ಹುಬ್ಬಳ್ಳಿ: ಪ್ರತಿಕೂಲ ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ವಿಮಾನ ಲ್ಯಾಂಡಿಂಗ್ ಗೆ ಸಮಸ್ಯೆಯಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂಡಿಗೊ ವಿಮಾನದಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಪ್ರಯಾಣಿಸುತ್ತಿದ್ದರು. ಆದರೆ ಹುಬ್ಬಳ್ಳಿಯಲ್ಲಿ ಹವಾಮಾನ ವೈಪರೀತ್ಯ ಕಂಡುಬಂದಿದೆ. ಇದರಿಂದಾಗಿ ಲ್ಯಾಂಡಿಂಗ್ ಸಮಸ್ಯೆ ಉಂಟಾಗಿದೆ. ಹುಬ್ಬಳ್ಳಿಯಲ್ಲೇ ಮೂರು ಸುತ್ತುತ್ತಾ ಆಕಾಶದಲ್ಲೆ ವಿಮಾನ ಹಾರಾಡಿದೆ.
ಇಂಡಿಗೊ 6ಇ-7227 ವಿಮಾನದ ಮೂಲಕ ಸಿಎಂ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹುಬ್ಬಳ್ಳಿಗೆ ಆಗಮಿಸುತ್ತಿದ್ದರು. ದಟ್ಟ ಮಂಜು ಆವರಿಸಿದ ಹಿನ್ನೆಲೆಯಲ್ಲಿ ಲ್ಯಾಂಡಿಂಗ್ ಸಮಸ್ಯೆಯಾಗಿ ವಿಮಾನ 15 ನಿಮಿಷಗಳ ಕಾಲ ಆಕಾಶದಲ್ಲೇ ಹಾರುವ ಪರಿಸ್ಥಿತಿ ಒದಗಿತು. ನಂತರ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ 7:30ಕ್ಕೆ ಲ್ಯಾಡಿಂಗ್ ಆಗಬೇಕಿದ್ದ ಅರ್ಧ ಗಂಟೆ ತಡವಾಗಿ ಲ್ಯಾಂಡಿಂಗ್ ಆಯಿತು. ಇದನ್ನೂ ಓದಿ: ವೀರ ಸೇನಾನಿಗಳಿಗೆ ಗಣ್ಯರ ನಮನ – ಪ್ರಧಾನಿ, ರಕ್ಷಣಾ ಸಚಿವ, ತ್ರಿದಳ ಮುಖ್ಯಸ್ಥರಿಂದ ಗೌರವಾರ್ಪಣೆ
ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಮಾತನಾಡಿ, ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಇಂದು ಶಿಗ್ಗಾಂವನಲ್ಲಿ ಮತಚಲಾವಣೆ ಮಾಡಲು ಆಗಮಿಸಿದ್ದೇನೆ. ಆದರೆ ಹವಾಮಾನ ವೈಪ್ಯರಿತ್ಯರಿಂದ ವಿಮಾನ ತಡವಾಗಿ ಲ್ಯಾಂಡಿಂಗ್ ಆಗಿದೆ ಎಂದರು. ಇದನ್ನೂ ಓದಿ: ಪ್ರತಿಭಟನೆ ಮುಂದುವರಿಯಲಿದೆ: ನಾಳೆ ಮತ್ತೆ ರೈತರ ಸಭೆ
ಓಮಿಕ್ರಾನ್ ಬಗ್ಗೆ ಮಾತನಾಡಿದ ಅವರು, ಕ್ರಿಸ್ಮಸ್ ಹಾಗೂ ಹೊಸ ವರ್ಷಕ್ಕೆ ಯಾವುದೆ ನಿರ್ಬಂಧನೆ ಸದ್ಯಕ್ಕಿಲ್ಲ. ಈ ಬಗ್ಗೆ ಯಾವುದೇ ತೀರ್ಮಾನವನ್ನು ಕೈಗೊಂಡಿಲ್ಲ ಎಂದು ಹೇಳಿದರು. ಇದೇ ವೇಳೆ ಮಹದಾಯಿ ವಿಚಾರವಾಗಿ ಮತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದೆ. ಮಹದಾಯಿ ವಿಚಾರ ನ್ಯಾಯಾಲಯದಲ್ಲಿದೆ. ಮಹದಾಯಿ ಕಾಮಗಾರಿ ಆರಂಭಿಸಲು ಏನೂ ಮಾಡಬೇಕು ಅದನ್ನು ಮಾಡುತ್ತೇವೆ ಎಂದ ಅವರು, ಬೆಳೆ ಹಾನಿ ಹಿನ್ನೆಲೆಯಲ್ಲಿ ಪರಿಹಾರ ವಿತರಣೆ ಆರಂಭವಾಗಿದೆ. ಪರಿಹಾರ ಆ್ಯಪ್ ಮೂಲಕ ಪರಿಹಾರ ವಿತರಣೆ ಕಾರ್ಯ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಟೊಮೆಟೊ ಕದ್ದ ಖಾಕಿ ಸಮವಸ್ತ್ರಧಾರಿ – ವೀಡಿಯೋ ವೈರಲ್