Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೇಘಸ್ಫೋಟ | ರಣ ಪ್ರವಾಹಕ್ಕೆ ಹಲವೆಡೆ ಭೂಕುಸಿತ – 171 ರಸ್ತೆಗಳು ಹಾಳು, 150ಕ್ಕೂ ಹೆಚ್ಚು ಪ್ರವಾಸಿ ವಾಹನಗಳು ಜಖಂ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಮೇಘಸ್ಫೋಟ | ರಣ ಪ್ರವಾಹಕ್ಕೆ ಹಲವೆಡೆ ಭೂಕುಸಿತ – 171 ರಸ್ತೆಗಳು ಹಾಳು, 150ಕ್ಕೂ ಹೆಚ್ಚು ಪ್ರವಾಸಿ ವಾಹನಗಳು ಜಖಂ

Public TV
Last updated: June 25, 2025 11:33 pm
Public TV
Share
3 Min Read
Himachal Pradesh Flood 3 1
SHARE

– ವರುಣಾರ್ಭಟಕ್ಕೆ ಪ್ರವಾಸಿ ತಾಣಗಳಲ್ಲಿ ಅನಾಹುತ, ಸೈನಿಕರ ಶಸ್ತ್ರಾಸ್ತ್ರಗಳು ನಾಪತ್ತೆ

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಕುಂಭದ್ರೋಣ ಮಳೆಯಾಗಿದೆ. ಕೆಲವು ಪ್ರಮುಖ ಸ್ಥಳಗಳಲ್ಲಿ ಮೇಘಸ್ಫೋಟವಾಗಿದ್ದು (Cloudburst) ಭಾರೀ ಮಳೆಯಿಂದಾಗಿ ಹಲವೆಡೆ ಭೂಕುಸಿತ, ರಣಪ್ರವಾಹ (Flash Floods), ಮತ್ತು ಆಸ್ತಿಪಾಸ್ತಿ ನಷ್ಟ ಸಂಭವಿಸಿದೆ. ಈವರೆಗೂ ಇಬ್ಬರು ಸಾವನ್ನಪ್ಪಿದ್ದು ಹನ್ನೊಂದು ಮಂದಿ ನಾಪತ್ತೆಯಾಗಿದ್ದಾರೆ. ಹಲವೆಡೆ ಪ್ರವಾಸಿಗರು ಸಿಲುಕಿದ್ದು ರಕ್ಷಣಾ ಕಾರ್ಯಚರಣೆ ಭರದಿಂದ ಸಾಗಿದೆ.

ಜನ ಜೀವನ ಅಸ್ಥವ್ಯಸ್ಥ
ಹಿಮಾಚಲ ಪ್ರದೇಶದಲ್ಲಿ (Himachal Pradesh) ಕುಂಭದ್ರೋಣ ಮಳೆಗೆ ಜನ ಜೀವನ ಅಸ್ಥವ್ಯಸ್ಥಗೊಂಡಿದೆ. ಕುಲು ಜಿಲ್ಲೆಯ ಸೈನ್ಜ್ ಕಣಿವೆ, ಜೀಭಿ, ತೀರ್ಥನ್, ಮತ್ತು ಮಣಿಕರಣ್-ಬಂಜರ್ ಕಣಿವೆಗಳಲ್ಲಿ ಮೇಘಸ್ಫೋಟ ಸಂಭವಿಸಿದೆ. ಪಾರ್ವತಿ ನದಿಯು ಉಕ್ಕಿ ಹರಿದಿದ್ದು, ರಣಪ್ರವಾಹಕ್ಕೆ ಕಾರಣವಾಗಿದೆ. ಕಾಂಗ್ರಾ ಜಿಲ್ಲೆಯ ಧರ್ಮಶಾಲಾದಲ್ಲಿ ಭಾರೀ ಮಳೆಯಾಗುತ್ತಿದ್ದು ಪ್ರವಾಹದಲ್ಲಿ 15-20 ಕಾರ್ಮಿಕರು ನೀರಿನಲ್ಲಿ ಕೊಚ್ಚಿಹೋಗಿರುವ ಶಂಕೆಯಿದೆ. ರಾಂಪುರ್, ಜಮತ್ಖಾನಾ, ನಿರ್ಮಂದ್, ಮತ್ತು ಅನಿ ಪ್ರದೇಶಗಳಲ್ಲಿ ಮೇಘಸ್ಫೋಟದಿಂದ 15-25 ವಾಹನಗಳು ಕೊಚ್ಚಿಹೋಗಿವೆ ಮತ್ತು ರಸ್ತೆ-ಸೇತುವೆಗಳಿಗೆ ಹಾನಿಯಾಗಿದೆ.

Himachal Pradesh Flood 3

ಹವಮಾನ ಇಲಾಖೆ ಪ್ರಕಾರ ಪಾಲಂಪುರ್ 145, ನಹಾನ್ 99, ಪೌಂಟಾ ಸಾಹಿಬ್ 58, ಧರ್ಮಶಾಲಾ 54 ಕಂಗ್ರಾ 44, ನರಕಂದ 40, ಕಸೌಲಿ 22, ಮಂಡಿ 16, ಶಿಮ್ಲಾ 14 ಮಿಲಿ ಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಗಳಲ್ಲಿ ಹಗುರಿಂದ ಮಳೆ ಮುಂದುವರಿಯುವ ಸಾಧ್ಯತೆಯಿದೆ, ಮತ್ತು ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಬಹುದು ಎಂದು ಎಚ್ಚರಿಕೆ ನೀಡಿದೆ.

ವರುಣಾರ್ಭಟಕ್ಕೆ ಪ್ರವಾಸಿ ತಾಣದಲ್ಲಿ ಅನಾಹುತ
ಭಾರಿ ಮಳೆಯಿಂದ ಹಲವೆಡೆ ಭೂ ಕುಸಿತ ಸಂಭವಿಸಿದೆ. ಧರ್ಮಶಾಲಾ-ಚಟಾರೊ-ಗಗ್ಗಲ್ ರಸ್ತೆಯಲ್ಲಿ ಭೂಕುಸಿತದಿಂದ ಸಂಚಾರ ಸ್ಥಗಿತಗೊಂಡಿದೆ. 8-10 ವಾಹನಗಳು ಕೊಚ್ಚಿಹೋಗಿವೆ, 10 ವಾಹನಗಳು ನೀರಿನಲ್ಲಿ ಸಿಲುಕಿವೆ. ಕುಲುವಿನ ಸೈನ್ಜ್ ಕಣಿವೆಯಲ್ಲಿ ಮನೆಗಳು, ರಸ್ತೆಗಳು, ಮತ್ತು ಸೇತುವೆಗಳಿಗೆ ಹಾನಿಯಾಗಿದೆ. ಜಮತ್ಖಾನಾದಲ್ಲಿ 24-25 ವಾಹನಗಳಿಗೆ ತೀವ್ರ ಹಾನಿಯಾಗಿದೆ. ರಾಜ್ಯದಲ್ಲಿ ಒಟ್ಟು 171 ರಸ್ತೆಗಳು ಹಾಳಾಗಿದ್ದು, 550 ವಿದ್ಯುತ್ ಟ್ರಾನ್ಸಫಾರಂಗಳು ಕೆಟ್ಟುಹೋಗಿವೆ. ವಿಮಾನ ಹಾರಾಟಲ್ಲೂ ವ್ಯತ್ಯಯವಾಗಿದೆ.

Himachal Pradesh Flood 1

ಸೈನ್ಜ್ ಕಣಿವೆಯಲ್ಲಿ ಮೇಘಸ್ಫೋಟದಿಂದಾಗಿ, ಸಿಯುಂಡ್‌ನಲ್ಲಿರುವ NHPC ಯ ಪವರ್ ಹೌಸ್‌ನಲ್ಲಿ ನಿಯೋಜಿಸಲಾದ ಮೂರನೇ ಬೆಟಾಲಿಯನ್ ಪಾಂಡೋಹ್‌ನ ಗಾರ್ಡ್‌ನ ವಸತಿ ಕೊಠಡಿ ಹಾನಿಗೊಳಗಾಗಿದೆ. ಇಲ್ಲಿ ನಿಯೋಜಿಸಲಾದ ಸುಮಾರು 10 ಪೊಲೀಸ್ ಜವಾನ್‌ಗಳು ಧರಿಸಿದ್ದ ಬಟ್ಟೆಗಳನ್ನು ಬಿಟ್ಟು ಎಲ್ಲವೂ ಕೊಚ್ಚ ಹೋಗಿದೆ. ಸೈನಿಕರ 3-4 ಶಸ್ತ್ರಾಸ್ತ್ರಗಳೂ ಕೂಡಾ ಕೊಚ್ಚಿ ಹೋಗಿವೆ. ಒಬ್ಬ ಪೊಲೀಸ್ ಜವಾನ್ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಕುಲ್ಲು ಆಸ್ಪತ್ರೆಗೆ ಕರೆತರಲಾಗಿದೆ.

2000 ಪ್ರವಾಸಿಗರಿಗೆ ಸಂಕಷ್ಟ
ಕುಲುವಿನಲ್ಲಿ ರಣಪ್ರವಾಹಕ್ಕೆ ಇಬ್ಬರು ಬಲಿಯಾಗಿದ್ದಾರೆ, ಸ್ಥಳೀಯ ಮಾಹಿತಿ ಪ್ರಕಾರ ಅಪ್ಪ-ಮಗಳು ಸೇರಿದಂತೆ ಮೂವರು ಕೊಚ್ಚಿಹೋಗಿರುವ ಶಂಕೆಯಿದೆ. ಧರ್ಮಶಾಲಾ ಬಳಿಯ ಖಾನಿಯಾರಾದ ಮನುನಿ ಖಾದ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ಜಲವಿದ್ಯುತ್ ಯೋಜನೆಯ 10ಕ್ಕೂ ಹೆಚ್ಚು ಕಾರ್ಮಿಕರು ಪ್ರವಾಹದಲ್ಲಿ ಕೊಚ್ಚಿಹೋಗಿದ್ದಾರೆ ಎಂದು ವರದಿಯಾಗಿದೆ. ಇಲ್ಲಿಯವರೆಗೆ, ಇಬ್ಬರ ಶವಗಳನ್ನು ಹೊರತೆಗೆಯಲಾಗಿದೆ. ಎಸ್‌ಡಿಆರ್‌ಎಫ್ ತಂಡಗಳು ಸ್ಥಳದಲ್ಲಿದ್ದು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಸೈನ್ಜ್ ಕಣಿವೆಯ ಶಂಶಾರ್, ಶಂಘಾಡ್ ಮತ್ತು ಸುಚೈಹಾನ್ ಪಂಚಾಯತ್ ಪ್ರದೇಶಗಳಲ್ಲಿ 2,000 ಕ್ಕೂ ಹೆಚ್ಚು ಪ್ರವಾಸಿಗರು ಮತ್ತು 150ಕ್ಕೂ ಹೆಚ್ಚು ಪ್ರವಾಸಿ ವಾಹನಗಳು ಸಿಲುಕಿಕೊಂಡಿವೆ, 25 ಪ್ರವಾಸಿಗರು ಲಹೌಲ್‌ನಲ್ಲಿಯೂ ಸಿಲುಕಿಕೊಂಡಿದ್ದಾರೆ.

Himachal Pradesh Flood 2 1

ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡಗಳು ಮತ್ತು ಸ್ಥಳೀಯ ರಕ್ಷಣಾ ತಂಡಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ, ಆದರೆ ರಸ್ತೆಗಳ ಹಾನಿಯಿಂದಾಗಿ ಕೆಲವು ಪ್ರದೇಶಗಳಿಗೆ ತಲುಪುವುದು ಕಷ್ಟವಾಗಿದೆ. ಉನಾ, ಬಿಲಾಸ್ಪುರ್, ಹಮೀರ್ಪುರ್, ಚಂಬಾ, ಕಾಂಗ್ರಾ, ಮಂಡಿ, ಸೋಲನ್ ಮತ್ತು ಸಿರ್ಮೌರ್ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕುಲ್ಲು ಮತ್ತು ಶಿಮ್ಲಾ ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ. ಮುಂದಿನ 24 ಗಂಟೆಗಳಲ್ಲಿ, ಕೆಲವು ಜಲಾನಯನ ಪ್ರದೇಶಗಳು ಮತ್ತು ಹಿಮಾಚಲ ಪ್ರದೇಶದ ಚಂಬಾ, ಕಾಂಗ್ರಾ, ಮಂಡಿ, ಶಿಮ್ಲಾ ಮತ್ತು ಸಿರ್ಮೌರ್ ಜಿಲ್ಲೆಗಳ ಪಕ್ಕದ ಪ್ರದೇಶಗಳಲ್ಲಿ ಹಗುರದಿಂದ ಮಧ್ಯಮ ಪ್ರವಾಹ ಉಂಟಾಗುವ ಸಾಧ್ಯತೆಯಿದೆ. ಸ್ಥಳೀಯ ಆಡಳಿತ ತುರ್ತು ಕ್ರಮ ತೆಗೆದುಕೊಳ್ತಿದೆ.

Share This Article
Facebook Whatsapp Whatsapp Telegram
Previous Article big bulletin 25 June 2025 part 1 ಬಿಗ್‌ ಬುಲೆಟಿನ್‌ 25 June 2025 ಭಾಗ-1
Next Article BR Patil 1 ಭ್ರಷ್ಟಾಚಾರ ಬಾಂಬ್‌ ಸಿಡಿಸಿದ ಶಾಸಕ ಬಿ.ಆರ್ ಪಾಟೀಲ್‌ಗೆ ಸಿಎಂ ಫುಲ್‌ ಕ್ಲಾಸ್‌

Latest Cinema News

shiva rajkumar shree marikamba temple
ಶಿರಸಿಯ ಶ್ರೀ ಮಾರಿಕಾಂಬಾ ಕ್ಷೇತ್ರಕ್ಕೆ ನಟ ಶಿವಣ್ಣ ದಂಪತಿ ಭೇಟಿ
Cinema Latest Sandalwood Uttara Kannada
kantara chapter 1 J.NTR
ಕಾಂತಾರ ಚಾಪ್ಟರ್-1 ಹೈದರಾಬಾದ್ ಪ್ರೀ-ರಿಲೀಸ್ ಇವೆಂಟ್‌ಗೆ Jr.NTR ಸಾಥ್
Cinema Latest Sandalwood Top Stories
jockey movie
‘ಮಡ್ಡಿ’ ಸಿನಿಮಾ ನಿರ್ದೇಶಕರ ಹೊಸ ಸಾಹಸ – ಟಗರು ಕಾಳಗ ಹಿನ್ನೆಲೆ ಮೋಷನ್ ಪೋಸ್ಟರ್
Cinema Latest Sandalwood Top Stories
Sri Murali
ಐತಿಹಾಸಿಕ ಚಿತ್ರದಲ್ಲಿ ನಟ ಶ್ರೀಮುರಳಿ
Cinema Latest Sandalwood
Anjali Sudhakar 3
ʻಲಕ್ಷ್ಮಿ ನಿವಾಸʼದಿಂದ ಹೊರನಡೆದ ಅಂಜಲಿ – ಕಾರಣವೇನು?
Cinema Latest TV Shows

You Might Also Like

Abhishek Sharma
Cricket

ಸಿಕ್ಸ್‌ ಆಯ್ತು ಈಗ ಏಷ್ಯಾಕಪ್‌ನಲ್ಲಿ ಮತ್ತೊಂದು ದಾಖಲೆ ಬರೆದ ಅಭಿಷೇಕ್‌ ಶರ್ಮಾ

34 minutes ago
Kailash Vijayvargiya Rahul and Priyanka Gandhi
Latest

ರಾಹುಲ್, ಪ್ರಿಯಾಂಕಾ ಬಾಂಧವ್ಯದ ಬಗ್ಗೆ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ಕೈಲಾಶ್

38 minutes ago
POWER CUT
Bengaluru City

ಬೆಂಗಳೂರಿನ ಹಲವೆಡೆ ಭಾನುವಾರ ವಿದ್ಯುತ್ ವ್ಯತ್ಯಯ – ಎಲ್ಲೆಲ್ಲಿ ಕರೆಂಟ್‌ ಇರಲ್ಲ?

2 hours ago
Mysuru Dasara Cauvery Aarti begins DK Shivakumar KRS Dam
Districts

ಕಾವೇರಿ ಆರತಿಗೆ ಚಾಲನೆ – ಪುಷ್ಪಾರ್ಚನೆ ಮಾಡಿ ಡಿಕೆಶಿ ಚಾಲನೆ

2 hours ago
Karnataka Caste census
Bengaluru City

ಜಾತಿ ಗಣತಿಗೆ ನೂರೆಂಟು ವಿಘ್ನ – ಡೆಡ್‌ಲೈನಲ್ಲಿ ಸಮೀಕ್ಷೆ ಮುಗಿಯೋದು ಡೌಟ್

2 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?