ಹೂ ಮಾರುತ್ತಿದ್ದ ಬಾಲಕಿಯನ್ನ ವಸತಿ ಶಾಲೆಗೆ ಸೇರಿಸಿದ ಸಚಿವರು

Public TV
1 Min Read
suresh kumar

ಬೆಂಗಳೂರು: ಸಿಲಿಕಾನ್ ಸಿಟಿಯ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತಿದ್ದ ಬಾಲಕಿಯನ್ನು ವಸತಿ ಶಾಲೆಗೆ ಸೇರಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಮನೆಯಲ್ಲಿ ಕಡು ಬಡತನವಿರುವ ಕಾರಣಕ್ಕೆ ತಂದೆ ತಾಯಿ ಇದ್ದರೂ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಸಂಗೀತಾ ಹೂವು ಮಾರುತ್ತಿದ್ದಳು. ಸಂಗೀತ ತಂದೆ ಆಕೆಯನ್ನು ಕಾಟಾಚಾರಕ್ಕೆ ಸರ್ಕಾರಿ ಶಾಲೆಗೆ ಸೇರಿಸಿದ್ದರು. ಆದರೆ ಶಾಲೆ ಮುಗಿದ ಮೇಲೆ ಸಂಗೀತಾ ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತ ಕುಟುಂಬಕ್ಕೆ ಸಹಾಯ ಮಾಡುತ್ತಿದ್ದಳು. ಶಾಲೆ ಕಡೆ ಹೆಚ್ಚು ಗಮನ ಕೊಡಲಾಗದೇ, ಕಷ್ಟ ಪಟ್ಟು ಚಿಕ್ಕ ವಯಸ್ಸಿನಲ್ಲಿಯೇ ತಂದೆ, ತಾಯಿಗೆ ಕುಟುಂಬ ನಡೆಸಲು ಸಹಾಯ ಮಾಡುತ್ತಿದ್ದ ಸಂಗೀತಾಳನ್ನು ಕಂಡ ಸಚಿವರು ಆಕೆಯನ್ನು ವಸತಿ ಶಾಲೆಗೆ ಸೇರಿಸಿ ಶಿಕ್ಷಣ ಕೊಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. ಇದನ್ನೂ ಓದಿ: ಗಾಡಿಗೆ ಬೀಗ ಹಾಕಿದ್ದಾರೆ: ಸಚಿವರ ಮುಂದೆ ಬೀಗಿದ ಪುಟಾಣಿಗಳು

ಕಾರ್ಮಿಕ ಇಲಾಖೆ ಅಧಿಕಾರಿಗಳು ಸಂಗೀತಾಳ ತಂದೆ, ತಾಯಿಯ ಮನವೊಲಿಸಿ ಕೊನೆಗೂ ಬಾಲಕಿಗೆ ಶಿಕ್ಷಣ ಕಲ್ಪಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಬಾಲಕಿ ರಾಮನಗರದ ಕೈಲಾಂಚದಲ್ಲಿರುವ ವಸತಿ ಶಾಲೆಯಲ್ಲಿ 7ನೇ ತರಗತಿಗೆ ದಾಖಲಾತಿ ಪಡೆದಿದ್ದಾಳೆ. ಈ ಬಗ್ಗೆ ಸ್ವತಃ ಶಿಕ್ಷಣ ಸಚಿವರೇ ಟ್ವೀಟ್ ಮಾಡಿ ತಿಳಿಸಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?
ಸಂಗೀತಾ ಎಂಬ ಈ ಬಾಲಕಿ ಕೆಂಗೇರಿ ರೈಲ್ವೆ ನಿಲ್ದಾಣದ ಬಳಿ ಹೂವು ಮಾರುತ್ತಿದ್ದಳು. ನಮ್ಮ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಆಕೆಯ ಪೋಷಕರ ಮನ ಒಪ್ಪಿಸಿ ಸಂಗೀತಾಳನ್ನು ರಾಮನಗರದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸೇರಿಸಿ ಶಿಕ್ಷಣ ಕೊಡಿಸಲು ಸಜ್ಜಾಗಿದ್ದಾರೆ. ಇಂತಹ ಇನ್ನೂ ಅನೇಕ ಬಾಲ ಕಾರ್ಮಿಕರಿಗೆ ಶಿಕ್ಷಣ ಕೊಡಿಸುವ ಯೋಜನೆ ನಮ್ಮ ಇಲಾಖೆಯದ್ದು ಎಂದು ಬರೆದು ಬಾಲಕಿ ಶಾಲೆಯಲ್ಲಿ ಮಕ್ಕಳ ಜೊತೆ ಕೂತಿರುವ ಫೋಟೋ ಹಾಕಿ ಸುರೇಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *