ಮಂಗಳೂರು: ಮೀನುಗಾರಿಕೆಗೆ ಹೊರಟಿದ್ದ ಬೋಟ್ನಿಂದ ಸಮುದ್ರಕ್ಕೆ ಬಿದ್ದಿದ್ದ ಮೀನುಗಾರ 6 ಗಂಟೆಗಳ ಬಳಿಕ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ.
ಗುರುವಾರ ಬೆಳಗ್ಗೆ ಮೀನುಗಾರಿಕೆಗೆ ಹೋಗಿದ್ದಾಗ ಸಂಜೆಯ ವೇಳೆ ಬೋಟ್ನಲ್ಲಿದ್ದ ತಮಿಳುನಾಡಿನ ಕಾರ್ಮಿಕ ನಾಗರಾಜ್ ಆಯತಪ್ಪಿ ಸಮುದ್ರಕ್ಕೆ ಬಿದ್ದಿದ್ದರು. ತಕ್ಷಣವೇ ಅವರ ರಕ್ಷಣೆಗೆ ಮುಂದಾಗಿದ್ದರೂ ನಾಗರಾಜ್ ಸುಳಿವು ಸಿಕ್ಕಿರಲಿಲ್ಲ. ಬಳಿಕ ಸುಮಾರು 40 ಬೋಟ್ಗಳಲ್ಲಿ ಸಮುದ್ರದಲ್ಲಿ ಹುಡುಕಾಟ ನಡೆಸಲಾಗಿತ್ತು. ಆದ್ರೂ ನಾಗರಾಜ್ ಮಾತ್ರ ಪತ್ತೆಯಾಗಿರಲಿಲ್ಲ.
ಕೊನೆಗೆ ಎನ್ಎಂ ಪಿಟಿ ಯಿಂದ ಹೊರಟ ಕೋಸ್ಟ್ಗಾರ್ಡ್ ನೌಕೆಯವರು ಆ ಸ್ಥಳದಲ್ಲಿ ಹುಡುಕಾಡಿ ಸಮುದ್ರಕ್ಕೆ ಬಿದ್ದ ಕಾರ್ಮಿಕನನ್ನು ಪತ್ತೆ ಹಚ್ಚಿ ರಕ್ಷಿಸಿ ರಾತ್ರಿ ನವಮಂಗಳೂರಿಗೆ ಕರೆತಂದಿದ್ದಾರೆ. ಒಟ್ಟಿನಲ್ಲಿ ಸಮುದ್ರದಲ್ಲಿ ಸುಮಾರು 6 ಗಂಟೆಗಳ ಕಾಲ ಈಜಿ ನಾಗರಾಜ್ ಸಾವನ್ನೇ ಗೆದ್ದು ಬಂದಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv