Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪವನ್ ವೆಂಕಟೇಶ್ ನಿರ್ದೇಶನದಲ್ಲಿ ಮೂಡಿಬಂತು ಫಸ್ಟ್ ಸ್ಯಾಲರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಪವನ್ ವೆಂಕಟೇಶ್ ನಿರ್ದೇಶನದಲ್ಲಿ ಮೂಡಿಬಂತು ಫಸ್ಟ್ ಸ್ಯಾಲರಿ

Cinema

ಪವನ್ ವೆಂಕಟೇಶ್ ನಿರ್ದೇಶನದಲ್ಲಿ ಮೂಡಿಬಂತು ಫಸ್ಟ್ ಸ್ಯಾಲರಿ

Public TV
Last updated: December 2, 2025 3:28 pm
Public TV
Share
2 Min Read
First Salary Movie
SHARE

ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ಸುಧೀಂದ್ರ ವೆಂಕಟೇಶ್ ನಿರ್ಮಾಣ ಮಾಡಿರುವ, ಅವರ ಪುತ್ರ ಪವನ್ ವೆಂಕಟೇಶ್ ನಿರ್ದೇಶನ ಮಾಡಿರುವ ಫಸ್ಟ್ ಸ್ಯಾಲರಿ ಫಸ್ಟ್ ಶೋ ಇತ್ತೀಚೆಗೆ ನಡೆಯಿತು. ಮೊದಲ ಪ್ರದರ್ಶನದಲ್ಲಿ ಹಿರಿಯ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ನಟಿ ಶೃತಿ ಹಾಗೂ ಗುರುಗಳಾದ ಕಮಲಾಕರ್ ಅವರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ನಂತರ ಗಣ್ಯರು ಹಾಗೂ ತಂಡದ ಸದಸ್ಯರು ಮಾತನಾಡಿದರು.

ಡಿ.ವಿ.ಸುಧೀಂದ್ರ ಅವರು ನನಗೆ ಬಹಳ ಆತ್ಮೀಯರು. ಈಗ ಪಿ.ಆರ್.ಓ ವೆಂಕಟೇಶ್ ಪುತ್ರ ಪವನ್ ವೆಂಕಟೇಶ್, ‘ಫಸ್ಟ್ ಸ್ಯಾಲರಿ’ ಕಿರುಚಿತ್ರವನ್ನು ನಿರ್ದೇಶಿಸುವ ಮೂಲಕ ಚಲನಚಿತ್ರ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಕಿರುಚಿತ್ರ ಬಹಳ ಚೆನ್ನಾಗಿ ಮೂಡಿಬಂದಿದೆ. ಕಲಾವಿದರು ಕೂಡ ಅದ್ಭುತವಾಗಿ ಅಭಿನಯಿಸಿದ್ದಾರೆ. ಮುಂದಿನ ದಿನಗಳಲ್ಲಿ ಕನ್ನಡ ಚಿತ್ರರಂಗದಲ್ಲಿ ಈ ಹುಡುಗನಿಗೆ ಉತ್ತಮ ಅವಕಾಶಗಳು ಸಿಗಲಿ ಎಂದು ರಾಕ್ ಲೈನ್ ವೆಂಕಟೇಶ್ ಹಾರೈಸಿದರು. ನಾನು ಡಿ.ವಿ.ಸುಧೀಂದ್ರ ಅವರ ನಿರ್ಮಾಣದ ʼನಗುನಗುತಾ ನಲಿʼ ಚಿತ್ರದಲ್ಲಿ ಅಭಿನಯಿಸಿದ್ದೆ. ಇಂದು ಅವರ ಕುಟುಂಬದ ಪವನ್ ವೆಂಕಟೇಶ್ ಕಿರುಚಿತ್ರ ನಿರ್ಮಾಣ ಮಾಡಿದ್ದಾನೆ. ತಾಯಿ – ಮಗನ ಸೆಂಟಿಮೆಂಟ್ ಸನ್ನಿವೇಶಗಳು ಮನಸ್ಸಿಗೆ ಬಹಳ ಹತ್ತಿರವಾಯಿತು. ಕಣ್ಣಂಚಲಿ ನೀರು ತರಿಸಿತ್ತು ಎಂದು ತಿಳಿಸಿದ ನಟಿ ಶ್ರುತಿ, ನನ್ನ ʼಫಸ್ಟ್ ಸ್ಯಾಲರಿʼ ಐನೂರು ರೂಪಾಯಿಗಳು ಎಂದು ನೆನಪಿಸಿಕೊಂಡರು.

First Salary Movie 1

ನಮ್ಮ ಚಿಕ್ಕಪ್ಪ ಡಿ.ವಿ.ಸುಧೀಂದ್ರ ಅವರು ಪಾಲುದಾರಿಕೆಯಲ್ಲಿ ಆರು ಚಿತ್ರಗಳನ್ನು ನಿರ್ಮಾಣ ಮಾಡಿದ್ದರು. ಈಗ ನಾನು ಮೊದಲ ಬಾರಿಗೆ ಈ ಕಿರುಚಿತ್ರ ನಿರ್ಮಾಣ ಮಾಡಿದ್ದೇನೆ. ಮಗ ಪವನ್ ಹಾಗೂ ಸ್ನೇಹಿತರು ಒಂದೊಳ್ಳೆ ಕಿರುಚಿತ್ರ ಮಾಡುತ್ತಿದ್ದೇವೆ ಎಂದು ಹೇಳಿದಾಗ ನಾನು ಅವರ ಜೊತೆಗೆ ನಿಂತೆ. ಕಿರುಚಿತ್ರ ಅವರು ಹೇಳಿದ ಹಾಗೆ ಚೆನ್ನಾಗಿ ಮಾಡಿದ್ದಾರೆ. ಸಮಾರಂಭಕ್ಕೆ ಬಂದು ಪ್ರೋತ್ಸಾಹ ನೀಡಿ ಹಾರೈಸಿದ ನಿರ್ಮಾಪಕರಾದ ರಾಕ್ ಲೈನ್ ವೆಂಕಟೇಶ್ ಅವರಿಗೆ, ನಟಿ ಶ್ರುತಿ ಅವರಿಗೆ, ಗುರುಗಳಿಗೆ ಹಾಗೂ ಇಡೀ ಮಾಧ್ಯಮದ ಬಳಗಕ್ಕೆ ಧನ್ಯವಾದ ಎಂದರು ಸುಧೀಂದ್ರ ವೆಂಕಟೇಶ್ .

ʼಫಸ್ಟ್ ಸ್ಯಾಲರಿʼ ನನ್ನ ಗೆಳೆಯ ವಿಜಯ್ ಶಿವಕುಮಾರ್ ಅವರು ಬರೆದ ಕಥೆ. ಈ ಚಿತ್ರದಲ್ಲಿ ಅವರೆ ಮುಖ್ಯಪಾತ್ರದಲ್ಲೂ ಅಭಿನಯಿಸಿದ್ದಾರೆ. ಹರಿಣಿ ಶ್ರೀಕಾಂತ್, ಯತಿರಾಜ್, ತ್ರಿಶೂಲ್, ಸ್ನೇಹಶ್ರೀ, ರಕ್ಷಿತ್ ಇದರಲ್ಲಿ ನಟಿಸಿದ್ದಾರೆ. ವಿಜಯ್ ಹರಿತ್ಸ ಸಂಗೀತ ನೀಡಿದ್ದಾರೆ. ರಿಚರ್ಡ್ ಡ್ಯಾನಿಯಲ್ ಛಾಯಾಗ್ರಹಣ ಹಾಗೂ ಸಂಕಲನ ಮಾಡಿದ್ದಾರೆ. ಮನೋಜ್ ಕುಮಾರ್ ಮತ್ತು ರವಿ ಸಾಸನೂರು ಸಹ ನಿರ್ದೇಶಕರಾಗಿ ಸಾಥ್ ನೀಡಿದ್ದಾರೆ. ನಾನು ನಿರ್ದೇಶಕನಾಗುವ ಕನಸನ್ನು ನನ್ನ ತಂದೆ ಸುಧೀಂದ್ರ ವೆಂಕಟೇಶ್ ಅವರು ಈ ಕಿರುಚಿತ್ರವನ್ನು ನಿರ್ಮಾಣ ಮಾಡುವ ಮೂಲಕ ನನಸು ಮಾಡಿದ್ದಾರೆ. ಹಿರಿಯರಾದ ರಾಕ್ ಲೈನ್ ವೆಂಕಟೇಶ್, ನಟಿ ಶ್ರುತಿ ಹಾಗೂ ಗುರುಗಳಾದ ಕಮಲಾಕರ್ ಅವರು ಬಂದು ಹಾರೈಸಿದ್ದಾರೆ. ಆಗಮಿಸಿದ ಗಣ್ಯರಿಗೆ ಹಾಗೂ ಮಾಧ್ಯಮದವರಿಗೆ ಅನಂತ ಧನ್ಯವಾದಗಳು ಎಂದು ನಿರ್ದೇಶಕ ಪವನ್ ವೆಂಕಟೇಶ್ ತಿಳಿಸಿದರು. ನಾನು ಕಣ್ಣಾರೆ ಕಂಡ ಅನೇಕ ಸನ್ನಿವೇಶಗಳೆ ಈ ಕಥೆಗೆ ಸ್ಪೂರ್ತಿ ಎಂದು ಮಾತನಾಡಿದ ಕಥೆಗಾರ ಹಾಗೂ ನಟ ವಿಜಯ್ ಶಿವಕುಮಾರ್, ಈ ಕಥೆ ಕೇಳಿದ ಪವನ್ ವೆಂಕಟೇಶ್ ಕಥೆ ಚೆನ್ನಾಗಿದೆ ನಾನೇ ನಿರ್ದೇಶನ ಮಾಡುತ್ತೇನೆ ಎಂದರು. ಸುಧೀಂದ್ರ ವೆಂಕಟೇಶ್ ಅವರು ನಿರ್ಮಾಣ ಮಾಡಿದರು. ನಮ್ಮ ಈ ಮೊದಲ ಪ್ರಯತ್ನಕ್ಕೆ ಎಲ್ಲರ ಪ್ರೋತ್ಸಾಹವಿರಲಿ ಎಂದರು. ಕಿರುಚಿತ್ರದಲ್ಲಿ ನಟಿಸಿರುವ ಹರಿಣಿ ಶ್ರೀಕಾಂತ್, ಯತಿರಾಜ್, ತ್ರಿಶೂಲ್ ಸಹ ನಿರ್ದೇಶಕರಾದ ಮನೋಜ್ ಕುಮಾರ್, ರವಿ ಸಾಸನೂರ್ ಹಾಗೂ ಸಂಗೀತ ನಿರ್ದೇಶಕ ವಿಜಯ್ ಹರಿತ್ಸ ಮುಂತಾದವರು ʼಫಸ್ಟ್ ಸ್ಯಾಲರಿʼ ಬಗ್ಗೆ ಮಾತನಾಡಿದರು. ನಿರ್ಮಾಪಕ ಸುರೇಶ್ ಅವರು ಸಮಾರಂಭದಲ್ಲಿ ಉಪಸ್ಥಿತರಿದ್ದರು

TAGGED:First Salarykannada cinemaPavan Venkateshsandalwood
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories
Pushpa Arunkumar
ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories
Ram Charan
ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್‌ಚರಣ್ ಪತ್ನಿ ಉಪಾಸನಾ
Bollywood Cinema Latest Top Stories

You Might Also Like

Budget 2026 1 1
Latest

ವಿಕಸಿತ ಭಾರತಕ್ಕೆ ಕೇಂದ್ರದ ಯುವಶಕ್ತಿ ಬಜೆಟ್ – ಜೀರಾಮ್‌ಜೀ ಯೋಜನೆಗೆ 95,692 ಕೋಟಿ ಮೀಸಲು; ಹಿಂದಿಗಿಂತಲೂ ಹೆಚ್ಚು!

Public TV
By Public TV
1 hour ago
Hassan Car Accident
Crime

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ – ಓರ್ವ ಸಾವು, ಇಬ್ಬರು ಗಂಭೀರ

Public TV
By Public TV
2 hours ago
Ind vs Pak U19 1
Cricket

U19 World Cup | ಭಾರತಕ್ಕೆ 58 ರನ್‌ಗಳ ಭರ್ಜರಿ ಜಯ – ಮೈದಾನದಲ್ಲೇ ಕಣ್ಣೀರಿಟ್ಟ ಪಾಕ್‌ ಕ್ರಿಕೆಟಿಗ

Public TV
By Public TV
2 hours ago
India vs Pakistan 1
Cricket

Boycott | ವಿಶ್ವಕಪ್‌ ಟೂರ್ನಿ ಆಡ್ತೀವಿ, ಭಾರತದ ವಿರುದ್ಧ ಆಡಲ್ಲ – ಪಾಕಿಸ್ತಾನ ಅಚ್ಚರಿ ನಿರ್ಧಾರ

Public TV
By Public TV
3 hours ago
Chaluvarayaswamy
Districts

ಕೃಷಿಯಾಧಾರಿತ ಕರ್ನಾಟಕಕ್ಕೆ ಕೇಂದ್ರ ಬಜೆಟ್‌ನಲ್ಲಿಲ್ಲ ಒತ್ತು: ಚಲುವರಾಯಸ್ವಾಮಿ

Public TV
By Public TV
3 hours ago
CJ Roy 6
Bengaluru City

ಬೆಲ್ಜಿಯಮ್ ದೇಶದ ಪಿಸ್ತೂಲ್‌ನಿಂದ ಸಿ.ಜೆ ರಾಯ್ ಶೂಟೌಟ್

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?