ಚಿಕ್ಕಮಗಳೂರಿನ ಈ ಅರಣ್ಯದಲ್ಲಿ ಬೆಂಕಿ -ಲಕ್ಷಾಂತರ ರೂ. ಮೌಲ್ಯದ ಮರ ನಾಶ!

Public TV
0 Min Read
CKM FIRE 3

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಸಮೀಪದಲ್ಲಿರುವ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಸಾಗುವಾನಿ ಮರ ಸೇರಿದಂತೆ ಇತರೆ ಮರಗಳಿಗೂ ಬೆಂಕಿ ಪಸರಿಸಿ ಲಕ್ಷಾಂತರ ರೂ. ಮೌಲ್ಯದ ಮರ ನಾಶವಾಗಿರುವ ಘಟನೆ ಸಂಭವಿಸಿದೆ.

CKM FIRE 2

ಚಿಕ್ಕಮಗಳೂರು ಜಿಲ್ಲೆಯ ಎನ್‍ಆರ್‍ಪುರ ತಾಲೂಕಿನ ಬಾಳೆಹೊನ್ನೂರಿನ ಮುದುಗುಣಿ ಅರಣ್ಯದಲ್ಲಿ ಬೆಂಕಿ ಕಾಣಿಸಿದೆ. ವಿಷಯ ತಿಳಿಸಿದ್ದರೂ ಸ್ಥಳಕ್ಕೆ ಅರಣ್ಯ ಸಿಬ್ಬಂದಿ ತಡವಾಗಿ ಆಗಮಿಸಿದ್ದಕ್ಕೆ ಸ್ಥಳೀಯರು ಇಲಾಖೆಯ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ.

CKM FIRE 4

ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡ ಮಾಹಿತಿ ಹೊರಬೀಳುತ್ತಿದ್ದಂತೆಯೇ ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಸ್ಥಳಿಯರಿಂದ ಬೆಂಕಿ ನಂದಿಸುವ ಕಾರ್ಯ ಭರದಿಂದ ಸಾಗಿದೆ.

CKM FIRE 6

CKM FIRE 5

CKM FIRE 1

Share This Article
Leave a Comment

Leave a Reply

Your email address will not be published. Required fields are marked *