ವಿಜಯಪುರ: ಟಿಯುವಿ ಕಾರು, ಕಂಟೇನರ್ ಹಾಗೂ ಖಾಸಗಿ ಬಸ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ (Vijayapura) ಜಿಲ್ಲೆಯ ಬಸವನ ಬಾಗೇವಾಡಿ (Basavana Bagewadi) ತಾಲೂಕಿನ ಮನಗೂಳಿ ಪಟ್ಟಣದ ಬಳಿ ಎನ್ಹೆಚ್ 50ರಲ್ಲಿ ನಡೆದಿದೆ.
ಭೀಕರ ಅಪಘಾತದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಹಾಗೂ ಖಾಸಗಿ ಬಸ್ನಲ್ಲಿದ್ದ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಬಸ್ನಲ್ಲಿದ್ದ ಇತರರಿಗೆ ಗಾಯಗಳಾಗಿವೆ. ಅಲ್ಲದೇ ಕಂಟೇನರ್ ಚಾಲಕನಿಗೂ ಸಣ್ಣಪುಟ್ಟ ಗಾಯಗಳಾಗಿದೆ. ಇದನ್ನೂ ಓದಿ: ಮನೆಯ ಒಳಗಡೆ ನುಗ್ಗಿ ಅಪರಿಚಿತ ವ್ಯಕ್ತಿಯಿಂದ ಲಷ್ಕರ್ ಉಗ್ರನಿಗೆ ಗುಂಡೇಟು!
ಸ್ಥಳಕ್ಕೆ ಮನಗೂಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ. ಇದನ್ನೂ ಓದಿ: ಈ ಬಾರಿ 1 ವಾರ ಮೊದಲೇ ರಾಜ್ಯಕ್ಕೆ ಮುಂಗಾರು ಪ್ರವೇಶ?