ಚಂಡೀಗಢ: ಕೆಲ ದಿನಗಳ ಹಿಂದೆ ಗೋ ಫಸ್ಟ್ (Go First) ವಿಮಾನವೊಂದು (Flight) 55 ಪ್ರಯಾಣಿಕರನ್ನು (Passengers) ಬೆಂಗಳೂರು ವಿಮಾನ ನಿಲ್ದಾಣದಲ್ಲಿಯೇ ಬಿಟ್ಟು ದೆಹಲಿಗೆ ಹಾರಿತ್ತು. ಈ ಘಟನೆ ಭಾರೀ ವಿವಾದ ಸೃಷ್ಟಿಸಿತ್ತು. ಇದೀಗ ಅಮೃತಸರದಲ್ಲೂ (Amritsar) ಅಂತಹುದೇ ಘಟನೆ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಅಮೃತಸ ವಿಮಾನ ನಿಲ್ದಾಣದಿಂದ ಬುಧವಾರ ಸಂಜೆ 7:55ಕ್ಕೆ ಸಿಂಗಾಪುರ (Singapore) ಹೊರಡಬೇಕಿದ್ದ ಸ್ಕೂಟ್ ಏರ್ಲೈನ್ಸ್ (Scoot Airline) ವಿಮಾನ ನಿಗದಿತ ಸಮಯಕ್ಕೂ ಮೊದಲೇ ಮಧ್ಯಾಹ್ನ 3 ಗಂಟೆ ವೇಳೆಗೆ ಟೇಕ್ ಆಫ್ ಆಗಿದೆ. ವಿಮಾನ 35 ಪ್ರಯಾಣಿಕರನ್ನು ಬಿಟ್ಟು ಹಾರಾಟ ಪ್ರಾರಂಭಿಸಿದೆ ಎಂದು ವರದಿಯಾಗಿದೆ.
ವಿಮಾನ ನಿಗದಿತ ಸಮಯಕ್ಕೂ ಮೊದಲೇ ಟೇಕ್ ಆಫ್ ಆಗಿರುವುದಕ್ಕೆ ಪ್ರಯಾಣಿಕರು ಸಿಡಿದೆದ್ದಿದ್ದಾರೆ. ವಿಮಾನಯಾನ ಸಂಸ್ಥೆಯ ನಿರ್ಲಕ್ಷ್ಯ ಕಂಡು ನಿಲ್ದಾಣದಲ್ಲೇ ಪ್ರತಿಭಟನೆ ನಡೆಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಈ ಬಗ್ಗೆ ದೂರನ್ನೂ ನೀಡಿದ್ದಾರೆ. ಇದನ್ನೂ ಓದಿ: ಕಪ್ಪು ಬಟ್ಟೆ ಧರಿಸಿ ಬಂದವ್ರಿಗೆ ನಮೋ ಕಾರ್ಯಕ್ರಮಕ್ಕೆ ನೋ ಎಂಟ್ರಿ- ಯುವತಿಯರಿಗೆ ಅಸಮಾಧಾನ
ಘಟನೆಯ ಬಳಿಕ ಈ ಬಗ್ಗೆ ತನಿಖೆ ನಡೆಸಲು ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ಆದೇಶ ನೀಡಿದೆ. ಇದರಂತೆ ವಾಯುಯಾನ ನಿಯಂತ್ರಣ ಪ್ರಾಧಿಕಾರ ತನಿಖೆಯನ್ನು ಆರಂಭಿಸಿದೆ.
ಬಳಿಕ ವಿಮಾನ ನಿಲ್ದಾಣ ಅಧಿಕಾರಿಗಳು ವಿಮಾನಯಾನ ಅಧಿಕಾರಿಗಳನ್ನು ಸಂಪರ್ಕಿಸಿದಾಗ, ಪ್ರಯಾಣಿಕರಿಗೆ ಮೊದಲೇ ಇ-ಮೇಲ್ ಮೂಲಕ ಹಾರಾಟದ ಸಮಯವನ್ನು ಬದಲಾವಣೆ ಮಾಡಿದ್ದರ ಬಗ್ಗೆ ತಿಳಿಸಲಾಗಿತ್ತು ಎಂದು ಸ್ಪಷ್ಟಪಡಿಸಿದ್ದಾರೆ. ಅಮೃತಸರದಿಂದ ಸುಮಾರು 280 ಪ್ರಯಾಣಿಕರು ಸಿಂಗಾಪುರಕ್ಕೆ ಪ್ರಯಾಣಿಸಬೇಕಿತ್ತು. ಆದರೆ 30ಕ್ಕೂ ಹೆಚ್ಚು ಪ್ರಯಾಣಿಕರು ಈ ಬಗ್ಗೆ ತಿಳಿಯದೇ ಉಳಿದುಹೋಗಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ವೈದ್ಯೆಯ ಸೋಗಿನಲ್ಲಿ ರೋಗಿಗಳ ಬಳಿ ಚಿನ್ನಾಭರಣ ಕಳವು ಮಾಡ್ತಿದ್ದವಳು ಅರೆಸ್ಟ್
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k