ಬೆಂಗಳೂರು: ಇಸ್ರೇಲ್ ಹಮಾಸ್ (Israel Hamas) ಯುದ್ಧದಲ್ಲಿ ಪ್ಯಾಲೆಸ್ತೀನ್ (Palestine) ಪರವಾಗಿ ಪ್ರತಿಭಟನೆ ನಡೆಸಿದ ಬಹುತ್ವ ಕರ್ನಾಟಕ (Bahutva Karnataka) ಸದಸ್ಯರ ಮೇಲೆ ಬೆಂಗಳೂರು ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಗಾಜಾ ಮೇಲೆ ನಡೆಯುತ್ತಿರುವ ಅಕ್ರಮ ದಾಳಿ ನಿಲ್ಲಿಸಬೇಕು. ಭಾರತ ಇಸ್ರೇಲ್ ಮೇಲೆ ಒತ್ತಡ ಹಾಕಿ ಪ್ಯಾಲೆಸ್ತೀನ್ನ್ನು ಪ್ರತ್ಯೇಕ ದೇಶವಾಗಿಸಬೇಕು ಎಂದು ಆಗ್ರಹಿಸಿ ಎಂಜಿ ರಸ್ತೆಯ ಮೆಟ್ರೋ ನಿಲ್ದಾಣದ ಬಳಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಗಿತ್ತು. ಇದನ್ನೂ ಓದಿ: ಷರತ್ತು ಪಾಲಿಸಿದ್ರೆ ಒತ್ತೆಯಾಳುಗಳ ಬಿಡುಗಡೆ – ಇಸ್ರೇಲ್ ಜೊತೆ ಸಂಧಾನಕ್ಕೆ ಮುಂದಾದ ಇರಾನ್
ಯಾವುದೇ ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಬಹುತ್ವ ಕರ್ನಾಟಕ ಸಂಘಟನೆಯ ಕಾರ್ಯಕರ್ತರ ಮೇಲೆ ಎಫ್ಐಆರ್ ದಾಖಲಾಗಿದೆ.
Web Stories