ಚಿಕ್ಕಬಳ್ಳಾಪುರ: ಮೀನು ಹಿಡಿಯಲು ಹೋದ ಯುವಕನೊರ್ವ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೇಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊಂದಿಕೊಂಡಿರುವ ಅಣ್ಣೇಶ್ವರ ಗ್ರಾಮದ ಕೆರೆಯಲ್ಲಿ ನಡೆದಿದೆ.
ಸಿದ್ದೇಶ್ವರ್ ಶರ್ಮಾ(27 )ಮೃತನಾಗಿದ್ದಾನೆ. ಈತ ಬಿಹಾರ ಮೂಲದವನಾಗಿದ್ದು, ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದನು. ನಾಲ್ವರು ಸ್ನೇಹಿತರೊಂದಿಗೆ ಕೆರೆಯಲ್ಲಿ ಮೀನು ಹಿಡಿಯುವಾಗ ಆಕಸ್ಮಿಕ ಕಾಲು ಜಾರಿ ಕೆರೆಗೆ ಬಿದ್ದಿದ್ದಾನೆ. ಇದನ್ನೂ ಓದಿ: ಕನ್ನೇರಿ ಚಿತ್ರದ ಮನಮುಟ್ಟುವ ಹಾಡು ಬಿಡುಗಡೆ ಮಾಡಿದ ಖ್ಯಾತ ನಟಿ ಶ್ರುತಿ
ಯುವಕ ಮೃತಪಟ್ಟಿದ್ದು 5-6 ಗಂಟೆಗಳ ಕಾಲ ಆಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹ ಹೊರತೆಗೆದಿದ್ದು, ದೇವನಹಳ್ಳಿ ಸರ್ಕಾರಿ ತಾಲೂಕು ಆಸ್ಪತ್ರೆಗೆ ಮರಣೋತ್ತರ ಪರೀಕ್ಷಗೆ ಕಳುಹಿಸಲಾಗಿದೆ. ಈ ಸಂಬಂಧ ಕೇಂಪೇಗೌಡ ಏರ್ಪೋರ್ಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತೀಚೆಗೆ ಏರ್ಪೋರ್ಟ್ ದೇವನಹಳ್ಳಿ ಭಾರೀ ಮಳೆಯಾಗಿ ಕೆರೆ ತುಂಬಿಕೊಂಡಿತ್ತು. ಇದನ್ನೂ ಓದಿ: ಕಾಡಿನ ಥೀಮ್ ನಡುವೆ ರಾಯನ್ ಬರ್ತ್ಡೇ ಸೆಲೆಬ್ರೆಶನ್ – ಫೋಟೋ, ವೀಡಿಯೋ ವೈರಲ್