Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿ.ಟಿ ರವಿ ದ್ವೇಷ ಭಾಷಣ ಮಾಡಿದ್ದಕ್ಕೆ FIR ದಾಖಲು – ರಾಮಲಿಂಗಾರೆಡ್ಡಿ ಸಮರ್ಥನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿ.ಟಿ ರವಿ ದ್ವೇಷ ಭಾಷಣ ಮಾಡಿದ್ದಕ್ಕೆ FIR ದಾಖಲು – ರಾಮಲಿಂಗಾರೆಡ್ಡಿ ಸಮರ್ಥನೆ

Bengaluru City

ಸಿ.ಟಿ ರವಿ ದ್ವೇಷ ಭಾಷಣ ಮಾಡಿದ್ದಕ್ಕೆ FIR ದಾಖಲು – ರಾಮಲಿಂಗಾರೆಡ್ಡಿ ಸಮರ್ಥನೆ

Public TV
Last updated: September 11, 2025 3:24 pm
Public TV
Share
3 Min Read
Ramalinga Reddy
SHARE

– ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಮಾಡಿದ್ದಕ್ಕೆ ಬಿಜೆಪಿ ಗಲಾಟೆ

ಬೆಂಗಳೂರು: ಬಿಜೆಪಿ ನಾಯಕ ಸಿ.ಟಿ ರವಿ (CT Ravi) ದ್ವೇಷ ಭಾಷಣ ಮಾಡಿದ್ದಕ್ಕೆ ಎಫ್‌ಐಆರ್ ದಾಖಲು ಮಾಡಲಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಎಫ್‌ಐಆರ್ (FIR) ಹಾಕಿರೋದನ್ನ ಸಮರ್ಥನೆ ಮಾಡಿಕೊಂಡಿದ್ದಾರೆ.

ಸಿ.ಟಿ ರವಿ ಮೇಲೆ ಎಫ್‌ಐಆರ್ ಆಗಿರೋ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸಿ.ಟಿ ರವಿ ಅವರ ಮಾತು ಕೇಳಿದ್ದೇನೆ. ತೊಡೆ ಮುರಿಯೋದು, ತಲೆ ತೆಗೆಯೋದು ಅಂತೆಲ್ಲ ಮಾತಾಡಿದ್ದಾರೆ. ರವಿ ಅವರು ಸಚಿವರಾಗಿದ್ದವರು,ಶಾಸಕರು. ಅಂತಹವರ ಬಾಯಿಂದ ಇಂತಹ ಪದ ಬಳಕೆ ಸರಿನಾ? ಜನರೇ ಇದನ್ನ ತೀರ್ಮಾನ ಮಾಡಲಿ. ಹಾಗೆ ದ್ವೇಷ ಭಾಷಣ ಮಾಡಿದ್ದಕ್ಕೆ ಕೇಸ್ ಹಾಕಿದ್ದಾರೆ. ಅದರಲ್ಲಿ ತಪ್ಪೇನು ಎಂದು ಎಫ್‌ಐಆರ್ ಸಮರ್ಥನೆ ಮಾಡಿಕೊಂಡರು. ಇದನ್ನೂ ಓದಿ: ಸಿ.ಟಿ ರವಿ ಸಂಸ್ಕೃತಿ ಬಗ್ಗೆ ಜನರಿಗೆ ಗೊತ್ತಿದೆ – ಡಿಕೆಶಿ

CT Ravi

ಇದೇ ವೇಳೆ ಸಿಎಂ ಪಾಕಿಸ್ತಾನ ಹೋಗಲಿ ಎಂಬ ವಿಪಕ್ಷ ನಾಯಕ ಅಶೋಕ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಅಶೋಕ್ ಹೀಗೆ ಮಾತಾಡೋದು ಸರಿಯಲ್ಲ. ಅವರ ಹೇಳಿಕೆ ವಿಪಕ್ಷ ನಾಯಕನ ಸ್ಥಾನಕ್ಕೆ ಗೌರವ ತರೋದಿಲ್ಲ. ಪ್ರಧಾನಿ ಮೋದಿ ಅವರು ಅಹ್ವಾನ ಇಲ್ಲದೆ ಪಾಕಿಸ್ತಾನಕ್ಕೆ ಹೋದರು, ಯಾಕೆ ಹೋದ್ರು? ಆಪರೇಷನ್ ಸಿಂಧೂರದಲ್ಲಿ ಇಡೀ ದೇಶ ಮೋದಿ ಪರ ಇತ್ತು. ಆದರೆ ಇವರು ರಾತ್ರೋರಾತ್ರಿ ಯುದ್ಧ ನಿಲ್ಲಿಸಿದ್ರು. ಪಾಕಿಸ್ತಾನವನ್ನ ಭೂಪಟದಲ್ಲಿ ಇಲ್ಲದಂತೆ ಮಾಡಬಹುದಿತ್ತು. ಯಾಕೆ ಮಾಡಲಿಲ್ಲ? ಅಶೋಕ್ ಹೀಗೆ ಮಾತಾಡೋದು ಸರಿಯಲ್ಲ. ಅಶೋಕ್ ತಮ್ಮ ಹೇಳಿಕೆ ವಾಪಸ್ ಪಡೆಯಲಿ ಎಂದು ಆಗ್ರಹಿಸಿದರು. ಇದನ್ನೂ ಓದಿ: ನನ್ನ ರಕ್ತ ಬೆರಕೆಯಲ್ಲ, ಪ್ಯೂರ್‌ ಹಿಂದುತ್ವ – ಸಿಟಿ ರವಿ

ಮುಂದಿನ 10 ವರ್ಷ ಬಿಜೆಪಿ ಅಧಿಕಾರದಲ್ಲಿ ಇರುತ್ತೆ ಎಂಬ ಅಶೋಕ್ ಹೇಳಿಕೆಗೆ ತಿರುಗೇಟು ಕೊಟ್ಟ ಅವರು, ಬಿಜೆಪಿ ಇನ್ನು 10 ವರ್ಷ ವಿಪಕ್ಷದಲ್ಲೇ ಇರುತ್ತದೆ. ಕೇಂದ್ರದಲ್ಲೂ ಬಿಜೆಪಿ ವಿಪಕ್ಷಕ್ಕೆ ಬರಲಿದೆ. ಬಿಜೆಪಿಯವರಿಗೆ ಅಧಿಕಾರ ಮಾತ್ರ ಮುಖ್ಯ. ನಾವು ಜನರ ಕೆಲಸ ಮಾಡುತ್ತೇವೆ. ಬಿಜೆಪಿ ಅವರು ಧರ್ಮ, ದೇವರ ಹೆಸರಿನಲ್ಲಿ ಮತ ಕೇಳುತ್ತಾರೆ. 10 ವರ್ಷ ಬಿಜೆಪಿ ಅವರು ವಿಪಕ್ಷದಲ್ಲಿ ಇರುತ್ತಾರೆ ಎಂದು ಭವಿಷ್ಯ ನುಡಿದರು. ಇದನ್ನೂ ಓದಿ: ಮದ್ದೂರಿನಲ್ಲಿ ಪ್ರಚೋದನಕಾರಿ ಭಾಷಣ – ಸಿ.ಟಿ ರವಿ ವಿರುದ್ಧ ಕೇಸ್ ದಾಖಲು

ಇನ್ನು ಮದ್ದೂರು ಗಲಾಟೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಬೆನ್ನಲ್ಲೇ ಈ ನೆಪ ಇಟ್ಟುಕೊಂಡು ಬಿಜೆಪಿ ಮದ್ದೂರಿನಂತಹ ಘಟನೆಗಳನ್ನ ಮಾಡಿಸುತ್ತಿದ್ದಾರೆ. ಮದ್ದೂರಿನಲ್ಲಿ ಗಣೇಶೋತ್ಸವದ ಮೇಲೆ ಕಲ್ಲು ತೂರಾಟ ಮಾಡಿದರು. ಈಗಾಗಲೇ ಕಲ್ಲು ಹೊಡೆದವರ ಮೇಲೆ ಕೇಸ್ ಹಾಕಲಾಗಿದೆ. ಕಾನೂನು ಪ್ರಕಾರ ಸರ್ಕಾರ ಕ್ರಮ ತೆಗೆದುಕೊಂಡಿದೆ. ಬಿಜೆಪಿ ಎಲ್ಲಾದರೂ ಇಂತಹ ಘಟನೆ ಆಗಲಿ ಅಂತ ಕಾಯುತ್ತಿರುತ್ತಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಬೀದರ್‌ನಲ್ಲಿ ಧಾರಾಕಾರ ಮಳೆ – ಜನಜೀವನ ಸಂಪೂರ್ಣ ಅಸ್ತವ್ಯಸ್ತ

ಸ್ವಾತಂತ್ರ‍್ಯ ಮುಂಚೆಯೂ ಕೋಮು ಗಲಭೆಗಳು ಆಗಿತ್ತು. ಈಗ ಮದ್ದೂರಿನಲ್ಲಿ ಬಿಜೆಪಿ ಅವರು ಬೆಂಕಿಗೆ ತುಪ್ಪ ಹಾಕೋ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಅರಾಜಕತೆ ಸೃಷ್ಟಿ ಮಾಡೋ ಕೆಲಸ ಮಾಡುತ್ತಿದ್ದಾರೆ. ಕಲ್ಲು ಹೊಡೆದವರ ಮೇಲೆ ಕ್ರಮ ಆಗದೇ ಇದ್ದರೆ ಬಿಜೆಪಿ ಮಾತಾಡಬಹುದಿತ್ತು. ಬಾನು ಮುಷ್ತಾಕ್ ಅವರನ್ನ ದಸರಾಗೆ ಕರೆಯಬಾರದು ಅಂತ ಇಂತಹ ವಿಷಯ ಶುರುವಾಗಿದೆ. 1924ರಲ್ಲಿ ಒಡೆಯರ್ ಅವರು ಮಿರ್ಜಾ ಇಸ್ಮಾಯಿಲ್ ಅವರನ್ನ ಕೂರಿಸಿಕೊಂಡು ದಸರಾ ದಲ್ಲಿ ಭಾಗಿಯಾಗಿದ್ರು. ಆಗ ಮೈಸೂರು, ಮಂಡ್ಯ ಬೆಂಗಳೂರಿನಲ್ಲಿ ಗಲಾಟೆ ಮಾಡಿಸಿದ್ದರು. ಈಗ ಬಾನು ಮುಷ್ತಾಕ್ ನೆಪ ಇಟ್ಟುಕೊಂಡು ಬಿಜೆಪಿ ಗಲಾಟೆ ಮಾಡಿಸುತ್ತಿದ್ದಾರೆ. ಇದು ಖಂಡನೀಯ. ಬಿಜೆಪಿ ಅವರು ಬೆಂಕಿ ಹಚ್ಚೋ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ನೇಪಾಳದಲ್ಲಿ ಸಿಲುಕಿದೆ ಹೊಸಪೇಟೆಯ ಕುಟುಂಬ

TAGGED:bengalurubjpcongressCT RavimaddurRamalinga reddyಕಾಂಗ್ರೆಸ್ಬಿಜೆಪಿಬೆಂಗಳೂರುಮದ್ದೂರುರಾಮಲಿಂಗಾರೆಡ್ಡಿಸಿಟಿ ರವಿ
Share This Article
Facebook Whatsapp Whatsapp Telegram

Cinema news

Sai Pallavi
ಎಂ.ಎಸ್ ಸುಬ್ಬಲಕ್ಷ್ಮಿ ಬಯೋಪಿಕ್‌ನಲ್ಲಿ ಸಾಯಿಪಲ್ಲವಿ ನಟನೆ ಫಿಕ್ಸ್‌
Bollywood Cinema Latest Top Stories
Sohail Khan
ಮಾಡಿದ ತಪ್ಪಿಗೆ ಕ್ಷಮೆ ಕೇಳಿದ ಸಲ್ಮಾನ್ ಖಾನ್ ಸಹೋದರ
Bollywood Cinema Latest
Kichcha Sudeep 2
ಮಸ್ತ್ ಮಲೈಕಾ ಜೊತೆ ಕಿಚ್ಚ ಸಖತ್ ಡಾನ್ಸ್‌
Cinema Latest Sandalwood
Actor Shivamanju
ನಿರ್ದೇಶಕನಾದ ಹಾಸ್ಯ ನಟ ಶಿವಮಂಜು
Cinema Latest Sandalwood Top Stories

You Might Also Like

Pahalgam Terror Attack 2 1
Latest

TRF ಮುನ್ನಡೆಸುತ್ತಿದ್ದ ಪಾಕ್‌ ಉಗ್ರನೇ ಪಹಲ್ಗಾಮ್‌ ನರಮೇಧದ ಮಾಸ್ಟರ್‌ ಮೈಂಡ್‌: ಎನ್‌ಐಎ

Public TV
By Public TV
2 hours ago
Bengaluru Living heart transport
Bengaluru City

ಬೆಂಗ್ಳೂರು ಟ್ರಾಫಿಕ್ ನಡುವೆ ಜೀವಂತ ಹೃದಯ ರವಾನೆ – 7 ನಿಮಿಷದಲ್ಲೇ 10 ಕಿ.ಮೀ ಯಶಸ್ವಿ ಸಾಗಾಟ

Public TV
By Public TV
2 hours ago
Nagalakshmi Choudhary 2
Bengaluru City

ಗರ್ಭಕಂಠ ಕ್ಯಾನ್ಸರ್‌ ತಡೆಗೆ ಉಚಿತ ಲಸಿಕೆ ನೀಡಿ – ಆರೋಗ್ಯ ಸಚಿವರಿಗೆ ಮಹಿಳಾ ಆಯೋಗ ಪತ್ರ

Public TV
By Public TV
3 hours ago
kea
Bengaluru City

ಯುಜಿ ವೈದ್ಯಕೀಯ: ಸ್ಟ್ರೇ ವೇಕೆನ್ಸಿ ಸುತ್ತಿನ ತಾತ್ಕಾಲಿಕ ಫಲಿತಾಂಶ ಪ್ರಕಟ- ಕೆಇಎ

Public TV
By Public TV
3 hours ago
DC office Hassan
Districts

ಹಾಸನ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಮೇಲ್

Public TV
By Public TV
3 hours ago
Hassan Accident
Crime

3 ಬೈಕ್‌ಗಳ ನಡ್ವೆ ಸರಣಿ ಅಪಘಾತ – ಮೂವರು ಯುವಕರ ಕೈ-ಕಾಲು ಮುರಿತ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?