ದಕ್ಷಿಣ ಕನ್ನಡ: ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದಲ್ಲಿ ಐದು ಗ್ರೆನೇಡ್ ಪತ್ತೆಯಾಗಿವೆ.
ದಾರಿಯಲ್ಲಿ ಹೋಗುತ್ತಿದ್ದಾಗ ಗ್ರಾಮದ ಜಯಕುಮಾರ್ ಎಂಬವರಿಗೆ ಗ್ರೆನೇಡ್ ಕಾಣಿಸಿವೆ. ಜಯಕುಮಾರ್ ಅವುಗಳನ್ನು ಮನೆಯ ಅಂಗಳದ ಬಳಿ ಇಟ್ಟು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಅವುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಪ್ರಿಯಕರನ ಪತ್ನಿಯ ಕತ್ತು ಕೊಯ್ದು ಕೊಲೆಗೆ ಯತ್ನಿಸಿದ ಯುವತಿ ಜೈಲುಪಾಲು!
ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ಕ್ಯೂಟ್ ಡ್ರೆಸ್ ಧರಿಸಿ ಬೊಂಬೆಯಂತೆ ರಾಯನ್ ಪೋಸ್
ಜಯಕುಮಾರ್ ಅವರು ಭೂಸೇನಾ ರೆಜಿಮೆಂಟ್ನಲ್ಲಿ ಎಸ್ಸಿಒ ಆಗಿ ನಿವೃತ್ತಿ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರೆನೇಡ್ ಪತ್ತೆ ಹಚ್ಚಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.