ಬಿಎಂಟಿಸಿ ಬಸ್ಸಿನಲ್ಲಿ ಬೆಂಕಿ-ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿತು ಭಾರೀ ದುರಂತ!

Public TV
1 Min Read
BUS FIRE

ಬೆಂಗಳೂರು: ಬಿಎಂಟಿಸಿ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದ ಘಟನೆ ನೆಲಮಂಗಲ ಸಮೀಪದ ಮಾದವಾರ ಬಳಿ ನಡೆದಿದೆ.

ನೆಲಮಂಗಲದಿಂದ ಶಿವಾಜಿನಗರಕ್ಕೆ ತೆರಳುತಿದ್ದ ಬಿಎಂಟಿಸಿ ಬಸ್ಸಿನಲ್ಲಿ ಈ ಅವಘಡ ಸಂಭವಿಸಿದೆ. ಬಸ್‍ನ ಇಂಜಿನ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ಕೂಡಲೇ ನವಯುಗ ಟೋಲ್ ಸಿಬ್ಬಂದಿಗಳು ಬೆಂಕಿ ನಂದಿಸುವ ಮೂಲಕ ಕಾರ್ಯ ಯಶಸ್ವಿಯಾಯಿತು.

vlcsnap 2018 10 01 09h19m47s666

ಬೆಂಕಿ ಅವಘಡದ ಸಂದರ್ಭದಲ್ಲಿ ಬಸ್ಸಿನಲ್ಲಿ ಶಾಲಾ ಮಕ್ಕಳು, ವೃದ್ಧರು ಸೇರಿದಂತೆ 35 ಮಂದಿ ಪ್ರಯಾಣಿಕರಿದ್ದರು. ಈ ಅವಘಡದಿಂದಾಗಿ ಪ್ರಯಾಣಿಕರಿಗೆ ಯಾವುದೇ ಪ್ರಾಣಾಹಾನಿಯಾಗಿಲ್ಲ.

ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

Share This Article
Leave a Comment

Leave a Reply

Your email address will not be published. Required fields are marked *