ಬಳ್ಳಾರಿ: ಬಾಳೆ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬಾಳೆ, ಕಬ್ಬು ಬೆಂಕಿಗಾಹುತಿಯಾದ ಬೆಂಕಿ ಅವಘಡ ಜಿಲ್ಲೆಯ ಹೊಸಪೇಟೆ ತಾಲೂಕಿನ ಅನಂತಶಯನ ಗುಡಿ ಗೇಟ್ ಬಳಿ ನಡೆದಿದೆ.
- Advertisement 2
ಮೊದಲಿಗೆ ಶ್ರೀ ರಾಮನಗರ ಮಾಗಣಿ ಪ್ರದೇಶದ ಅಮೀರ್ ಎಂಬವರ ತೋಟದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನಂತರ ಬೆಂಕಿ ಪಕ್ಕದ ಜಮೀನುಗಳಿಗೆ ವ್ಯಾಪಿಸಿಕೊಂಡಿತ್ತು. ಬೆಂಕಿಯ ತೀವ್ರತೆ ಹೆಚ್ಚಾಗುತ್ತಿದ್ದಂತೆ ಸ್ಥಳೀಯರು ಅಗ್ನಿಶಾಮಕ ದಳ ಸಿಬ್ಬಂದಿಗೆ ಮಾಹಿತಿ ತಿಳಿಸಿದ್ದಾರೆ.
- Advertisement 3
- Advertisement 4
ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ ಸಿಬ್ಬಂದಿ ಶೀಘ್ರವೇ ಬೆಂಕಿ ನಂದಿಸುವಲ್ಲಿ ಯಶ್ವಸಿಯಾಗಿದ್ದಾರೆ. ಬರಗಾಲದ ವೇಳೆಯಲ್ಲಿ ಬೆಂಕಿ ಅನಾಹುತ ಸಂಭವಿಸಿರುವುದರಿಂದ ರೈತರಿಗೆ ಅಪಾರ ಪ್ರಮಾಣದ ನಷ್ಟವಾಗಿದೆ.