ಬೇಸಿಗೆಯಲ್ಲಿ ಜಾನುವಾರುಗಳಿಗಾಗಿ ಮೇವು ಸಂಗ್ರಹಿಸಿಟ್ಟಿದ್ದ ರೈತರು
ಬಳ್ಳಾರಿ: ಆಕಸ್ಮಿಕ ಬೆಂಕಿಗೆ (Fire) 30 ಹುಲ್ಲಿನ ಬಣವೆಗಳು (Haystacks) ಸುಟ್ಟು ಭಸ್ಮವಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ (Huvinahadagali) ತಾಲೂಕಿನ ಸೋಗಿ ಗ್ರಾಮದಲ್ಲಿ ನಡೆದಿದೆ.
Advertisement
ರೈತರು ತಮ್ಮ ಜಾನುವಾರುಗಳಿಗೆ ಬೇಸಿಗೆಗಾಗಿ ಸುಮಾರು 30 ಬಣವೆಗಳನ್ನ ಸಂಗ್ರಹಿಸಿಟ್ಟಿದ್ದರು. ಬಣವೆಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಅಷ್ಟೂ ಮೇವಿನ ಬಣವೆಗಳು ಸುಟ್ಟು ಹೋಗಿವೆ.
Advertisement
ಬಣವೆ ಇರುವ ಭಾಗದಲ್ಲಿ ಹೊಗೆ ಬರುತ್ತಿರುವುದನ್ನು ಗಮನಿಸಿದ್ದ ರೈತರು (Farmers) ಸ್ಥಳಕ್ಕೆ ಹೋಗುವಷ್ಟರಲ್ಲಿ ಎಲ್ಲಾ ಬಣವೆಗಳಿಗೆ ಬೆಂಕಿ ತಗುಲಿತ್ತು. ಕೂಡಲೇ ರೈತರು ಅಗ್ನಿ ಶಾಮಕ ಠಾಣೆಗೆ ಕರೆ ಮಾಡಿದ್ದರು. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬರುವಷ್ಟರಲ್ಲಿ ಬಣವೆಗಳು ಬೆಂಕಿಗಾಹುತಿಯಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿ ಬಣಗಳ ನಡುವೆ ಏಪ್ರಿಲ್ Vs ಡಿಸೆಂಬರ್ ವಾರ್!
Advertisement
Advertisement
ರೈತರಾದ ರಫಿ, ನಾಗರಾಜ, ಆನಂದ, ಮಂಜವ್ವ, ಕೊಟ್ರೇಶ, ಖಾಜಾಸಾಬ್, ಜಿನ್ನಾಸಾಬ್, ಟಿ.ಬಸವರಾಜ, ನಾಗಪ್ಪ ತಳಕಲ್, ಕಾಗನೂರು ನಾಗರಾಜಪ್ಪ ಸೇರಿ ಒಟ್ಟು ಹತ್ತು ಜನ ರೈತರಿಗೆ ಸೇರಿದ್ದ ಲಕ್ಷಾಂತರ ಬೆಲೆ ಬಾಳುವ ಮೆಕ್ಕೆಜೋಳದ ಸಿಪ್ಪೆ ಹಾಗೂ ಭತ್ತದ ಹುಲ್ಲಿನ ಬಣವೆಗಳು ಬೆಂಕಿಗಾಹುತಿಯಾಗಿವೆ. ಇದನ್ನೂ ಓದಿ: ಮೂವರನ್ನು ಕೊಲೆ ಮಾಡಿದ್ದೇನೆ, ನಾನು ಸಾಯ್ತಿನಿ – ಅಮೆರಿಕದಲ್ಲಿರುವ ಅಣ್ಣನಿಗೆ ಫೋನ್ ಮಾಡಿ ಹೇಳಿದ್ದ ಚೇತನ್
ಪ್ರತಿವರ್ಷ ಬೇಸಿಗೆಯ ಸಂದರ್ಭದಲ್ಲಿ ಯಾರೋ ಕಿಡಿಗೇಡಿಗಳು ಮೇವಿನ ಬಣವೆಗಳಿಗೆ ಬೆಂಕಿ ಹಚ್ಚುತ್ತಿದ್ದಾರೆ. ಕಳೆದ ವರ್ಷವೂ ಇದೇ ರೀತಿ ಆಗಿತ್ತು ಎಂದು ರೈತರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಇಟ್ಟಿಗಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.