ಬೆಂಗ್ಳೂರಲ್ಲಿ ಇಬ್ಬರು ಪೊಲೀಸರ ವಿರುದ್ಧ ಎಫ್‍ಐಆರ್!

Public TV
1 Min Read
Police FIR

ಬೆಂಗಳೂರು: ಇಬ್ಬರು ಪೊಲೀಸರ ಮೇಲೆಯೇ ಬೆಂಗಳೂರಿನ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹದೇವಪುರ ಎಎಸ್‍ಐ ಅಮೃತೇಶ್, ಮುಖ್ಯಪೇದೆ ಜೈಕಿರಣ್ ಎಂಬವರ ವಿರುದ್ಧ ಪ್ರಕಾಶ್ ದೂರು ದಾಖಲಿಸಿದ್ದಾರೆ.

ಇಸ್ಪೀಟ್ ಆಟ ಆಡುತ್ತಿದ್ದ ಆರೋಪದ ಮೇಲೆ ನನ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆ ಬಳಿಕ ಪೊಲೀಸರು ತನ್ನ ಮೇಲೆ ಹಲ್ಲೆ ಮಾಡಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಪೊಲೀಸರ ಹಲ್ಲೆ ಖಂಡಿಸಿ ಪ್ರಕಾಶ್ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದೆ. ಆದ್ರೆ ಈ ದೂರು ಹಿಂಪಡೆಯುವಂತೆ ಮತ್ತೆ ಪೊಲೀಸರು ಬೆದರಿಸಿದ್ದರು ಅಂತ ಪ್ರಕಾಶ್ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

ಇದೀಗ ಪೊಲೀಸರ ವರ್ತನೆ ಖಂಡಿಸಿ ಪ್ರಕಾಶ್ ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೋರ್ಟ್ ಸೂಚನೆ ಮೇರೆಗೆ ಇಬ್ಬರು ಪೊಲೀಸರ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *