Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವೇಣೂರಿನಲ್ಲಿ ಪಟಾಕಿ ಗೋಡೌನ್ ಸ್ಫೋಟ – ಮೂವರು ಕಾರ್ಮಿಕರ ದಾರುಣ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ವೇಣೂರಿನಲ್ಲಿ ಪಟಾಕಿ ಗೋಡೌನ್ ಸ್ಫೋಟ – ಮೂವರು ಕಾರ್ಮಿಕರ ದಾರುಣ ಸಾವು

Crime

ವೇಣೂರಿನಲ್ಲಿ ಪಟಾಕಿ ಗೋಡೌನ್ ಸ್ಫೋಟ – ಮೂವರು ಕಾರ್ಮಿಕರ ದಾರುಣ ಸಾವು

Public TV
Last updated: January 29, 2024 8:09 am
Public TV
Share
3 Min Read
Belthangady Godown Blast
SHARE

ಮಂಗಳೂರು: ಪಟಾಕಿ ಗೋಡೌನ್ (Fireworks Godown) ಸ್ಫೋಟಗೊಂಡ (Blast) ಪರಿಣಾಮ ಮೂವರು ಕಾರ್ಮಿಕರು (Workers) ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ (Belthangady) ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಕುಕ್ಕೇಡಿ ಗ್ರಾಮದ ಕಟ್ಯಾರು ಎಂಬಲ್ಲಿ ಅವಘಡ ಸಂಭವಿಸಿದೆ. ಬಶೀರ್ ಎಂಬವರ ಜಾಗದಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ವೇಣೂರು ಪೊಲೀಸರು ದೌಡಾಯಿಸಿದ್ದಾರೆ. ಘಟನೆಯಲ್ಲಿ ಕೇರಳ ನಿವಾಸಿಗಳಾದ ಸ್ವಾಮಿ (55) ಹಾಗೂ ವರ್ಗಿಸ್ (68), ಹಾಸನದ ಅರಸೀಕೆರೆ ನಿವಾಸಿ ಚೇತನ್ (25) ಮೃತಪಟ್ಟಿದ್ದು, ದೇಹ ಸಂಪೂರ್ಣ ಛಿದ್ರಛಿದ್ರವಾಗಿದೆ. ಇದನ್ನೂ ಓದಿ: ಶಾಲಾ ಬಸ್-ಟ್ರ್ಯಾಕ್ಟರ್‌ ನಡುವೆ ಭೀಕರ ಅಪಘಾತ – ನಾಲ್ವರು ವಿದ್ಯಾರ್ಥಿಗಳ ದುರ್ಮರಣ

Harish Poonja Nalin Kumar Kateel

ಇನ್ನು ಘಟನೆಯಲ್ಲಿ 6 ಮಂದಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ದಿನೇಶ್, ಕಿರಣ್, ಕುಮಾರ್, ಕಲ್ಲೇಶ್, ಪ್ರೇಮ್ ಹಾಗೂ ಕೇಶವ ಎಂದು ಗುರುತಿಸಲಾಗಿದೆ. ಕುಟ್ಟೋಡಿ ನಿವಾಸಿ ಬಶೀರ್ ಎಂಬವರ ಜಮೀನಿನಲ್ಲಿ ಪಟಾಕಿ ತಯಾರಿಕೆ ಮಾಡುತ್ತಿದ್ದು, ಒಟ್ಟು 9 ಮಂದಿ ಕೂಲಿ ಕಾರ್ಮಿಕರು ಸ್ಫೋಟಕ ತಯಾರಿಸುತ್ತಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾರ್ಮಿಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನಾ ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದು, ಪಟಾಕಿ ಕಾರ್ಖಾನೆ ಮೇಲೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ನಂದಿಬೆಟ್ಟದಲ್ಲಿ ಆತ್ಮಹತ್ಯೆ – ಒಂದೂವರೆ ತಿಂಗಳ ಬಳಿಕ ಶವ ಪತ್ತೆ

ಘಟನಾ ಸ್ಥಳಕ್ಕೆ ಜಿಲ್ಲಾ ಎಸ್ಪಿ ಸಿ.ಬಿ ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಈ ಘಟನೆ ಭಾನುವಾರ ಸಂಜೆ ಸುಮಾರು 5:30ರ ಸುಮಾರಿಗೆ ನಡೆದಿದೆ. 50 ಸೆನ್ಸ್ ಜಾಗದಲ್ಲಿ ಸಯ್ಯದ್ ಬಶೀರ್ ಎಂಬವರು ಪಟಾಕಿ ಮಾಡಲು ಲೈಸೆನ್ಸ್ ಪಡೆದಿದ್ದಾರೆ. 2011-2012 ನಲ್ಲಿ ತೆಗೆದುಕೊಂಡಿರುವ ಲೈಸೆನ್ಸ್ 2019ರಲ್ಲಿ ರಿನಿವಲ್ ಆಗಿದೆ. 2024ರ ಮಾರ್ಚ್ವರೆಗೂ ವ್ಯಾಲಿಡ್ ಆಗಿದೆ. ಡಿಮ್ಯಾಂಡ್‌ಗೆ ತಕ್ಕ ಹಾಗೆ ಪಟಾಕಿ ಮಾಡುತ್ತಿದ್ದರು ಎಂಬುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಪಟಾಕಿ ತಯಾರಿಸುವಾಗ ಯಾವ ಕಾರಣಕ್ಕೆ ಬ್ಲಾಸ್ಟ್ ಆಗಿದೆ ಎಂಬುದು ಗೊತ್ತಾಗಿಲ್ಲ. ಮೊಬೈಲ್ ಫೊರೆನ್ಸಿಕ್ ಟೀಮ್, ಡಿಪಾರ್ಟ್ಮೆಂಟ್ ಆಫ್ ಎಕ್ಸ್‌ಪ್ಲೋಸಿವ್‌ ತಂಡ ಬಂದಿದೆ. ಘಟನೆ ಹೇಗಾಯಿತು? ಯಾಕಾಯ್ತು ಎಂಬ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಿದ್ರೆ ಮಂಪರಿನಲ್ಲಿ ಕಾರು ಚಲಾಯಿಸಿ ಟ್ರಕ್‌ಗೆ ಡಿಕ್ಕಿ; ತಮಿಳುನಾಡಿನಲ್ಲಿ ಸ್ಥಳದಲ್ಲೇ ಐವರು ಸಾವು

Nalin Kumar Kateel

ಸ್ಥಳಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ಮಾತನಾಡಿದ ಅವರು, ಈ ಘಟನೆಗೆ ಕಾರಣ ಏನು ಎಂಬ ಬಗ್ಗೆ ಗಂಭೀರ ತನಿಖೆ ನಡೆಯಬೇಕಿದೆ. ಪರವಾನಿಗೆ ನೀಡಿದರ ಬಗ್ಗೆ ಸರ್ಕಾರ ಗಂಭೀರ ತನಿಖೆ ಮಾಡಬೇಕು. ಸ್ಫೋಟದ ತೀವ್ರತೆ ಹಲವು ಅನುಮಾನಗಳನ್ನು ಸೃಷ್ಟಿಸಿದೆ. ಈ ಪ್ರಕರಣವನ್ನು ರಾಷ್ಟೀಯ ತನಿಖಾ ದಳಕ್ಕೆ ಒಪ್ಪಿಸಬೇಕು. ಘಟನೆ ಬಹಳ ಭೀಕರವಾಗಿ ನಡೆದಿದೆ. ಈ ಘಟನೆ ಬಗ್ಗೆ ಅನುಮಾನವಿದೆ. ಮೂವರು ಬಲಿಯಾಗಿದ್ದಾರೆ. ದೊಡ್ಡದಾದ ಸ್ಫೋಟಕ ವಸ್ತುಗಳ ಸ್ಫೋಟವಾಗಿದೆ. ಸ್ಥಳೀಯ ಮನೆಗಳಿಗೆ ಸರ್ಕಾರ ಸಂಪೂರ್ಣ ಪರಿಹಾರ ಕೊಡಬೇಕು. ಬಲಿಯಾದ ಕಾರ್ಮಿಕ ಕುಟುಂಬಗಳಿಗೂ ಸರ್ಕಾರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸ್ನೇಹಿತನ ಮೇಲೆ ಹಲ್ಲೆ – ಪ್ರಶ್ನೆ ಮಾಡಿದಕ್ಕೆ ಕುಚಿಕುಗಳಿಂದಲ್ಲೇ ಕೊಲೆ

ಘಟನಾ ಸ್ಥಳಕ್ಕೆ ಸ್ಥಳೀಯ ಶಾಸಕ ಹರೀಶ್ ಪೂಂಜಾ ಭೇಟಿ ನೀಡಿದ್ದು, ಈ ಪ್ರಕರಣವನ್ನು ಎನ್‌ಐಎಗೆ ವಹಿಸಿ ಸಮಗ್ರ ತನಿಖೆ ಮಾಡಿಸಬೇಕೆಂದು ಮುಖ್ಯಮಂತ್ರಿಗಳಿಗೆ ಆಗ್ರಹ ಮಾಡುತ್ತೇನೆ. ತಕ್ಷಣವೇ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿ ಈ ಸ್ಫೋಟದ ಹಿಂದೆ ಯಾವುದಾದ್ರು ವ್ಯವಸ್ಥೆಯ ನಂಟಿದೆಯಾ ಅನ್ನೋದನ್ನು ನೋಡಬೇಕು. ಈ ಸ್ಫೋಟಕ್ಕೆ ಸಂಬಂಧಪಟ್ಟವರನ್ನು ತಕ್ಷಣ ಬಂಧಿಸಿ ಎಂದು ಒತ್ತಾಯಿಸಿದರು. ಇದನ್ನೂ ಓದಿ: ಕಲ್ಕಾಜಿ ದೇಗುಲದಲ್ಲಿ ವೇದಿಕೆ ಕುಸಿದುಬಿದ್ದು ಮಹಿಳೆ ಸಾವು – 17 ಮಂದಿಗೆ ಗಾಯ

TAGGED:ಕಾರ್ಮಿಕರುದಕ್ಷಿಣ ಕನ್ನಡಪಟಾಕಿ ಗೋಡೌನ್ಬೆಳ್ತಂಗಡಿಮಂಗಳೂರುಸ್ಫೋಟ
Share This Article
Facebook Whatsapp Whatsapp Telegram

Cinema news

Sanvi Sudeep 1
ʻನನ್ನ ದೇಹ ಚರ್ಚೆಯ ವಿಷಯವಲ್ಲʼ – ಮಗಳು ಸಾನ್ವಿ ಹೇಳಿಕೆ ಸಮರ್ಥಿಸಿಕೊಂಡ ಸುದೀಪ್
Bengaluru City Cinema Latest Sandalwood Top Stories
vijayalakshmi 1 1
ನನ್ನ ದೂರಿಗೆ ನಿರ್ಲಕ್ಷ್ಯ, ಬೇರೆ ಮಹಿಳೆಯ ದೂರಿಗೆ ಒಂದೇ ದಿನದಲ್ಲಿ ಕ್ರಮ: ವಿಜಯಲಕ್ಷ್ಮಿ ಬೇಸರ
Bengaluru City Cinema Crime Latest Main Post
sunny leone
ಮಥುರಾದಲ್ಲಿ ಸನ್ನಿ ಲಿಯೋನ್ ʻDJ Nightʼ ನ್ಯೂ ಇಯರ್ ಕಾರ್ಯಕ್ರಮ ರದ್ದು
Bollywood Cinema Latest National Top Stories
father movie team
ಭಾವುಕ ಪ್ರಪಂಚಕ್ಕೆ ಕರೆದೊಯ್ಯುವ ‘ಫಾದರ್’ ಥೀಮ್ ಸಾಂಗ್
Cinema Latest Sandalwood Top Stories

You Might Also Like

Amsterdam Church
Latest

ಹೊಸ ವರ್ಷದಂದೇ 150 ವರ್ಷಗಳ ಹಳೆಯ ನೆದರ್‌ಲ್ಯಾಂಡ್ ಚರ್ಚ್‌ನಲ್ಲಿ ಬೆಂಕಿ – ಬಿತ್ತು ಗೋಪುರ

Public TV
By Public TV
29 minutes ago
S.T. Somashekar
Bengaluru City

ಬಂಡೆ ಸ್ಫೋಟದಿಂದ 4 ಚಿರತೆ ಸಾವು, ಸ್ಥಳೀಯರಿಗೂ ತೊಂದರೆ, ಕ್ರಮ ವಹಿಸದಿದ್ದರೆ ಹೋರಾಟ – ಎಸ್.ಟಿ ಸೋಮಶೇಖರ್ ಎಚ್ಚರಿಕೆ

Public TV
By Public TV
30 minutes ago
Ellyse Perry
Cricket

ಆರ್‌ಸಿಬಿಗೆ ಶಾಕ್‌ ನೀಡಿದ್ದ ಪೆರ್ರಿ ನ್ಯೂಜಿಲೆಂಡ್‌ ಲೀಗ್‌ನಲ್ಲಿ ಭರ್ಜರಿ ಆಟ

Public TV
By Public TV
55 minutes ago
Swiss ski resort explosion
Latest

ಸ್ವಿಸ್ ಸ್ಕೀ ರೆಸಾರ್ಟ್‌ನ ಬಾರ್‌ನಲ್ಲಿ ಸ್ಫೋಟ; 40 ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ

Public TV
By Public TV
2 hours ago
future husband and Brother kill sisters Ex lover in Chikkamagaluru
Chikkamagaluru

ಹಳೆ ಲವ್ವರ್‌ಗೆ ವಿಶ್‌ ಮಾಡಿದ್ದಕ್ಕೆ ಚಾಕು ಇರಿದು ಕೊಂದೇ ಬಿಟ್ಟ ಭಾವಿ ಪತಿ!

Public TV
By Public TV
2 hours ago
liquor alcohol
Bagalkot

ಹೊಸ ವರ್ಷ ಸಂಭ್ರಮಾಚರಣೆ – ಮದ್ಯ ಮಾರಾಟದಿಂದ ದಾಖಲೆಯ ಆದಾಯ ಸಂಗ್ರಹ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?