Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇಂದ್ರದ ಅನುದಾನದ ಬಳಕೆ ಹೇಗೆ ಆಗಿದೆ ಅನ್ನೋದನ್ನು ಮೊದ್ಲು ತಿಳಿಸಲಿ: ಸಿಎಂಗೆ ಬಿಎಸ್‍ವೈ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕೇಂದ್ರದ ಅನುದಾನದ ಬಳಕೆ ಹೇಗೆ ಆಗಿದೆ ಅನ್ನೋದನ್ನು ಮೊದ್ಲು ತಿಳಿಸಲಿ: ಸಿಎಂಗೆ ಬಿಎಸ್‍ವೈ ತಿರುಗೇಟು

Districts

ಕೇಂದ್ರದ ಅನುದಾನದ ಬಳಕೆ ಹೇಗೆ ಆಗಿದೆ ಅನ್ನೋದನ್ನು ಮೊದ್ಲು ತಿಳಿಸಲಿ: ಸಿಎಂಗೆ ಬಿಎಸ್‍ವೈ ತಿರುಗೇಟು

Public TV
Last updated: March 22, 2017 4:06 pm
Public TV
Share
2 Min Read
BSY SHOBHA
SHARE

ಮೈಸೂರು: ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಯ ಬಗ್ಗೆ ರಾಜ್ಯ ಸರ್ಕಾರ ಕೇಂದ್ರವನ್ನು ಬೊಟ್ಟು ಮಾಡುತ್ತಿರುವುದು ಸರಿಯಲ್ಲ. ಈ ಕುರಿತು ಮಂಗಳವಾರ ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಲಿಶಾವಾದ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:  ಅಂಗನವಾಡಿ ನೌಕರರಿಂದ ಆಹೋರಾತ್ರಿ ಧರಣಿ – ಬೀದಿಯಲ್ಲೇ ಮಕ್ಕಳ ನಿದ್ದೆ

ಈ ಬಗ್ಗೆ ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್‍ವೈ ಮೊದಲು 14ನೇ ಹಣಕಾಸು ಆಯೋಗದಿಂದ ಕೇಂದ್ರ ಸರ್ಕಾರ ನೀಡಿರುವ ಹಣವನ್ನು ರಾಜ್ಯ ಸರ್ಕಾರ ಯಾವ ಉದ್ದೇಶಕ್ಕೆ ಬಳಸಿಕೊಂಡಿದೆ ಎಂಬುದನ್ನು ತಿಳಿಸಲಿ. ಕೇಂದ್ರ ಸರ್ಕಾರ ನೀಡುವ ಹಣವನ್ನು ರಾಜ್ಯ ಸರ್ಕಾರ ಅನ್ಯ ಉದ್ದೇಶಗಳಿಗೆ ಬಳಕೆ ಮಾಡಿಕೊಳ್ಳುತ್ತಿದೆ. ಬಳಿಕ ಸಮಸ್ಯೆ ಎದುರಾದಾಗ ಕೇಂದ್ರದತ್ತ ಬೊಟ್ಟು ಮಾಡುತ್ತಿದೆ ಅಂತಾ ಸಿಎಂ ಆರೋಪಕ್ಕೆ ತಿರುಗೇಟು ನೀಡಿದರು.

ಇದನ್ನೂ ಓದಿ: ಅಂಗನವಾಡಿ ನೌಕರರ ಧರಣಿ: ಸಾವಿರಾರು ಮಹಿಳೆಯರಿಗೆ ಒಂದೇ ಶೌಚಾಲಯ

ಸಮಸ್ಯೆಗೆ ರಾಜ್ಯ ಸರ್ಕಾರವೇ ಕಾರಣ: ಅಂಗನವಾಡಿ ಕಾರ್ಯಕರ್ತೆಯರ ಈಗಿನ ಸಮಸ್ಯೆಗೆ ರಾಜ್ಯ ಸರ್ಕಾರವೇ ಕಾರಣ. ಕೇಂದ್ರದಿಂದ ರಾಜ್ಯಕ್ಕೆ ನೀಡುತ್ತಿರುವ ಹಣ ದುರುಪಯೋಗವಾಗುತ್ತಿದೆ. ಕೇಂದ್ರ ಸರ್ಕಾರ ನೀಡುವ ಅನುದಾನವನ್ನು ರಾಜ್ಯ ಸರ್ಕಾರ ಅನ್ಯ ಉದ್ದೇಶಗಳಿಗೆ ಬಳಕೆ ಮಾಡುತ್ತಿದೆ. ಅಂಗನವಾಡಿ ಕಾರ್ಯಕರ್ತೆಯರನ್ನು ರಾಜ್ಯ ಸರ್ಕಾರ ಬೇರೆ ಬೇರೆ ಕಾರ್ಯಗಳಿಗೆ ಬಳಸಿಕೊಳ್ಳುತ್ತಿದೆ. ಹೀಗಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರವೇ ಹಣ ನೀಡಬೇಕು ಅಂತಾ ಸಂಸದೆ ಶೋಭಾಕರಂದ್ಲಾಜೆ ಆಗ್ರಹಿಸಿದರು.

ಇದನ್ನೂ ಓದಿ:  ಅಂಗನವಾಡಿ ನೌಕರರ ಪ್ರತಿಭಟನೆಗೆ ಬೆಚ್ಚಿದ ಬೆಂಗಳೂರು – ಬೆಳ್ಳಂಬೆಳಗ್ಗೆ ಟ್ರಾಫಿಕ್ ಜಾಮ್

ಸರ್ಕಾರ ಹೇಳಿದ್ದೇನು?: ಮಂಗಳವಾರ ವಿಧಾನಸಭೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆ ಬಗ್ಗೆ ಚರ್ಚೆ ನಡೆದಿತ್ತು. ಈ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀ ಮತ್ತು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರ ಅನುದಾನವನ್ನು ಕಡಿತಗೊಳಿಸಿದ್ದರಿಂದ ಈ ಸಮಸ್ಯೆ ಸೃಷ್ಟಿಯಾಗಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ಅಂಗನವಾಡಿ ನೌಕರರ ಧರಣಿ- ಹೆಚ್‍ಡಿಕೆ ಭೇಟಿ, ನೊಂದ ಮಹಿಳೆಯರಿಗೆ ಸಾಂತ್ವನ

ಉಮಾಶ್ರೀ ಮಾತನಾಡಿ, ಯುಪಿಎ ಸರ್ಕಾರ ಇದ್ದಾಗ ಕೇಂದ್ರ ಸರ್ಕಾರ ಶೇ.90ರಷ್ಟು, ರಾಜ್ಯ ಸರ್ಕಾರ ಶೇ.10 ಗೌರವ ಧನ ಕೊಡುತಿತ್ತು. ಆದರೆ ಕೇಂದ್ರ ಸರ್ಕಾರ ಈಗ ಶೇ. 60, ರಾಜ್ಯ ಸರ್ಕಾರ ಶೇ.40 ರಷ್ಟು ಅನುದಾನ ನೀಡುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ 5,200 ರೂ. ಸಹಾಯಧನ ಕೊಡ್ತಿದ್ರೆ, ಕೇಂದ್ರ ಸರ್ಕಾರದ ಪಾಲು 1,800 ರೂ. ಮಾತ್ರ. ಇದರಿಂದಾಗಿ ಒಟ್ಟು 7000 ರೂ ಸಂಬಳ ಸಿಗುತ್ತಿದೆ ಎಂದು ಕೇಂದ್ರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಹೆಚ್‍ಡಿಕೆ ಆಯ್ತು ಈಗ ಶೆಟ್ಟರ್ ಆಶ್ವಾಸನೆ – ಸದನದಲ್ಲೂ ಶುರುವಾಯ್ತು ಅಂಗನವಾಡಿ ಕೂಗು

ಸಿಎಂ ಸಿದ್ದರಾಮಯ್ಯ ಮಾತನಾಡಿ, ಇಂದಿರಾಗಾಂಧಿ ಕಾಲದಲ್ಲಿ ಗೌರವ ಧನ ಕೊಡಲು ಆರಂಭವಾಗಿದ್ದು, ಅಂದಿನಿಂದಲೂ ಕೇಂದ್ರ ಸರ್ಕಾರ ಶೇ.90 ರಷ್ಟು ಗೌರವಧನ ನೀಡುತ್ತಿದೆ. ಆದರೆ ಕೇಂದ್ರ ಸರ್ಕಾರ ಪಾಲು ಕಡಿತಗೊಳಿಸಿದ ಕಾರಣ ರಾಜ್ಯ ಸರ್ಕಾರಕ್ಕೆ ಹೊರೆಯಾಗಿದೆ. ಪ್ರತಿ ವರ್ಷ ನಾವು 500 ರೂ ಹೆಚ್ಚಳ ಮಾಡಿದ್ದೇವೆ. ಆದ್ರೆ 2016-17ರಲ್ಲಿ ಹೆಚ್ಚಳ ಮಾಡಿಲ್ಲ, ಅದು ಕೇಂದ್ರ ಸರ್ಕಾರದ ಕ್ರಮದಿಂದ ಆಗಿಲ್ಲ. ಬರೀ ಮಾತನಾಡಬಹುದು, ಕಾಳಜಿ ತೋರಿಸಬಹುದು.ಆದ್ರೆ ಕೇಂದ್ರ ಸರ್ಕಾರ ಪಾಲು ಕಡಿಮೆ ಮಾಡಿದ್ದು ಯಾಕೆ? ಇದು ಮಹಿಳಾ ಪರ ಕಾಳಜಿನಾ ಎಂದು ಪ್ರಶ್ನಿಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿ: ಸತತ 2ನೇ ದಿನವೂ ಅಂಗನವಾಡಿ ನೌಕರರ ಅಹೋರಾತ್ರಿ ಧರಣಿ

ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆಯರಿಗೆ 7 ಸಾವಿರ ಸಂಬಳ: ಯಾರ ಪಾಲು ಎಷ್ಟು? ಬೇರೆ ರಾಜ್ಯದಲ್ಲಿ ಎಷ್ಟಿದೆ?

TAGGED:anganavadi workersbjpmysorepublictvshobha karandlajeyeddiyurappaಅಂಗನವಾಡಿ ಕಾರ್ಯಕರ್ತೆಪಬ್ಲಿಕ್ ಟಿವಿಬಿಜೆಪಿಮೈಸೂರುಯಡಿಯೂರಪ್ಪಶೋಭಾ ಕರಂದ್ಲಾಜೆ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
8 hours ago
big bulletin 09 March 2026 part 1
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-1

Public TV
By Public TV
8 hours ago
big bulletin 09 March 2026 part 2
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-2

Public TV
By Public TV
8 hours ago
big bulletin 09 March 2026 part 3
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-3

Public TV
By Public TV
8 hours ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
8 hours ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?