Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೊದಲ ಬಾರಿಗೆ ಕಸಪಾ ಅಧ್ಯಕ್ಷರಿಗೆ ರಾಜ್ಯ ಸಚಿವರ ದರ್ಜೆ ಸ್ಥಾನಮಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೊದಲ ಬಾರಿಗೆ ಕಸಪಾ ಅಧ್ಯಕ್ಷರಿಗೆ ರಾಜ್ಯ ಸಚಿವರ ದರ್ಜೆ ಸ್ಥಾನಮಾನ

Bengaluru City

ಮೊದಲ ಬಾರಿಗೆ ಕಸಪಾ ಅಧ್ಯಕ್ಷರಿಗೆ ರಾಜ್ಯ ಸಚಿವರ ದರ್ಜೆ ಸ್ಥಾನಮಾನ

Public TV
Last updated: August 3, 2022 6:34 pm
Public TV
Share
2 Min Read
MAHESH JOSHI
SHARE

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರಿಗೆ ರಾಜ್ಯ ಸಚಿವರ ದರ್ಜೆ ಸ್ಥಾನಮಾನ ನೀಡಿದೆ.

ಇಲ್ಲಿಯವರೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಿಗೆ ಯಾವುದೇ ಸರ್ಕಾರ ಸಚಿವರ ಸ್ಥಾನಮಾನವನ್ನು ನೀಡಿರಲಿಲ್ಲ. ಇದೇ ಮೊಟ್ಟಮೊದಲ ಬಾರಿಗೆ ಸರ್ಕಾರ ಕಸಪಾ ಅಧ್ಯಕ್ಷರಿಗೆ ರಾಜ್ಯ ಸಚಿವರ ದರ್ಜೆ ಸ್ಥಾನಮಾನ ನೀಡಿದೆ.

ಸಚಿವರ ದರ್ಜೆ ಸ್ಥಾನಮಾನ ನೀಡಿದ ಸಿಎಂ ಬೊಮ್ಮಾಯಿ ಅವರಿಗೆ ಸಮಗ್ರ ಕನ್ನಡಿಗರ ಪರವಾಗಿ ಗೌರವ ಕಾರ್ಯದರ್ಶಿ ನೇ. ಭ. ರಾಮಲಿಂಗಶೆಟ್ಟಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

mahesh joshi

ಹೇಳಿಕೆಯಲ್ಲಿ ಏನಿದೆ?
ಬಸವರಾಜ ಬೊಮ್ಮಾಯಿ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಹಿರಿಮೆ-ಗರಿಮೆ, ಇತಿಹಾಸವನ್ನು ಮನಗಂಡು, ನಾಡು-ನುಡಿಗೆ ಪರಿಷತ್ತು ಸಲ್ಲಿಸುತ್ತಿರುವ ಅನನ್ಯ ಸೇವೆಯನ್ನು ಪರಿಗಣಿಸಿ ಹಾಗೂ ಪರಿಷತ್ತಿನ ಚುನಾವಣೆ ಇತಿಹಾಸದಲ್ಲಿ ದಾಖಲೆಯನ್ನು ಸೃಷ್ಟಿಸಿದ ಮತ್ತು ಕನ್ನಡ ಸಾಹಿತ್ಯ ಪರಿಷತ್ತನ್ನು ಜನಸಾಮಾನ್ಯರ ಪರಿಷತ್ತನ್ನಾಗಿ ಮಾಡುವ ಗುರಿಯನ್ನಿಟ್ಟುಕೊಂಡು, ಅನೇಕ ಕ್ರಾಂತಿಕಾರಿ ಬದಲಾವಣೆಯ ಮುಖೇನ ಪರಿಷತ್ತಿನ ಕಾರ್ಯಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತಿರುವ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರ ಕಾರ್ಯವೈಖರಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ತಕ್ಷಣದಿಂದ ಇಂದಿನಿಂದ ಜಾರಿಗೆ ಬರುವಂತೆ ರಾಜ್ಯ ಸಚಿವರ ದರ್ಜೆಗೆ ಸಮನಾದ ಸ್ಥಾನಮಾನವನ್ನು ನೀಡಿ ಗೌರವಿಸಿರುವುದು ಅತ್ಯಂತ ಸಂತಸದಾಯಕ ವಿಷಯವಾಗಿದೆ. ಇದನ್ನೂ ಓದಿ: ರಸ್ತೆಬದಿ ಕಟ್ಟಡ ಅಂಕುಶಕ್ಕೆ ನಿಯಮ: ಸಚಿವ ಸಿ.ಸಿ.ಪಾಟೀಲ್

ಕನ್ನಡ ಸಾಹಿತ್ಯ ಪರಿಷತ್ತಿಗೆ ಕನಿಷ್ಠ ಒಂದು ಕೋಟಿ ಸದಸ್ಯತ್ವದ ಗುರಿಯನ್ನು ಹೊಂದಿದ್ದು, ಜನಸಾಮಾನ್ಯರು ಪರಿಷತ್ತಿನ ಸದಸ್ಯರಾಗಬೇಕೆಂಬ ಸದುದ್ದೇಶದಿಂದ ಹಾಗೂ ಗ್ರಾಮಮಟ್ಟಕೆ ಪರಿಷತ್ತನ್ನು ಕೊಂಡೊಯ್ಯಬೇಕೆಂಬ ದೃಷ್ಟಿಯಿಂದ ಸದಸ್ಯತ್ವ ಶುಲ್ಕವನ್ನು 250 ರೂ. ಗಳಿಗೆ ಇಳಿಸಿ ಆನ್‌ಲೈನ್‌ನಲ್ಲೇ ನೋಂದಾಯಿಸಲು ಅತ್ಯಾಧುನಿಕ ತಂತ್ರಜ್ಞಾನದ ಆ್ಯಪ್ ಅನ್ನು ಪರಿಷತ್ತಿಗೆ ಅಳವಡಿಸಿಕೊಂಡಿರುವ, ವಿಶ್ವಾದ್ಯಂತ ಕನ್ನಡವನ್ನು ಒಗ್ಗೂಡಿಸಲು ಹೊರರಾಜ್ಯ, ಕೇಂದ್ರಾಡಳಿತ ಪ್ರದೇಶ ಮತ್ತು ಹೊರದೇಶ ಘಟಕಗಳನ್ನು ಸ್ಥಾಪಿಸಲು ಕ್ರಮಕೈಗೊಂಡಿರುವ ಹಾಗೂ ಕನ್ನಡ ಶಾಲೆಗಳ ಪುನಶ್ಚೇತನ ಮಾಡುವ ನಿಟ್ಟಿನಲ್ಲಿ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿರುವ ನಾಡೋಜ ಡಾ. ಮಹೇಶ ಜೋಶಿ ಅವರಿಗೆ ಸರ್ಕಾರ ನೀಡಿರುವ ರಾಜ್ಯ ಸಚಿವರ ದರ್ಜೆ ಸ್ಥಾನಮಾನದಿಂದಾಗಿ ಇನ್ನೂ ಹೆಚ್ಚಿನ ರೀತಿಯಲ್ಲಿ ಕನ್ನಡದ ಕೆಲಸಗಳನ್ನು ಮಾಡಲು ಶಕ್ತಿ ಬಂದಂತಾಗಿದೆ.

ಸರ್ಕಾರ ರಾಜ್ಯ ಸಚಿವರ ದರ್ಜೆ ಸ್ಥಾನಮಾನದ ಗೌರವ ನೀಡಿರುವುದು ಸಾಹಿತ್ಯ ಪರಿಷತ್ತಿನ ಎಲ್ಲ ಸದಸ್ಯರಿಗೆ ಸಲ್ಲಿಸಿರುವ ಸನ್ಮಾನವಾಗಿದೆ. ಈ ಮೂಲಕ ಮಾನ್ಯ ಅಧ್ಯಕ್ಷರ ನೇತೃತ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಮೇಲೆ ಸರ್ಕಾರ ಇಟ್ಟಿರುವ ಭರವಸೆ, ವಿಶ್ವಾಸವನ್ನು ಕಾಪಾಡಿಕೊಂಡು ಹೋಗುವ ಹಾಗೂ ಇನ್ನೂ ಹೆಚ್ಚಿನ ಜವಾಬ್ದಾರಿಯನ್ನು ಹೊತ್ತುಕೊಂಡು ಕನ್ನಡ-ಕನ್ನಡಿಗ-ಕರ್ನಾಟಕ ಇವುಗಳ ಹಿತರಕ್ಷಣೆ ಮತ್ತು ಅಭಿವೃದ್ಧಿಗೆ ಕಟಿಬದ್ಧನಾಗಿರುತ್ತೇನೆ ಎಂಬ ಭಾವನೆಯನ್ನು ಈ ಸುಸದಂರ್ಭದಲ್ಲಿ ಡಾ. ಮಹೇಶ ಜೋಶಿ ಅವರು ವ್ಯಕ್ತಪಡಿಸಿರುತ್ತಾರೆ.

ಕನ್ನಡಿಗರ ಒತ್ತಾಸೆಯಂತೆ, ಕನ್ನಡ ಸಾಹಿತ್ಯ ಪರಿಷತ್ತಿನಂತಹ ಘನ ಸಂಸ್ಥೆಯ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರಿಗೆ ರಾಜ್ಯ ಸಚಿವರ ದರ್ಜೆ ಸ್ಥಾನಮಾನ ನೀಡುವ ಮೂಲಕ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಪರಿಷತ್ತಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಿರುವುದಕ್ಕಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಎಲ್ಲ ಸದಸ್ಯರಾದಿಯಾಗಿ, ಜಿಲ್ಲಾ, ತಾಲ್ಲೂಕು, ಗಡಿರಾಜ್ಯ, ಹೋಬಳಿ ಘಟಕಗಳ ಕಾರ್ಯಕಾರಿ ಸಮಿತಿ ಸದಸ್ಯರ ಹಾಗೂ ಸಮಗ್ರ ಕನ್ನಡಿಗರ ಪರವಾಗಿ ಪರಿಷತ್ತು ಧನ್ಯವಾದಗಳನ್ನು ಸಲ್ಲಿಸುತ್ತದೆ.

Live Tv
[brid partner=56869869 player=32851 video=960834 autoplay=true]

TAGGED:kannadakarnatakamahesh joshiಕನ್ನಡಕರ್ನಾಟಕಬಸವರಾಜ ಬೊಮ್ಮಾಯಿಮಹೇಶ ಜೋಶಿ
Share This Article
Facebook Whatsapp Whatsapp Telegram

Cinema news

KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood

You Might Also Like

tulsi gabbard
Latest

ಅಮೆರಿಕಕ್ಕೆ ಪಾಕಿಸ್ತಾನದಿಂದ ಪರಮಾಣು ಬೆದರಿಕೆಯಿದೆ: ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್

Public TV
By Public TV
4 minutes ago
Parappana agrahara 1
Bengaluru City

ಜೈಲಿನಲ್ಲಿ ಮಹಿಳಾ ಖೈದಿಗಳ ಡ್ರಗ್ಸ್ ಟೆಸ್ಟ್ ಪಾಸಿಟಿವ್ ರಿಪೋರ್ಟ್ – ಅಧಿಕಾರಿಗಳೇ ಶಾಕ್

Public TV
By Public TV
33 minutes ago
Bagalkote by election CM Siddaramaiah meeting with HY Meti Family
Bagalkot

ಉಪಚುನಾವಣೆ| ಸಿಎಂ ಕಚೇರಿಯಲ್ಲಿ ಸಂಧಾನ ಸಭೆಗೆ ವ್ಯಾಪಕ ಟೀಕೆ

Public TV
By Public TV
43 minutes ago
Kalaburagi Dharwad Benches of the High Court
Districts

ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪೋಕ್ಸೋ ಕೇಸ್ – ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ

Public TV
By Public TV
49 minutes ago
HD Devegowda Mallikarjun Kharge
Bengaluru City

ಕಾಂಗ್ರೆಸ್‌ ಜೊತೆ ಬಲವಂತದ ಮದುವೆಯಲ್ಲಿದ್ದೆ, ನಮ್ಮನ್ನು ಬಿಟ್ಟು ಹೋಗಿದ್ದಕ್ಕೆ ವಿಚ್ಛೇದನ ನೀಡಿದ್ದೇನೆ: ಹೆಚ್‌ಡಿಡಿ ತಿರುಗೇಟು

Public TV
By Public TV
1 hour ago
ಸಾಂದರ್ಭಿಕ ಚಿತ್ರ
Bengaluru City

ಯುಗಾದಿಗೆ `ಗೃಹಲಕ್ಷ್ಮಿ’ಯರಿಗೆ ಗುಡ್‌ನ್ಯೂಸ್ – 27ನೇ ಕಂತಿನ ಹಣ ಬಿಡುಗಡೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?