ಸಿಡಿಲಿಗೆ ಟಿವಿ ಸ್ಫೋಟಗೊಂಡು ಹೊತ್ತಿ ಉರಿದ ಮನೆ!

Public TV
0 Min Read
CKM HOME

ಚಿಕ್ಕಮಗಳೂರು: ರಾಜ್ಯದ ಕೆಲವೆಡೆ ಗುರುವಾರ ಧಾರಕಾರ ಮಳೆ ಸುರಿದಿದ್ದು, ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಸಿಡಿಲಿನ ಹೊಡೆತಕ್ಕೆ ಮನೆಯೊಂದು ಸುಟ್ಟು ಭಸ್ಮವಾಗಿದೆ.

RAIN

ಬಾಳೆಹೊನ್ನೂರಿನ ಎನ್ ಆರ್ ಪುರ ರಸ್ತೆಯಲ್ಲಿರುವ ಅವಿನಾಶ್ ಎಂಬವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಸಿಡಿಲಿನ ರಭಸಕ್ಕೆ ಟಿವಿ ಸ್ಫೋಟಗೊಂಡಿದೆ. ಬಳಿಕ ಬೆಂಕಿಯ ಕೆನ್ನಾಲಿಗೆ ಇಡೀ ಮನೆಯನ್ನು ಆವರಿಸಿದೆ. ಪರಿಣಾಮ ಮನೆಯಲ್ಲಿದ್ದ ಪೀಠೋಪಕರಣಗಳು ಬೆಂಕಿಗಾಹುತಿಯಾಗಿ ಸಾವಿರಾರು ರೂಪಾಯಿ ಮೌಲ್ಯದ ಆಸ್ತಿ-ಪಾಸ್ತಿ ನಷ್ಟವಾಗಿದೆ.

RAIN 1

ಘಟನೆಯಿಂದಾಗಿ ಮನೆಯೊಳಗಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *