ಅಹಮದಾಬಾದ್: ರಾಜ್ಕೋಟ್ನ (Rajkot) ಟಿಆರ್ಪಿ ಗೇಮಿಂಗ್ ಝೋನ್ನಲ್ಲಿ (Gaming Zone) ಸಂಭವಿಸಿದ ಅಗ್ನಿಅವಘಡಕ್ಕೆ (Fire Accident) ಸಂಬಂಧಿಸಿದಂತೆ ಮುನ್ಸಿಪಲ್ ಕಾರ್ಪೊರೇಷನ್ (Muncipal Corporation) ಅನ್ನು ಗುಜುರಾತ್ ಹೈಕೋರ್ಟ್ (Gujarat Highcourt) ತೀವ್ರ ತರಾಟೆಗೆ ತೆಗೆದುಕೊಂಡಿದೆ. ಅಧಿಕಾರಿಗಳ ನಿರ್ಲಕ್ಷ್ಯ ಆಡಳಿತ ಯಂತ್ರದ ಮೇಲಿನ ನಂಬಿಕೆಯನ್ನು ಪ್ರಶ್ನಿಸುವಂತಾಗಿದೆ ಎಂದು ಹೇಳಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಬಿರೇನ್ ವೈಷ್ಣವ್ ಮತ್ತು ನ್ಯಾ.ದೇವನ್ ದೇಸಾಯಿ ಅವರನ್ನೊಳಗೊಂಡ ವಿಶೇಷ ಪೀಠ, ಗೇಮಿಂಗ್ ವಲಯ ನಿರ್ವಾಹಕರು ರಾಜ್ಕೋಟ್ ಮುನ್ಸಿಪಲ್ ಕಾರ್ಪೊರೇಷನ್ನಿಂದ ಕಡ್ಡಾಯ ಅನುಮತಿಗಳು ಮತ್ತು ಪರವಾನಗಿಗಳನ್ನು ತೆಗೆದುಕೊಂಡಿಲ್ಲ ಎಂದು ವರದಿಯಾಗಿದೆ. ಅಧಿಕಾರಿಗಳು ಏನು ನಿದ್ದೆ ಮಾಡುತ್ತಿದ್ದಾರ ಎಂದು ಖಾರವಾಗಿ ಪ್ರಶ್ನಿಸಿದೆ. ಇದನ್ನೂ ಓದಿ: ನಕ್ಸಲರಿಂದ ನಿರಂತರ ಬೆದರಿಕೆ- ಪದ್ಮಶ್ರೀ ಹಿಂದಿರುಗಿಸಲು ಹೇಮಚಂದ್ ಮಾಂಝಿ ನಿರ್ಧಾರ
- Advertisement
ನಮ್ಮ ಆದೇಶದ ನಾಲ್ಕು ವರ್ಷಗಳ ನಂತರವೂ ಅಗ್ನಿ ಸುರಕ್ಷತೆಯ ವಿಷಯದಲ್ಲಿ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಆರ್ಎಂಸಿ ಹೇಗೆ ಹೊಣೆಯಾಗುವುದಿಲ್ಲ? ಇದಕ್ಕೆ ಅಧಿಕಾರಿಗಳು ಹೊಣೆ. ಈ ಬಗ್ಗೆ ಪರಿಶೀಲನೆ ನಡೆಯದಿರುವುದು ಯಾರ ತಪ್ಪು ಎಂದು ಆಕ್ರೋಶ ವ್ಯಕ್ತಪಡಿಸಿತು. ಇದನ್ನೂ ಓದಿ: ಇವಿಎಂ ಯಂತ್ರಗಳು ಏನು ಆಗದೇ ಹೋದರೆ ಸರಿ, ಜನ ನಮ್ಮ ಪರವಾಗಿದ್ದಾರೆ: ಡಿಕೆಶಿ
- Advertisement
ಗೇಮಿಂಗ್ ಝೋನ್ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಒಂಭತ್ತು ಮಕ್ಕಳು ಸೇರಿ 28 ಮಂದಿ ಸಾವನ್ನಪ್ಪಿದ್ದರು. ಘಟನೆ ಬಳಿಕ ಮಾಲೀಕ ಸೇರಿ ಮೂವರನ್ನು ಬಂಧಿಸಲಾಗಿತ್ತು. ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿದ ಆರು ಅಧಿಕಾರಿಗಳನ್ನು ಅಮಾನತುಗೊಳಿಸಿ ಗುಜರಾತ್ ಸರ್ಕಾರ ಸೋಮವಾರ ಆದೇಶ ಹೊರಡಿಸಿತ್ತು. ಇದನ್ನೂ ಓದಿ: ಶಾರ್ಟ್ಸರ್ಕ್ಯೂಟ್ನಿಂದ ಎಲೆಕ್ಟ್ರಿಕ್ ಚಾರ್ಜಿಂಗ್ ಬ್ಯಾಟರಿ ಅಂಗಡಿ ಧಗಧಗ