– 19 ಜನರಿಗೆ ಗಾಯ
ಚೆನ್ನೈ: ಪಟಾಕಿ ಕಾರ್ಖಾನೆಯಲ್ಲಿ (Firecracker Factory) ಭೀಕರ ಬೆಂಕಿ (Fire) ಅವಘಡ ಉಂಟಾಗಿ 8 ಜನರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ (Tamil Nadu) ಕಾಂಚೀಪುರಂನಲ್ಲಿ (Kancheepuram) ನಡೆದಿದೆ.
ಬುಧವಾರ ಮಧ್ಯಾಹ್ನದ ವೇಳೆ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾರ್ಖಾನೆಯಲ್ಲಿ ಸುಮಾರು 25 ಜನರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ವರದಿಗಳ ಪ್ರಕಾರ ಪಟಾಕಿಗಳನ್ನು ಒಣಗಲು ಬಿಸಿಲಿಗೆ ಹಾಕಿದ್ದಾಗ ಬೆಂಕಿ ಹುಟ್ಟಿಕೊಂಡಿದೆ. ಬಳಿಕ ಬೆಂಕಿ ಇಡೀ ಕಾರ್ಖಾನೆಗೆ ಹರಡಿಕೊಂಡಿದೆ. ಈ ವೇಳೆ ಕಾರ್ಮಿಕರು ಕಾರ್ಖಾನೆಯೊಳಗೆ ಸಿಲುಕಿಕೊಂಡಿದ್ದು, ಹಲವರ ಸಾವು ಸಂಭವಿಸಿದೆ. ಇದನ್ನೂ ಓದಿ: ಉಕ್ರೇನ್ ಶಾಲೆ ಮೇಲೆ ರಷ್ಯಾ ಡ್ರೋನ್ ದಾಳಿ – 3 ಸಾವು
ಘಟನೆಗೆ ಸಂಬಂಧಪಟ್ಟಂತೆ ಅಗ್ನಿಶಾಮಕ ದಳಕ್ಕೆ ಮಾಹಿತಿ ಸಿಗುತ್ತಲೇ ಸಿಬ್ಬಂದಿ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ಘಟನೆಯಲ್ಲಿ 19 ಜನರಿಗೆ ಸುಟ್ಟ ಗಾಯಗಳಗಿದ್ದು, ಅವರ ಪೈಕಿ 11 ಜನರನ್ನು ಕಾಂಚೀಪುರಂನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತರ 8 ಗಾಯಾಳುಗಳನ್ನು ಬೇರೆ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಇದನ್ನೂ ಓದಿ: ಭೂಕಂಪನದ ಮಧ್ಯೆಯೇ ವೈದ್ಯರು ಹೆರಿಗೆ ಮಾಡಿಸಿ ತಾಯಿ, ಮಗುವಿನ ಜೀವ ಉಳಿಸಿದ್ರು!
ಇದೀಗ ಬೆಂಕಿಯನ್ನು ಹತೋಟಿಗೆ ತರಲಾಗಿದ್ದು, ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.