ಕಾಡಾನೆ ಸೆರೆ ಮೊದಲ ದಿನದ ಕಾರ್ಯಾಚರಣೆ ಯಶಸ್ವಿ – ಸತತ 4 ಗಂಟೆಗಳ ನಂತರ ಒಂಟಿಸಲಗ ಸೆರೆ

Public TV
1 Min Read
Hassan Wild Elephant

ಹಾಸನ: ಜಿಲ್ಲೆಯ ಮಲೆನಾಡು ಭಾಗವಾದ ಬೇಲೂರು (Belur) ಭಾಗದಲ್ಲಿ ಮಿತಿಮೀರಿರುವ ಕಾಡಾನೆ (Wild Elephant) ಹಾವಳಿಗೆ ತಾತ್ಕಾಲಿಕ ಬ್ರೇಕ್ ಹಾಕಲು ಅರಣ್ಯ ಇಲಾಖೆ ಇಂದಿನಿಂದ ಕಾಡಾನೆ ಸೆರೆ ಕಾರ್ಯಾಚರಣೆ ಆರಂಭಿಸಿದ್ದು, ಮೊದಲ ದಿನದ ಕಾರ್ಯಾಚರಣೆ ಯಶಸ್ವಿಯಾಗಿದೆ.

HASSAN WILD ELEPHANT

ಬೆಳಗ್ಗೆ 8 ಗಂಟೆ ನಂತರ ಆರು ಇಟಿಎಫ್ ತಂಡಗಳು ಪುಂಡಾನೆಗಳನ್ನು ಗುರುತಿಸಲು ತೆರಳಿದ್ದರು. ಬೇಲೂರು ತಾಲೂಕಿನ ಹಳ್ಳಿಗದ್ದೆ ಗ್ರಾಮದ ಶಾಂತಿ ಎಸ್ಟೇಟ್‌ನಲ್ಲಿ ಎರಡು ಕಾಡಾನೆಗಳು ಕಂಡುಬಂದಿದ್ದು, ಒಂದು ಕಾಡಾನೆಗೆ ವೈದ್ಯರು ಅರವಳಿಕೆ ಚುಚ್ಚುಮದ್ದು ನೀಡಿದರು. ಆದರೆ ಎರಡು ಕಾಡಾನೆಗಳು ಜೊತೆ ಜೊತೆಯಲ್ಲಿಯೇ ಎಲ್ಲಂದರಲ್ಲಿ ಓಡಾಡಲಾರಂಭಿಸಿದವು. ನಂತರ ಏಳು ಕುಮ್ಕಿ ಆನೆಗಳೊಂದಿಗೆ ಹರಸಾಹಸಪಟ್ಟು ಎರಡು ಕಾಡಾನೆಗಳನ್ನು ಬೇರ್ಪಡಿಸಿದರು. ಇದನ್ನೂ ಓದಿ: ಸರ್ಕಾರದ ನಿರ್ಲಕ್ಷ್ಯಕ್ಕೆ ಸರ್ಕಾರಿ ಶಾಲೆಗಳಿಗೆ ಆಪತ್ತು – ಜಿಲ್ಲೆಯಲ್ಲಿ 579 ಶಾಲೆಗಳಲ್ಲಿ 10ಕ್ಕಿಂತ ಕಡಿಮೆ ದಾಖಲಾತಿ

ನಂತರ ಒಂಟಿಸಲಗ ಕುಸಿದು ಬಿದ್ದಿದ್ದು ನೀರು ಹಾಕಿ ಪ್ರಾಥಮಿಕ ಚಿಕಿತ್ಸೆ ನೀಡಿ ಎಚ್ಚರಗೊಳಿದರು. ನಂತರ ಕಾಡಾನೆಯನ್ನು ಸಾಕಾನೆಗಳು ಎಳೆದು ತಂದವು. ಕ್ರೇನ್ ಮೂಲಕ ಕಾಡಾನೆಯನ್ನು ಲಾರಿಗೆ ಶಿಫ್ಟ್ ಮಾಡಲಾಗಿದ್ದು, ಅರಣ್ಯಕ್ಕೆ ಬಿಡುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಕ್ಯಾಪ್ಟನ್ ಪ್ರಶಾಂತ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ಇದನ್ನೂ ಓದಿ: 2002ರ ಗುಜರಾತ್‌ ಗಲಭೆಯೇ ದೇಶದ ಅತಿದೊಡ್ಡ ಗಲಭೆಯಲ್ಲ – ರೈಲು ದುರಂತ ಸ್ಮರಿಸಿದ ಮೋದಿ

Share This Article