ಮೈಸೂರು: ಇಲ್ಲಿನ ಮೃಗಾಲಯದಲ್ಲಿದ್ದ ಐದು ವರ್ಷದ ತಾಯಮ್ಮ ಎಂಬ ಹುಲಿ ಅನಾರೋಗ್ಯದಿಂದ ಗುರುವಾರ (ಡಿ.25) ಮೃತಪಟ್ಟಿದೆ.
2021ರಂದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಿಂದ ರಕ್ಷಣೆ ಮಾಡಿ, ಮೈಸೂರು (Mysuru) ಮೃಗಾಲಯಕ್ಕೆ ತಂದು ಆರೈಕೆ ಮಾಡಲಾಗುತ್ತಿತ್ತು. ಕಳೆದ 10 ದಿನಗಳಿಂದ ರಕ್ತಕಣದ ಸಮಸ್ಯೆಯಿಂದ ಬಳಲುತ್ತಿತ್ತು. ಈ ಸಂಬಂಧ ಚಿಕಿತ್ಸೆ ನೀಡಲಾಗಿತ್ತು.ಇದನ್ನೂ ಓದಿ: ಬೆಂಗಳೂರಿಂದ ವಿಜಯಪುರಕ್ಕೆ ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಪ್ರಪ್ರಥಮ ವಿಶೇಷ ರೈಲು
ಇನ್ನೂ ಅನಾರೋಗ್ಯದಿಂದ ಬಳುತ್ತಿದ್ದ ಕಾರಣ ತಾಯಮ್ಮ ಹುಲಿ ಆಹಾರ ತ್ಯಜಿಸಿತ್ತು. ಚಿಕಿತ್ಸೆ ಕೊಡಿಸಿದರೂ ಕೂಡ ಫಲಕಾರಿಯಾಗದೇ ಸಾವನ್ನಪ್ಪಿದೆ.

