶಾಂತಿ-ಸುವ್ಯವಸ್ಥೆಗೆ ಭಂಗ ಉಂಟು ಮಾಡಿದ್ದಾರೆ ಎಂದು ಪೊಲೀಸರು ದೂರಿನಲ್ಲಿ ದಾಖಲಿಸಿದ್ದಾರೆ.
Advertisement
Advertisement
ಮತ್ತೊಂದೆಡೆ, ಚಂದನ್ಸಿಂಗ್ನನ್ನ ಗುತ್ತಿಗೆ ಆಧಾರದ ಮೇಲೆ ಕಾರ್ಖಾನೆಗೆ ಕೆಲಸಕ್ಕೆ ಕಳುಹಿಸಿದ್ದ ಗುತ್ತಿಗೆ ಸಂಸ್ಥೆ ಆತನ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಕಾರ್ಮಿಕರು ಒತ್ತಾಯಿಸಿದ್ದಾರೆ. ಈ ಎಲ್ಲ ವಿದ್ಯಮಾನಗಳ ಮಧ್ಯೆ ಕಾರ್ಖಾನೆ ಹಾಗೂ ಕಾರ್ಮಿಕರ ಮಧ್ಯೆ ಜಟಾಪಟಿ ಏರ್ಪಟ್ಟಿದ್ದು, ಕಾರ್ಮಿಕರು ಘಟನೆ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ.