– ನೆಚ್ಚಿನ ಆಟಗಾರರ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಸಜ್ಜು
ಹುಬ್ಬಳ್ಳಿ: ಇದೇ ಮೊದಲ ಬಾರಿಗೆ ಹುಬ್ಬಳ್ಳಿಯಲ್ಲಿ ರಣಜಿ ಟ್ರೋಫಿ ಫೈನಲ್ (Ranji Trophy Final) ಪಂದ್ಯ ನಡೆಯುತ್ತಿದೆ. ಕರ್ನಾಟಕ (Karnataka Team) ಮತ್ತು ಜಮ್ಮು ಕಾಶ್ಮೀರ ತಂಡಗಳ ನಡುವಿನ ಅಂತಿಮ ಪಂದ್ಯದ ಐತಿಹಾಸಿಕ ಕ್ಷಣಕ್ಕೆ ವಾಣಿಜ್ಯ ನಗರಿ ಸಾಕ್ಷಿಯಾಗಲಿದೆ. ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಕೆವಲ ಹುಬ್ಬಳ್ಳಿ ಮಾತ್ರವಲ್ಲದೇ ಉತ್ತರ ಕರ್ನಾಟಕ ಜನತೆ ಕಾತುರದಿಂದ ಕಾಯುತ್ತಿದೆ.
ಭಾರತೀಯ ಕ್ರಿಕೆಟ್ನ ಪ್ರತಿಷ್ಠಿತ ರಣಜಿ ಟ್ರೋಫಿ ಟೆಸ್ಟ್ ಟೂರ್ನಮೆಂಟ್ ಫೈನಲ್ ಹಂತ ತಲುಪಿದ್ದು, ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿ ಜಮ್ಮು ಕಾಶ್ಮೀರ ಫೈನಲ್ ಎಂಟ್ರಿಯಾಗಿದೆ. ಇತ್ತ 11 ವರ್ಷಗಳ ಬಳಿಕ ಕರ್ನಾಟಕ ಫೈನಲ್ ತಲುಪಿದೆ. ಈ ಎರಡು ತಂಡಗಳ ಜಿದ್ದಾಜಿದ್ದಿ ನೋಡಲು ರಾಜ್ಯದ ಮಾತ್ರವಲ್ಲದೇ ದೇಶವೇ ಕಾತುರದಿಂದ ಕಾಯುತ್ತಿದೆ. ಇದೇ ಮೊದಲ ಬಾರಿ ವಾಣಿಜ್ಯ ನಗರಿ ಹುಬ್ಬಳ್ಳಿಯ ಕೆಎಸ್ಸಿಎ ಮೈದಾನಲ್ಲಿ (KSCA Stadium) ಫೈನಲ್ ಪಂದ್ಯ ಆಯೋಜನೆ ಮಾಡಿದ್ದು, ಈ ಐತಿಹಾಸಿಕ ಕ್ರಿಕೆಟ್ ಪಂದ್ಯಾಟಕ್ಕೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಬೆಳಗ್ಗೆ 9:30 ರಿಂದ ಪಂದ್ಯ ಶುರುವಾಗಲಿದೆ. ಇದನ್ನೂ ಓದಿ: Semifinal Scenario | ಪವಾಡವೇ ನಡೆಯಬೇಕು – ಭಾರತದ ಸೆಮಿಸ್ ಹಾದಿ ತುಂಬಾ ಕಠಿಣ

ದೇವದತ್ ಪಡಿಕಲ್ (Devdutt Padikkal) ನಾಯಕತ್ವದ ಕರ್ನಾಟಕ ತಂಡದಲ್ಲಿ ಟೀಂ ಇಂಡಿಯಾದ ಅನುಭವಿ ಆಟಗಾರ ಕೆ.ಎಲ್ ರಾಹುಲ್ (KL Rahul), ಮಯಾಂಕ್ ಅಗರ್ವಾಲ್, ಕರುಣ್ ನಾಯರ್, ಆರ್.ಸ್ಮರಣ್, ಶ್ರೇಯಸ್ ಗೋಪಾಲ್, ಕೃತಿಕ್ ಕೃಷ್ಣ, ವಿದ್ವತ್ ಕಾವೇರಪ್ಪ, ವಿದ್ಯಾಧರ್ ಪಾಟೀಲ್, ಪ್ರಸಿದ್ದ್ ಕೃಷ್ಣ, ಮೊಹ್ಸಿನ್ ಖಾನ್, ಶಿಖರ್ ಶೆಟ್ಟಿ, ಶ್ರೀಜಿತ್ ಕೆ.ಎಲ್, ವೈಶಾಖ್ ವಿಜಯ್ಕುಮಾರ್ ಕಣಕ್ಕಿಳಿಯಲಿದ್ದಾರೆ. ನಾವು ಈ ಬಾರಿ ಕಪ್ ಎತ್ತಲಿದ್ದೇವೆ. ಹುಬ್ಬಳ್ಳಿಯಲ್ಲಿ ಈಗಾಗಲೇ ಆಡಿರುವ ಅನುಭವವಿದೆ. ಪಿಚ್ ಬಗ್ಗೆ ಸಾಕಷ್ಟು ವರ್ಕ್ ಮಾಡಿದ್ದೇವೆ ಹುಬ್ಬಳ್ಳಿಯಂತ ನಗರದಲ್ಲಿ ರಣಜಿ ಫೈನಲ್ ಆಡುತ್ತಿರುವುದು ಖುಷಿಯಿದೆ ಅಂತ ಕರ್ನಾಟಕ ತಂಡ ನಾಯಕ ದೇವದತ್ ಪಡಿಕಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸತತ 13 ಪಂದ್ಯ ಗೆಲ್ಲುವ ಕನಸು ಭಗ್ನ – ಸೋತರೂ ಮೊದಲ ಸ್ಥಾನದಲ್ಲಿದೆ ಭಾರತ
ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಣಜಿ ಟ್ರೋಫಿ ಫೈನಲ್ ತಲುಪಿರುವ ಜಮ್ಮು ಮತ್ತು ಕಾಶ್ಮೀರ ತಂಡ ಸಹ ಮೊದಲ ಬಾರಿಗೆ ಕಪ್ಗೆ ಮುತ್ತಿಡುವ ಆಸೆಯಲ್ಲಿದೆ. ಪರಾಸ್ ದೋಗ್ರಾ ನಾಯಕತ್ವದಲ್ಲಿ ಶುಭಂ, ಉಮರ್, ರೋಹಿತ್ ಶರ್ಮಾ, ಮುಸ್ತಫಾ ಅಜಿ, ಅಬ್ದುಲ್, ಯದುವೀರ್ ಸಿಂಗ್, ಉಮರ್ ಮಲೀಕ್, ಸುನೀಲ್ ಕುಮಾರ್ ಸೇರಿದಂತೆ ಹಲವು ಪ್ರಮುಖ ಆಟಗಾರರು ಇದ್ದಾರೆ. ಮೊದಲ ಬಾರಿ ನಾವು ಫೈನಲ್ ಗೆ ಬಂದಿರುವುದು ಖುಷಿಯಿದೆ. ನಮ್ಮಲ್ಲಿ ಪ್ರತಿಭೆಗೆ ಇದೆ ನಮಗೆ ಸಪೋರ್ಟ್ ಮಾಡಿ ಅಂತ ನಾಯಕ ಪರಾಸ್ ದೋಗ್ರಾ ಕೇಳಿಕೊಂಡಿದ್ದಾರೆ. ಇದನ್ನೂ ಓದಿ: ವಿಶ್ವಕಪ್ನಲ್ಲಿ ಹೊಸ ದಾಖಲೆ ಬರೆದ ಬೂಮ್ ಬೂಮ್ ಬೂಮ್ರಾ

ಹುಬ್ಬಳ್ಳಿಯ ರಾಜ್ ನಗರ ಸ್ಟೇಡಿಯಂನಲ್ಲಿ ರಣಜಿ ಫೈನಲ್ ಪಂದ್ಯ ಫೆಬ್ರವರಿ 24 ರಿಂದ 28 ರವರೆಗೆ ನಡೆಯಲಿದೆ. ಫೈನಲ್ ಪಂದ್ಯಕ್ಕೆ ಭರದ ಸಿದ್ಧತೆಗಳು ನಡೆದಿವೆ. ಇದೇ ಪ್ರಥಮ ಬಾರಿಗೆ ಹುಬ್ಬಳ್ಳಿಯಲ್ಲಿ ರಣಜಿ ಫೈನಲ್ ಪಂದ್ಯ ನಡೆಯುತ್ತಿರೋದು ವಿಶೇಷ. ಮುಂಬೈ ಟೀಂನಿಂದ ಪಿಚ್ ಕ್ಯೂರೇಟಿಂಗ್ ಕಾರ್ಯ ನಡೆದಿದೆ. ಎರಡೂ ತಂಡಗಳ ಪ್ರಾಕ್ಟೀಸ್ ನಡೀತಿದೆ. 5,000 ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಉಭಯ ತಂಡಗಳು ಈಗಾಗಲೇ ಹುಬ್ಬಳ್ಳಿಗೆ ಬಂದಿದ್ದು, ಸಮರೋಪಾಧಿಯಲ್ಲಿ ಅಭ್ಯಾಸ ಆರಂಭಿಸಿವೆ.
ಭದ್ರತೆ ಕುರಿತು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ರೊಂದಿಗೆ ಕೆಎಸ್ಸಿಎ ಪ್ರತಿನಿಧಿಗಳು ಚರ್ಚೆ ನಡೆಸಿದ್ದಾರೆ. ಕ್ರೀಡಾಂಗಣಕ್ಕೆ ಭೇಟಿ ನೀಡಿದ ಕಮಿಷನರ್ ಎನ್.ಶಶಿಕುಮಾರ್, ಪಂದ್ಯಕ್ಕೆ ಬರ್ತಿರೋ ಆಟಗಾರರು, ಗಣ್ಯರ ಮಾಹಿತಿ ಪಡೆದುಕೊಂಡರು.
ಒಟ್ಟಿನಲ್ಲಿ ಕ್ರೀಡಾಂಗಣದ ಸಿಬ್ಬಂದಿ ಯುದ್ಧೋಪಾದಿಯಲ್ಲಿ ಪಂದ್ಯಕ್ಕೆ ಭರದ ಸಿದ್ಧತೆ ಕೈಗೊಂಡಿದೆ. ತಮ್ಮ ನೆಚ್ಚಿನ ಆಟಗಾರರ ಆಟ ಕಣ್ತುಂಬಿಕೊಳ್ಳಲು ಹುಬ್ಬಳ್ಳಿ ಜನ ಕಾತುರದಿಂದ ಕಾಯ್ತಿದ್ದಾರೆ.

