Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದು ಡಿವೈಎಸ್ಪಿ ಆಗಿ ಚಾರ್ಜ್ ತೆಗೆದುಕೊಳ್ಳಬೇಕಿದ್ದ ಅಧಿಕಾರಿ ದುರಂತ ಸಾವು – ಜೀಪ್‌ ಚಾಲಕನ ವಿರುದ್ಧ FIR
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಇಂದು ಡಿವೈಎಸ್ಪಿ ಆಗಿ ಚಾರ್ಜ್ ತೆಗೆದುಕೊಳ್ಳಬೇಕಿದ್ದ ಅಧಿಕಾರಿ ದುರಂತ ಸಾವು – ಜೀಪ್‌ ಚಾಲಕನ ವಿರುದ್ಧ FIR

Crime

ಇಂದು ಡಿವೈಎಸ್ಪಿ ಆಗಿ ಚಾರ್ಜ್ ತೆಗೆದುಕೊಳ್ಳಬೇಕಿದ್ದ ಅಧಿಕಾರಿ ದುರಂತ ಸಾವು – ಜೀಪ್‌ ಚಾಲಕನ ವಿರುದ್ಧ FIR

Public TV
Last updated: December 2, 2024 9:35 am
Public TV
Share
3 Min Read
Harshavardhan 3
SHARE

– ವೃತ್ತಿ ಜೀವನದ ಆರಂಭದಲ್ಲೇ ಇದೆಂಥಾ ವಿಧಿಯಾಟ?
– ಮೊದಲ ಪ್ರಯತ್ನದಲ್ಲೇ ಯುಪಿಎಸ್‌ಸಿ ಪಾಸ್ ಮಾಡಿದ್ದ ಹರ್ಷಬರ್ದನ್‌

ಹಾಸನ: ಜೀಪ್‌ ಪಲ್ಟಿಯಾಗಿ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷಬರ್ದನ್ ಸಾವಿಗೀಡಾದ ಘಟನೆ ಪ್ರಕರಣ ಸಂಬಂಧ ಹಾಸನ ಗೊರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೀಪ್‌ ಚಾಲಕ ಮಂಜೇಗೌಡ ವಿರುದ್ಧ ಎಫ್‌ಐಆರ್‌ (FIR) ದಾಖಲಾಗಿದೆ.

ಹೌದು. ಕೆಲ ದಿನಗಳ ಹಿಂದಷ್ಟೇ ಪೊಲೀಸ್ ಅಕಾಡೆಮಿಲ್ಲಿ ತರಬೇತಿ ಮುಗಿಸಿ ಕರ್ತವ್ಯಕ್ಕೆ ಹಾಜರಾಗುವ ವೇಳೆ ಯುವ ಐಪಿಎಸ್ ಅಧಿಕಾರಿ ಸಾವನ್ನಪ್ಪಿದ್ದಾರೆ. ಮೈಸೂರಿನಿಂದ (Mysuru) ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಬರುತ್ತಿದ್ದ ವೇಳೆ ಜೀಪ್ ಟಯರ್ ಸಿಡಿದು ವಾಹನ ಪಲ್ಟಿಯಾಗಿ ತೀವ್ರವಾಗಿ ಗಾಯಗೊಂಡಿದ್ದ 26 ವರ್ಷದ ಹರ್ಷಬರ್ದನ್ ಚಿಕಿತ್ಸೆ ಫಲಕಾರಿಯಾಗದೇ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಯುವ ಐಪಿಎಸ್ ಅಧಿಕಾರಿಯನ್ನು (IPS Officer) ಉಳಿಸಿಕೊಳ್ಳಲು ಹಿರಿಯ ಪೊಲೀಸ್ ಅಧಿಕಾರಿಗಳು ಶತಾಯಗತಾಯ ಹೋರಾಟ ನಡೆಸಿದರು ವಿಧಿ ಮೇಲಾಟ ನಡೆಸಿದೆ.

Harshavardhan 4

ಸಾವು ಎಲ್ಲಿ ಹೇಗೆ ಬರುತ್ತೆ? ಅಂತ ಒಂದು ಸಣ್ಣ ಸುಳಿವು ಆ ಯಮರಾಯ ಕೊಡಲ್ಲ. ಧೊಪ್ಪನೇ ಅಂತ ಜವರಾಯ ಎದುರುಗಡೆ ಬಂದು ಬಿಡ್ತಾನೆ. ಈ ಫೋಟೋದಲ್ಲಿರುವವರ ಹೆಸರು ಹರ್ಷಬರ್ದನ್ ಪ್ರೊಬೆಷನರಿ ಐಪಿಎಸ್ ಅಧಿಕಾರಿ. ಡ್ಯೂಟಿಗೆ ರಿಪೋರ್ಟ್ ಮಾಡಲು ಮೈಸೂರಿನಿಂದ ಹಾಸನಕ್ಕೆ ಬರುತ್ತಿದ್ದ ವೇಳೆ ನಡೆದ ಭೀಕರ ಅಪಘಾತದಲ್ಲಿ ದಾರುಣ ಅಂತ್ಯ ಕಂಡಿದ್ದಾರೆ. ವೃತ್ತಿ ಜೀವನದ ಆರಂಭದಲ್ಲೇ 25 ವರ್ಷದ ಹರ್ಷಬರ್ಧನ್ ಜೀವನದಲ್ಲಿ ವಿಧಿಯಾಟ ಕ್ರೂರ ನರ್ತನವಾಡಿದ್ದಾನೆ.

Harshavardhan 2

ಹಾಸನನದ ಕಿತ್ತಾನೆ ಗ್ರಾಮದ ಬಳಿ ನಡೆದ ಅಪಘಾತದಲ್ಲಿ ಯುವ ಅಧಿಕಾರಿ ಹರ್ಷಬರ್ದನ್ ದುರಂತ ಅಂತ್ಯ ಕಂಡಿದ್ದಾರೆ. ಅವಘಾತದಲ್ಲಿ ತಲೆ ತೀವ್ರವಾಗಿ ಗಾಯಗೊಂಡ ಹರ್ಷಬರ್ದನ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹಾಸನದ ಎಸ್‌ಪಿ ಕಚೇರಿಯಲ್ಲಿ ಅಧಿಕಾರ ಸ್ವೀಕಾರಕ್ಕೆ ಆಗಮಿಸುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಮೈಸೂರಿನ ಪೊಲೀಸ್ ಅಕಾಡೆಮಿಯಿಂದ ಹಾಸನದ ಕಡೆ ಬರುತ್ತಿದ್ದ ವೇಳೆ ಪೊಲೀಸ್ ಜೀಪು ಅಪಘಾತಕ್ಕೀಡಾಗಿದೆ. ಐಪಿಎಸ್ ವೃತ್ತಿ ಜೀವನ ಆರಂಭಿಸಿದ ಮೊದಲ ದಿನವೇ ಹರ್ಷಬರ್ದನ್ ಅಸುನೀಗಿದ್ದಾರೆ.

ಹರ್ಷಬರ್ಧನ್ ನಿನ್ನೆಯಷ್ಟೇ ಮೈಸೂರಿನ ಪೊಲೀಸ್ ಅಕಾಡೆಮಿಯಲ್ಲಿ ಟ್ರೇನಿಂಗ್ ಮುಗಿಸಿದ್ದರು. ಪ್ರೊಬೆಷನರಿ ಐಪಿಎಸ್ ಅಧಿಕಾರಿಯಾಗಿ ಇವತ್ತು ಹಾಸನದಲ್ಲಿ ಕರ್ತವ್ಯಕ್ಕೆ ಹಾಜರಾಗಬೇಕಿತ್ತು. ಡಿವೈಎಸ್‌ಪಿಯಾಗಿ ಚಾರ್ಜ್ ತೆಗೆದುಕೊಳ್ಳಬೇಕಿತ್ತು. ಐಜಿಪಿ ಬೋರಲಿಂಗಯ್ಯ ರಿಪೋರ್ಟ್ ಮಾಡಿಕೊಂಡು ಹಾಸನಕ್ಕೆ ಜೀಪ್‌ನಲ್ಲಿ ಬರುತ್ತಿದ್ದರು. ಇನ್ನೇನು ಕೆಲವೇ ನಿಮಿಷಗಳಲ್ಲಿ ಹಾಸನ ತಲುಪಬೇಕು ಅನ್ನುವಷ್ಟರಲ್ಲಿ ದುರಂತ ಸಂಭವಿಸಿದೆ.

Harshavardhan

ಹಾಸನದ ಕಿತ್ತಾನೆ ಬಳಿ ಸಂಜೆ 4.30ರ ವೇಳೆಗೆ ಜೀಪ್‌ನ ಟೈರ್ ಸ್ಫೋಟಗೊಂಡಿದೆ. ಪರಿಣಾಮ ಜೀಪ್ ಮೂರು ಸುತ್ತು ಉರುಳಿದೆ. ಪಲ್ಟಿಯಾದ ರಭಸಕ್ಕೆ ಜೀಪ್ ನಜ್ಜುಗುಜ್ಜಾಗಿದೆ. ಅದರಲ್ಲಿ ಪ್ರಯಾಣಿಸುತ್ತಿದ್ದ ಹರ್ಷಬರ್ಧನ್ ತಲೆಗೆ ಹಾಗೂ ದೇಹದ ಇನ್ನಿತರ ಭಾಗಕ್ಕೆ ತೀವ್ರವಾಗಿ ಪೆಟ್ಟುಬಿದ್ದು ತೀವ್ರ ರಕ್ತಸ್ರಾವ ಆಗಿದೆ. ಚಾಲಕ ಮಂಜೇಗೌಡ ಎಂಬುವರಿಗೂ ಗಾಯಗಳಾಗಿವೆ. ಸ್ಥಳೀಯರು ಕೂಡಲೇ ರಕ್ತಸ್ರಾವವಾಗಿ ಬಿದ್ದಿದ್ದ ಅಧಿಕಾರಿ ಮತ್ತು ಚಾಲಕನನ್ನು 108 ಅಂಬುಲೆನ್ಸ್‌ ಮೂಲಕ ಆಸ್ಪತ್ರೆಗೆ ರವಾನಿಸಿದ್ದಾರೆ.

ವೈದ್ಯರು ನಿರಂತರ ಚಿಕಿತ್ಸೆ ನೀಡಿದರೂ, ಹರ್ಷಬರ್ಧನ್ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಾಣಲಿಲ್ಲ. ಬದಲಾಗಿ ಕ್ಷಣಕ್ಷಣಕ್ಕೂ ಆರೋಗ್ಯ ಹದಗೆಡುತ್ತಿತ್ತು. ಪರಿಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಒಂದು ಹಂತದಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಜೀರೋ ಟ್ರಾಫಿಕ್‌ನಲ್ಲಿ ಬೆಂಗಳೂರಿಗೆ ಕರೆದೊಯ್ಯುವ ಚಿಂತನೆ ಮಾಡಿ ಆಂಬ್ಯುಲೆನ್ಸ್ ಸಹ ಕರೆಸಲಾಗಿತ್ತು. ಏನೆಲ್ಲ ಪ್ರಯತ್ನ ಮಾಡಿದರೂ ವಿಧಿಯಾಟದ ಮುಂದೆ ಏನೂ ನಡೀಲಿಲ್ಲ. ಚಿಕಿತ್ಸೆ ಫಲಕಾರಿಯಾಗದೇ ಹರ್ಷಬರ್ದನ್‌ ಪ್ರಾಣಪಕ್ಷಿ ಹಾರಿಹೋಗಿದೆ.

ಮೊದಲ ಪ್ರಯತ್ನದಲ್ಲೇ ಯುಪಿಎಸ್‌ಸಿ ಪಾಸ್:
ಅಂದ್ಹಾಗೆ ಐಎಎಸ್, ಐಪಿಎಸ್ ಆಗಬೇಕೆನ್ನುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಕನಸು. ಯುಪಿಎಸ್‌ಸಿ ಪಾಸಾಗೊದು ಅಷ್ಟೊಂದು ಸುಲಭವಲ್ಲ. ಅದಕ್ಕೆ ತಕ್ಕಂತೆ ಗುರಿ ಇರಬೇಕು. ಛಲ ಬೇಕು. ಹರ್ಷಬರ್ದನ್‌ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದರು. ಹಗಲು ರಾತ್ರಿ ಎನ್ನದೇ ಓದಿ ಮೊದಲ ಪ್ರಯತ್ನದಲ್ಲೇ ಯುಪಿಎಸ್‌ಸಿ ಪಾಸ್ ಮಾಡಿದ್ದರು. ಮೂಲತಃ ಬಿಹಾರದ ಹರ್ಷಬರ್ದನ್‌ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ವಾಸವಾಗಿದ್ದರು. ಮಧ್ಯಪ್ರದೇಶದಲ್ಲಿ ಎಂಜಿನಿಯರಿಂಗ್ ಪದವಿ ಪಡೆದು 2022-23ರ ಐಪಿಎಸ್ ಬ್ಯಾಚ್‌ನಲ್ಲಿ 153ನೇ ರ‍್ಯಾಂಕ್ ಪಡೆದು ತೇರ್ಗಡೆ ಹೊಂದಿದ್ದರು. ಕರ್ನಾಟಕ ಕೇಡರ್‌ನಲ್ಲಿ ರಾಜ್ಯಕ್ಕೆ ಆಯ್ಕೆಯಾಗಿದ್ದರು. ಮೃತರ ತಂದೆ ಕೂಡ ಐಎಎಸ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ನವೆಂಬರ್ 4ರಿಂದ ಪೊಲೀಸ್ ತರಬೇತಿ ಶುರುವಾಗಿ ಟ್ರೇನಿಂಗ್ ಮುಗಿಸಿ ಇವತ್ತು ಡಿವೈಎಸ್‌ಪಿಯಾಗಿ ಅಧಿಕಾರ ವಹಿಸಿಕೊಳ್ಳಬೇಕಿತ್ತು. ಆದರೆ ಅಧಿಕಾರ ವಹಿಸಿಕೊಳ್ಳುವ ಮುನ್ನವೇ ಯಮನ ಅಟ್ಟಹಾಸಕ್ಕೆ ಬಲಿಯಾಗಿದ್ದಾರೆ. ಇತ್ತ ಮಗನ ಸಾವಿನಿಂದ ಪೋಷಕರಿಗೆ ಬರಸಿಡಿಲು ಬಡಿದಂತಾಗಿದೆ. ದೊಡ್ಡ ಅಧಿಕಾರಿಯಾಗಿ ಹೆಸರು ಮಾಡಬೇಕೆನ್ನುವ ಕನಸು ಕಂಡು ಅದೇ ದಾರಿಯಲ್ಲಿದ್ದ ಹರ್ಷಬರ್ಧನ್ ದುರಂತ ಅಂತ್ಯ ಕಂಡಿದ್ದಾರೆ.

TAGGED:accidentHarshavardhanhassanIPS officerMysuru Hospitalpoliceಮೈಸೂರುರಸ್ತೆ ಅಪಘಾತಹಾಸನ ಹರ್ಷಬರ್ದನ್‌
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

Vijayapura Murder
Crime

ಪತ್ನಿ ಕೊಂದು ಮನೆಯಲ್ಲೇ ಹೂತಿದ್ದ ಕೇಸ್ – ಕೊಲೆ ಬಳಿಕ ನಾಪತ್ತೆಯಾಗಿರುವ ನಾಟಕವಾಡಿ ದೂರು ನೀಡಿದ್ದ ಹಂತಕ

Public TV
By Public TV
12 minutes ago
bill gates
Latest

ಎಪ್‌ಸ್ಟೈನ್‌ ವಿವಾದ; ಇಂಡಿಯಾ AI ಇಂಪ್ಯಾಕ್ಟ್ ಶೃಂಗಸಭೆಗೆ ಬಿಲ್ ಗೇಟ್ಸ್ ಗೈರು

Public TV
By Public TV
27 minutes ago
Mantralaya
Districts

ಅದ್ದೂರಿಯಾಗಿ ನಡೆದ ಗುರುರಾಘವೇಂದ್ರ ಸ್ವಾಮಿಗಳ 405ನೇ ಪಟ್ಟಾಭಿಷೇಕ ಮಹೋತ್ಸವ

Public TV
By Public TV
44 minutes ago
karwar accident
Latest

ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಸರಣಿ ಅಪಘಾತ – ವಿದೇಶಿ ಪ್ರಜೆಗಳು ಸೇರಿ 24 ಜನರಿಗೆ ಗಾಯ

Public TV
By Public TV
1 hour ago
Valmiki Prasannananda Puri Swamiji heart attack
Karnataka

ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತ – ಆಸ್ಪತ್ರೆಗೆ ದಾಖಲು

Public TV
By Public TV
2 hours ago
Hanuman Statue Texas
Latest

ಅತಿಕ್ರಮಣ ನಿಲ್ಲಿಸಿ: ಅಮೆರಿಕದ ಟೆಕ್ಸಾಸ್‌ನಲ್ಲಿ ಹನುಮನ ಪ್ರತಿಮೆ ಪ್ರತಿಷ್ಠಾಪನೆಗೆ MAGA ನಾಯಕ ವಿರೋಧ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?