ಮಹಾರಾಷ್ಟ್ರದಲ್ಲಿ ಭಾರೀ ಮಳೆ : ಯುಡೂರ – ಕಲ್ಲೋಳ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಜಲಾವೃತ

Public TV
1 Min Read
CKD RAIN

ಚಿಕ್ಕೋಡಿ: ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಕಳೆದ 2 ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕೃಷ್ಣಾ ನದಿಯ ನೀರಿನ ಪ್ರಮಾಣ ಮತ್ತೆ ಹೆಚ್ಚಾಗಿದೆ.

ಕೃಷ್ಣಾ ನದಿಗೆ ಹೆಚ್ಚಿನ ನೀರು ಹರಿದು ಬರುತ್ತಿರುವ ಕಾರಣ ಮತ್ತೆ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯುಡೂರ – ಕಲ್ಲೋಳ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಜಲಾವೃತಗೊಂಡಿದೆ. ಸೇತುವೆ ಜಲಾವೃತಗೊಂಡ ಹಿನ್ನೆಲೆಯಲ್ಲಿ ಪ್ರಯಾಣಿಕರು 7 ಕಿ.ಮೀ ಸುತ್ತುವರಿದು ಪ್ರಯಾಣಿಸಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ.

vlcsnap 2018 08 06 16h48m39s77

ಜುಲೈ ತಿಂಗಳಿನಲ್ಲಿ ಕೃಷ್ಣಾ ನದಿಗೆ ಭಾರಿ ಪ್ರಮಾಣದ ನೀರು ಹರಿದು ಬಂದ ಕಾರಣ 20 ದಿನಗಳ ಯಡೂರ – ಕಲ್ಲೋಳ ಸೇತುವೆ ಸೇರಿದಂತೆ ಚಿಕ್ಕೋಡಿ ತಾಲೂಕಿನ 7 ಸೇತುವೆಗಳು ಜಲಾವೃಗೊಂಡಿದ್ದವು. ಕೆಳ ಹಂತದ ಸೇತುವೆಗಳನ್ನ ಮೇಲ್ದರ್ಜೆಗೆ ಏರಿಸುವ ಬಗ್ಗೆ ಜನ ಪ್ರತಿನಿಧಿಗಳು ಈ ಹಿಂದೆ ಭರವಸೆ ನೀಡಿದ್ದರು. ನೀಡಿದ್ದ ಭರವಸೆ ಇನ್ನೂ ಈಡೇರದ ಹಿನ್ನೆಲೆಯಲ್ಲಿ ಜನ ಪ್ರತಿನಿಧಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಮಳೆ ಪ್ರಮಾಣ ಹೀಗೆ ಮುಂದುವರಿದಲ್ಲಿ ಕೃಷ್ಣಾ ಹಾಗೂ ಅದರ ಉಪ ನದಿಗಳ 6 ಸೇತುವೆಗಳು ಜಲಾವೃತವಾಗುವ ಸಾಧ್ಯತೆಯಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

Share This Article
Leave a Comment

Leave a Reply

Your email address will not be published. Required fields are marked *