ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಮಹೋತ್ಸವದ ಹಿನ್ನೆಲೆ ಸೋಮವಾರ (ಸೆ.15) ಸಿಡಿಮದ್ದು ತಾಲೀಮು ನಡೆಸಲಾಯಿತು.
ಮೈಸೂರಿನ ವಸ್ತು ಪ್ರದರ್ಶನ ಆವರಣದಲ್ಲಿ ಅಶ್ವರೋಹಿ ದಳ ಹಾಗೂ ಆನೆಗಳಿಗೆ ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಸಮ್ಮುಖದಲ್ಲಿ ಸಿಡಿಮದ್ದು ತಾಲೀಮು ನಡೆಸಲಾಯಿತು. ಈ ವೇಳೆ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಅಭಿಮನ್ಯು, ಭೀಮ, ಮಹೇಂದ್ರ, ಧನಂಜಯ, ಕಂಜನ್, ಏಕಲವ್ಯ, ಗೋಪಿ, ಸುಗ್ರೀವಾ, ಶ್ರೀಕಂಠ, ಪ್ರಶಾಂತ, ಕಾವೇರಿ, ಲಕ್ಷ್ಮಿ, ಹೇಮಾವತಿ ಹಾಗೂ ರೂಪ ಒಟ್ಟು 14 ಆನೆಗಳು ಹಾಗೂ ಅಶ್ವರೋಹಿ ದಳದ 30 ಕುದುರೆಗಳು ಭಾಗಿಯಾಗಿದ್ದವು.ಇದನ್ನೂ ಓದಿ: ಮೈಸೂರು ದಸರಾ – ಮೊದಲ ತಂಡದ ಭೀಮನಿಗಿಂತ ಸುಗ್ರೀವನೇ ಬಲಶಾಲಿ
ಸಿಡಿಮದ್ದು ತಾಲೀಮು ವೇಳೆ ಸಶಸ್ತ್ರ ಮೀಸಲು ಪಡೆ ಪೊಲೀಸರು 21 ಭಾರಿ ಕುಶಾಲತೋಪು ಸಿಡಿಸಿದರು. ಸಿಡಿಮದ್ದಿನ ಶಬ್ದಕ್ಕೆ ಕುದುರೆಗಳು ಚದುರಿದವು ಹಾಗೂ ಶ್ರೀಕಂಠ, ಹೇಮಾವತಿ ಆನೆಗಳು ಸ್ವಲ್ಪ ವಿಚಲಿತಗೊಂಡವು.