ಬಾಗಲಕೋಟೆ: ಮಹಾರಾಷ್ಟ್ರ (Maharashtra) ಭಾಗದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಘಟಪ್ರಭಾ ನದಿಗೆ (Ghataprabha River) ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಪರಿಣಾಮ ಬಾಗಲಕೋಟೆ ಜಿಲ್ಲೆಯ ಘಟಪ್ರಭಾ ನದಿ ದಡದ ಹಳ್ಳಿಗಳಿಗೆ ಪ್ರವಾಹ ಆತಂಕ ಶುರುವಾಗಿದೆ.
ಮುಧೋಳ (Mudhol) ತಾಲೂಕಿನ ಘಟಪ್ರಭಾ ನದಿ ದಡದ ಅಂತಾಪುರ ಕಿರು ಸೇತುವೆ ಮುಳುಗಡೆಯಾಗಿ ರಸ್ತೆ ಸಂಪರ್ಕ ಬಂದ್ ಆಗಿದೆ. ಕಿರು ಸೇತುವೆ ಮೇಲೆ ಎರಡು ಅಡಿಯಷ್ಟು ನೀರು ಹರಿಯುತ್ತಿದ್ದು ಅಂತಾಪುರದಿಂದ ನದಿ ಆಚೆಗಿನ ಬೇರೆ ಗ್ರಾಮಗಳಿಗೆ ಓಡಾಡಲು ಜನರಿಗೆ ಸಮಸ್ಯೆಯಾಗಿದೆ. ಇದನ್ನೂ ಓದಿ: ದಾವಣಗೆರೆ | ಕಡಿಮೆ ಬೆಲೆಗೆ ಕಾಲು ಕೆಜಿ ಚಿನ್ನದ ನಾಣ್ಯ ನೀಡುವುದಾಗಿ 5 ಲಕ್ಷ ವಂಚಿಸಿ ಪರಾರಿ
ನದಿ ದಡದ ಹೊಲಗದ್ದೆಗಳಿಗೆ ನೀರು ನುಗ್ಗಿದ್ದು ರೈತರು ಬೆಳೆದ ಬೆಳೆಗಳು ನೀರಿಗೆ ಆಹುತಿಯಾಗುತ್ತಿವೆ. ಒಟ್ಟು ಘಟಪ್ರಭಾ ನದಿದಡದ11 ಕಿರು ಸೇತುವೆಗಳು ಮುಳುಗಡೆಯಾಗಿ ಆ ಭಾಗದ ಜನರಿಗೆ ಪ್ರವಾಹದ ಆತಂಕ ಮನೆ ಮಾಡಿದೆ.