ನೆರೆ ಪರಿಹಾರಕ್ಕಾಗಿ ಕಾಂಗ್ರೆಸ್ ಕಾರ್ಯಕರ್ತರಿಂದ ಭಿಕ್ಷಾಟನೆ

Public TV
1 Min Read
ckd congress protest

ಚಿಕ್ಕೋಡಿ: ನೆರೆ ಪರಿಹಾರಕ್ಕಾಗಿ ಒತ್ತಾಯಿಸಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಬಿಜೆಪಿ ಶಾಸಕ ಮಹೇಶ್ ಕುಮಟಳ್ಳಿ ತವರು ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಿಕ್ಷಾಟನೆ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಂತ್ರಸ್ಥರು ನೆರೆ ಪರಿಹಾರಕ್ಕಾಗಿ ಭಿಕ್ಷಾಟನೆ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಗಮನ ಸೆಳೆದರು.

WhatsApp Image 2020 03 01 at 11.56.51 AM 1

ಅಥಣಿ ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಮಾರುಕಟ್ಟೆ ತನಕ ಸಂಚರಿಸಿ ಕಾಂಗ್ರೆಸ್ ಕಾರ್ಯಕರ್ತರು ಭಿಕ್ಷೆ ಬೇಡಿ ಹಣ ಸಂಗ್ರಹ ನಡೆಸಿದರು. ರಾಜ್ಯ ಮತ್ತು ಕೇಂದ್ರ ಸರ್ಕಾರ ಹಾಗೂ ಲಕ್ಷ್ಮಣ ಸವದಿ, ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಮಹೇಶ್ ಕುಮಟಳ್ಳಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Karnataka Flood

ತೀರ್ಥ ಗ್ರಾಮದಲ್ಲಿ ಪ್ರವಾಹಕ್ಕೆ ಸಿಲುಕಿ ಮೃತಪಟ್ಟಿದ್ದ ಬಾಲಕ ಬಸವರಾಜ ಕಾಂಬಳೆ ಕುಟುಂಬಕ್ಕೆ ಸರ್ಕಾರ ತಕ್ಷಣ ಪರಿಹಾರ ನೀಡಬೇಕು ಹಾಗೂ ಎಲ್ಲ ಸಂತ್ರಸ್ಥರಿಗೂ ತಕ್ಷಣವೇ ಪರಿಹಾರ ಸಿಗಬೇಕು ಎಂದು ಇದೇ ವೇಳೆ ಪ್ರತಿಭಟನಾಕಾರರು ಆಗ್ರಹಿಸಿದರು. ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳೆ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು.

Share This Article
Leave a Comment

Leave a Reply

Your email address will not be published. Required fields are marked *