ಗದಗ: ಮೆಕ್ಕೆಜೋಳದ(Maize) ರಾಶಿಗೆ ಆಕಸ್ಮಿಕ ಬೆಂಕಿ (Fire) ತಗುಲಿ ಅಪಾರ ಪ್ರಮಾಣದ ಬೆಳೆ ಸುಟ್ಟು ಭಸ್ಮವಾದ ಘಟನೆ ಗದಗ (Gadag) ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಮಂಜಲಾಪೂರ ಗ್ರಾಮದಲ್ಲಿ ನಡೆದಿದೆ.
ರೈತರು ಊರ ಬಳಿಯ ಬಯಲು ಜಾಗೆಯಲ್ಲಿ ಮೆಕ್ಕೆಜೋಳ ಬೆಳೆ ರಾಶಿ ಮಾಡಲು ಒಂದೇ ಕಡೆಗೆ ಸಂಗ್ರಹಿಸಿದ್ದರು. ಅದರಲ್ಲಿ ಕಮಲವ್ವ ಹೊಸಮನಿ, ಶಿರಾಜುದ್ದಿನ್ ಹೊಸಮನಿ, ಪರಮೇಶ ಕಿತ್ಲಿ, ದಾನಪ್ಪ ಲಮಾಣಿ ಅವರ ಮೆಕ್ಕೆಜೋಳ ಮೆಕ್ಕೆಜೋಳ ಸುಟ್ಟು ನಾಶವಾಗಿವೆ. ಇದನ್ನೂ ಓದಿ: ರಾ.ಹೆದ್ದಾರಿ ಅಗಲೀಕರಣಕ್ಕಾಗಿ ಜಮೀನು ವಶಕ್ಕೆ ಪಡೆದು ಅನ್ಯಾಯ – 3 ವರ್ಷ ಕಳೆದ್ರೂ ಪರಿಹಾರ ನೀಡದ್ದಕ್ಕೆ ಎಸಿ ಕಚೇರಿ ಜಪ್ತಿ
ಬೆಂಕಿಯಿಂದ ನಾಶವಾದ ಬೆಳೆಗೆ ಸೂಕ್ತ ಪರಿಹಾರ ನೀಡುವಂತೆ ರೈತರು ಸರ್ಕಾರಕ್ಕೆ ಆಗ್ರಹಿಸಿದರು. ರೈತರ ಲಕ್ಷಾಂತರ ರೂಪಾಯಿ ಬೆಳೆ ಹಾನಿಯಾಗಿದೆ. ಕೈಗೆ ಬಂದ ತುತ್ತು ರೈತರ ಬಾಯಿಗೆ ಬರದಂತಾದ ಪರಿಸ್ಥಿತಿ ಉಂಟಾಗಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ಕಳೆದುಕೊಂಡು ಮಂಜಲಾಪೂರ ಗ್ರಾಮದ ರೈತರು ಕಂಗಾಲಾಗಿದ್ದಾರೆ.

