ಬೆಂಗಳೂರು: ನಟ ಕಮಲ್ ಹಾಸನ್ (Kamal Haasan) ಭಾವಚಿತ್ರಕ್ಕೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದ ಕನ್ನಡ ಪರ ಸಂಘಟನೆಯ ಇಬ್ಬರ ವಿರುದ್ಧ ಎಫ್ಐಆರ್ (FIR) ದಾಖಲಾಗಿದೆ.
ನಟ ಕಮಲ್ ಹಾಸನ್ ಅವರ ತಮಿಳಿನಿಂದಲೇ ಕನ್ನಡ ಹುಟ್ಟಿದ್ದು ಎಂಬ ಹೇಳಿಕೆ ರಾಜ್ಯದಲ್ಲಿ ತ್ರೀವ ಆಕ್ರೋಶ ಹುಟ್ಟುಹಾಕಿದೆ. ಹೇಳಿಕೆ ಖಂಡಿಸಿ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ಬಸವೇಶ್ವರ ನಗರದ (Basaveshwar Nagar) ಪವಿತ್ರ ಪ್ಯಾರಡೈಸ್ ಬಳಿ ನಟನ ಭಾವಚಿತ್ರಕ್ಕೆ ಬೆಂಕಿ ಹಾಕಿ ಪ್ರತಿಭಟಿಸಿದ್ದರು.ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಗುಡ್ಡ ಕುಸಿತ, ಪ್ರಾಣಹಾನಿ – ರಕ್ಷಣಾ ಕಾರ್ಯಕ್ಕೆ ಯು.ಟಿ ಖಾದರ್ ಸೂಚನೆ
ಪೊಲೀಸರ ಅನುಮತಿ ಪಡೆಯದೇ ರಸ್ತೆಯಲ್ಲಿ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿರುವ ಆರೋಪದ ಬೆನ್ನಲ್ಲೇ ಇದೀಗ ಕನ್ನಡ ಪರ ಸಂಘಟನೆಯ ಕಾರ್ಯಕರ್ತರಾದ ರವಿಕುಮಾರ್ ಹಾಗೂ ಬಸವೇಶ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸದ್ಯ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು, ನೋಟಿಸ್ ಕೊಟ್ಟು ಕಳುಹಿಸಿದ್ದಾರೆ.
ಏನಿದು ವಿವಾದ?
ಮೇ 27ರಂದು `ಥಗ್ ಲೈಫ್’ (Thug Life) ಸಿನಿಮಾದ ಪ್ರಚಾರಕ್ಕಾಗಿ ಚಿತ್ರತಂಡ ಬೆಂಗಳೂರಿಗೆ ಆಗಮಿಸಿತ್ತು. ಸಿನಿಮಾದ ನಾಯಕ ಕಾಲಿವುಡ್ ನಟ ಕಮಲ್ ಹಾಸನ್ ಅವರು ಕೂಡ ಆಗಮಿಸಿದ್ದರು. ಈ ವೇಳೆ ಕಮಲ್ ಹಾಸನ್ `ತಮಿಳಿನಿಂದ ಕನ್ನಡ ಹುಟ್ಟಿದ್ದು’ ಎಂದು ಹೇಳಿಕೆ ನೀಡುವ ಮೂಲಕ ವಿವಾದ ಹುಟ್ಟುಹಾಕಿದ್ದರು.ಇದನ್ನೂ ಓದಿ: ಕಮಲ್ ಹಾಸನ್ ಬ್ಯಾನರ್ಗೆ ಬೆಂಕಿ ಹಚ್ಚಿ ಪ್ರತಿಭಟನೆ