ಬೆಂಗ್ಳೂರಿನ ನಾಡಕಚೇರಿಗೆ ಬೆಂಕಿ – ನೂರಾರು ದಾಖಲೆಗಳು ಭಸ್ಮ

Public TV
1 Min Read
FIRE 2

ಬೆಂಗಳೂರು: ಇಲ್ಲಿನ ಕೆಂಗೇರಿ ಉಪನಗರದ ನಾಡಕಚೇರಿಗೆ (Nadakacheri) ಬೆಂಕಿ ಬಿದ್ದಿದ್ದು, ನೂರಾರು ದಾಖಲೆಗಳು ಸುಟ್ಟು ಕರಕಲಾಗಿವೆ. ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಸಂಪೂರ್ಣವಾಗಿ ಬೆಂಕಿ ನಂದಿಸಿದ್ದಾರೆ.

FIRE 3

ಏನಿದು ಬೆಂಕಿ ದುರಂತ?
ಕೆಂಗೇರಿ ಉಪನಗರದ ನಾಡಕಚೇರಿ ಆವರಣದ ಪ್ರವೇಶ ದ್ವಾರದ ಬಳಿಯೇ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಇಡೀ ಕಚೇರಿಗೆ ಆವರಿಸಿದೆ. ಬೆಂಕಿ ತೀವ್ರವಾಗಿ ವ್ಯಾಪಿಸಿದ ಹಿನ್ನೆಲೆಯಲ್ಲಿ ನೂರಾರು ದಾಖಲೆಗಳು ಸುಟ್ಟು ಕರಕಲಾಗಿದೆ. ಇದನ್ನೂ ಓದಿ: ಅಧಿಕಾರಕ್ಕಾಗಿ ದೇವರ ಮೊರೆ ಹೋದ ದಳಪತಿ- ಆದಿಚುಂಚನಗಿರಿ ಕ್ಷೇತ್ರಕ್ಕೆ ಹೆಚ್‍ಡಿಕೆ ಭೇಟಿ

FIRE

ಘಟನೆ ಬಳಿಕ ನಾಡಕಚೇರಿ ಸಿಬ್ಬಂದಿ ದೂರು ನೀಡಿದ್ದು, ಕೆಂಗೇರಿ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಓಲ್ಡ್ ಮೈಸೂರೇ ಮೋದಿ ಟಾರ್ಗೆಟ್- ಒಂದೇ ದಿನ 4 ಜಿಲ್ಲೆಗಳಲ್ಲಿ ನಮೋ ಮಿಂಚಿನ ಸಂಚಾರ

ಕಂಪ್ಯೂಟರ್ ರೂಂ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಮುಖ ದಾಖಲೆಗಳನ್ನ ನಾಶಪಡಿಸುವ ಉದ್ದೇಶದಿಂದ ಕಿಡಿಗೇಡಿಗಳು ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗಿದೆ.

Share This Article