ಕೊಪ್ಪಳ: ಹಿಂದೂ- ಮುಸ್ಲಿಮರ (Hindu Muslims) ನಡುವೆ ಸೌಹಾರ್ದಕ್ಕೆ ಧಕ್ಕೆ ತರುವ ರೀತಿಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ (Koppala Police Station) ಎಫ್ಐಆರ್ ದಾಖಲಾಗಿದೆ.
ಅನ್ಯಕೋಮಿನ ಯುವಕನಿಂದ ಆಗಸ್ಟ್ 3 ರಂದು ಕೊಪ್ಪಳದ ಕುರುಬರ ಓಣಿಯ ಗವಿಸಿದ್ದಪ್ಪ ನಾಯಕ ಕೊಲೆ ಆಗಿತ್ತು. ಸಂತ್ರಸ್ತ ಕುಟುಂಬದವರಿಗೆ ಸಾಂತ್ವನ ಹೇಳಲು ಆ.10ರಂದು ಕೊಪ್ಪಳಕ್ಕೆ ಬಂದಿದ್ದ ಯತ್ನಾಳ್ ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನ (Muslims Womens) ಮದುವೆಯಾದರೆ 5 ಲಕ್ಷ ರೂ. ಕೊಡುವ ಕಾರ್ಯಕ್ರಮ ತರೋದಾಗಿ ಹೇಳಿದ್ದರು. ಈ ಮೂಲಕ ಕೊಲೆ ಮಾಡುವ ಮುಸ್ಲಿಮರಿಗೆ ಉತ್ತರ ನೀಡಬೇಕಿದೆ. ಸದ್ಯ ರಾಜ್ಯದಲ್ಲಿ ಸಾಬರ ಸರ್ಕಾರವಿದೆ ಎಂದು ಹೇಳಿಕೆ ನೀಡಿದ್ದರು. ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದನ್ನೂ ಓದಿ: ಅಗ್ನಿ 5 ಖಂಡಾಂತರ ಕ್ಷಿಪಣಿ ಪರೀಕ್ಷೆ ಯಶಸ್ವಿ
ಈ ಹಿನ್ನೆಲೆ ಕೊಪ್ಪಳದ ಕುವೆಂಪು ನಗರದ ನಿವಾಸಿ ಅಬ್ದುಲ್ ಕಲಾಂ ದೂರು ನೀಡಿದ್ದು ಯತ್ನಾಳ್ ಹೇಳಿಕೆಯಿಂದ ಎರಡು ಧರ್ಮಗಳ ನಡುವೆ ದ್ವೇಷ ಬೆಳೆಯುವಂತಾಗಿದೆ. ಮುಸ್ಲಿಂ ಮಹಿಳೆಯರನ್ನ ಕೀಳಾಗಿ, ಕೆಟ್ಟ ಮನಸ್ಥಿತಿಯಿಂದ ನೋಡುವುದಲ್ಲದೇ ಅವರನ್ನು ಅವಮಾನ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ವಿಧಾನ ಪರಿಷತ್ನಲ್ಲಿ ಬಾಲ್ಯವಿವಾಹ, ದೇವದಾಸಿ ಪದ್ಧತಿ ನಿಷೇಧ ಕಾಯ್ದೆ ಪಾಸ್
ಅಬ್ದುಲ್ ರಜಾಕ್ಗೆ ಹಿಂಬರಹ
ಇದೇ ವಿಚಾರವಾಗಿ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ದೂರು ನೀಡಲು ಬೆಂಗಳೂರಿನ ಅಬ್ದುಲ್ ರಜಾಕ್ ಇಂದು ಕೊಪ್ಪಳಕ್ಕೆ ಬಂದಿದ್ದರು. ಜೊತೆಗೆ ಯತ್ನಾಳ್ ವಿರುದ್ಧ ಕೊಪ್ಪಳ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ಆದರೆ, ಪೊಲೀಸರು, ಈಗಾಗಲೇ ಈ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯರು ನೀಡಿದ ದೂರು ಆಧರಿಸಿ, ಎಫ್ಐಆರ್ ಮಾಡಲಾಗಿದೆ. ಏನಾದರೂ ಹೇಳಿಕೆ ಇದ್ದರೇ ಅದೇ ಆರೋಪ ಪಟ್ಟಿಯಲ್ಲಿ ಸೇರಿಸಲಾಗುವುದು ಎಂದು ಹಿಂಬರಹ ನೀಡಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಇಮ್ಯೂನೋಥೆರಪಿಗೆ ಬಳಸುವ ಔಷಧ & ರೇಡಿಯೋಥೆರಪಿ ಉಪಕರಣಗಳ ಮೇಲಿನ ಕಸ್ಟಮ್ಸ್ ಸುಂಕಕ್ಕೆ ವಿನಾಯಿತಿಗೆ ಮನವಿ