ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಅಗ್ನಿ ಅವಘಡವೊಂದು (Fire Incident) ಸಂಭವಿಸಿದ ಪರಿಣಾಮ 20ಕ್ಕೂ ಹೆಚ್ಚು ಬಸ್ಗಳು (Bus) ಸಂಪೂರ್ಣ ಭಸ್ಮವಾದ ಘಟನೆ ವೀರಭದ್ರ ನಗರದಲ್ಲಿ (Veerabhadra Nagar) ನಡೆದಿದೆ.
ನಿಂತಿದ್ದ ಬಸ್ಗಳಿಗೆ ಹಠಾತ್ ಬೆಂಕಿ ತಗುಲಿದ್ದು, ಘಟನಾ ಸ್ಥಳಕ್ಕೆ ಎರಡು ಅಗ್ನಿ ಶಾಮಕ ವಾಹನಗಳು ದೌಡಾಯಿಸಿವೆ. 2015ರಲ್ಲಿ ಅಗ್ನಿ ಅವಘಡ ಸಂಭವಿಸಿದ ಜಾಗದಲ್ಲೇ ಈ ಘಟನೆ ನಡೆದಿದೆ. ಬೆಂಕಿ ನಿಯಂತ್ರಣಕ್ಕೆ ಬಾರದ ಪರಿಣಾಮ ಬಸ್ ಟೈರ್ಗಳು ಹಾಗೂ ಡೀಸೆಲ್ ಟ್ಯಾಂಕ್ಗಳು ಸ್ಫೋಟಗೊಂಡಿವೆ. ಬೆಂಕಿ ನಂದಿಸಲು ಅಗ್ನಿ ಶಾಮಕ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಇದನ್ನೂ ಓದಿ: Kerala Bomb Blast: ಅತ್ತೆ ಕುಳಿತಿದ್ದ ಜಾಗ ತಪ್ಪಿಸಿ ಬಾಂಬ್ ಇಟ್ಟಿದ್ದೆ: ಆರೋಪಿ ಬಾಯ್ಬಿಟ್ಟ ಸತ್ಯವೇನು?
ಎಸ್ವಿ ಕೋಚ್ ವರ್ಕ್ಸ್ ಗ್ಯಾರೇಜ್ ಅಲ್ಲಿ ಬೆಂಕಿ ತಗುಲಿದೆ. ಸದ್ಯಕ್ಕೆ 20ಕ್ಕೂ ಹೆಚ್ಚು ಬಸ್ಗಳು ಸುಟ್ಟು ಕರಕಲಾಗಿದ್ದು, ಯಾರೂ ಬೆಂಕಿಯಲ್ಲಿ ಸಿಲುಕಿಲ್ಲ. ಬಸ್ಗಳನ್ನು ರಿಪೇರಿ ಮಾಡುವ ಜಾಗದಲ್ಲಿ ಈ ಅನಾಹುತ ನಡೆದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಶಾರ್ಟ್ ಸರ್ಕ್ಯೂಟ್ನಿಂದ ಅವಘಡ ಸಂಭವಿಸಿದೆ ಎಂದು ಗ್ಯಾರೇಜ್ ಸುಪರ್ ವೈಸರ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಲಾಂಗ್ ಬೀಸಿದ ರೌಡಿಶೀಟರ್ ಮಂಡಿ ಸೀಳಿದ ಖಾಕಿ
ಈ ಹಿಂದೆ 2015ರಲ್ಲಿ ಕಾವೇರಿ ಗಲಾಟೆ ಸಂದರ್ಭದಲ್ಲಿ ಇದೇ ಜಾಗದಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. 2015ರಲ್ಲಿ ತಮಿಳುನಾಡಿನ (Tamil Nadu) ಬಸ್ಗಳೆಂದು 25 ಬಸ್ಗಳಿಗೆ ಬೆಂಕಿ ಹಚ್ಚಿ ಸುಟ್ಟುಹಾಕಲಾಗಿತ್ತು. ಯುವತಿಯೊಬ್ಬಳು ಬಸ್ಗಳಿಗೆ ಬೆಂಕಿ ಹಚ್ಚಿದ್ದು, ಬಳಿಕ ಆಕೆಯನ್ನು ಬಂಧಿಸಲಾಗಿತ್ತು. ಇದನ್ನೂ ಓದಿ: ಭತ್ತದ ಗದ್ದೆಗೆ ನೀರುಕಟ್ಟಲು ಹೋದಾಗ ಮಾರಕಾಸ್ತ್ರದಿಂದ ವ್ಯಕ್ತಿಯ ಕೊಲೆ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]