ತುಮಕೂರು: ಸಾಮಾಜಿಕ ಜಾಲತಾಣದಲ್ಲಿ (Social Media) ಕೋಮು ವೈಷಮ್ಯದ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ (Shakunthala Nataraj) ವಿರುದ್ಧ ಎಫ್ಐಆರ್ (FIR) ದಾಖಲಾಗಿದೆ.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಶಕುಂತಲಾ, ಯೋಗಿಜಿ ರಾಜ್ಯದಲ್ಲಿ ಕಲ್ಲು ತೂರಾಟ ನಡೆಸಿದ್ದರಿಂದ ಅಲ್ಲಾ ಸಹಾಯಕ್ಕೆ ಬರಲಿಲ್ಲ. ಆದ್ದರಿಂದ ಜೀವ ಹೋಗಿದೆ ಅಷ್ಟೇ. ಮೇಲೆ ಹೋದಮೇಲೆ 72 ಜನ ಸುಂದರಿಯರು ಸಿಗುತ್ತಾರೆ ಎಂದು ಅನ್ಯ ಧರ್ಮದ ವಿರುದ್ಧ ಅವಹೇಳನ ಮಾಡಿದ್ದಾರೆ ಎಂದು ಎಂದು ದೂರಲಾಗಿದೆ. ಇದನ್ನೂ ಓದಿ: ಬಳ್ಳಾರಿ ಸಿಸೇರಿಯನ್ ದುರಂತ: ಮೃತ ಮಹಿಳೆಯರ ಸಂಖ್ಯೆ ನಾಲ್ಕಕ್ಕೆ ಏರಿಕೆ
ಪೋಸ್ಟ್ ಹಾಕಿದ ಹಿನ್ನೆಲೆ ಪೊಲೀಸ್ ಕಾನ್ಸ್ಟೇಬಲ್ ಉಮಾಶಂಕರ್ ದೂರು ನೀಡಿದ್ದಾರೆ. ಅದರಂತೆ ಕಲಂ 299 ಬಿಎನ್ಎಸ್ ಅಡಿ ಎಫ್ಐಆರ್ ದಾಖಲಾಗಿದೆ. ತುಮಕೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ತನಿಖೆ ಆರಂಭವಾಗಿದೆ. ಇದನ್ನೂ ಓದಿ: ನಮ್ಮ ಹೋರಾಟ ವಕ್ಫ್ ವಿರುದ್ಧ, ಯಾವುದೇ ಕುಟುಂಬದ ವಿರುದ್ಧವಲ್ಲ: ಯತ್ನಾಳ್
ಯತ್ನಾಳ್ ಅಭಯ:
ತಮ್ಮ ವಿರುದ್ಧ ಎಫ್ಐಆರ್ ದಾಖಲಾಗಿರೋದನ್ನು ಖಂಡಿಸಿ ಶಕುಂತಲಾ ಮತ್ತೆ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಬಸನಗೌಡ ಯತ್ನಾಳ್, ಹೆದರಬೇಡಿ ನಿಮ್ಮೊಂದಿಗೆ ನಾವಿದ್ದೇವೆ ಎಂದು ಅಭಯ ನೀಡಿದ್ದಾರೆ. ಇದನ್ನೂ ಓದಿ: ಸ್ಕ್ಯಾನ್ ಮಾಡಿ, ಹಂಪಿ ಶಿಲೆಗಳ ಸಂಗಿತ ಕೇಳಿ!