ಬೆಂಗ್ಳೂರು ಕನಸು-ನನಸು: ಸಬ್ ಅರ್ಬನ್ ರೈಲು ಹಳಿ ನಿರ್ಮಾಣಕ್ಕೆ ಸೈ ಎಂದ ಕೇಂದ್ರ

Public TV
1 Min Read
SUB URBAN

ಬೆಂಗಳೂರು: ಸಿಲಿಕಾನ್ ಸಿಟಿಗೆ ಸಬ್ ಅರ್ಬನ್ ರೈಲು ಸೇವೆ ಒದಗಿಸಲು ಕೇಂದ್ರ ಸರ್ಕಾರ ಇಂದು ಮಂಡಿಸಿರುವ ಬಜೆಟ್ ನಲ್ಲಿ ಘೋಷಣೆ ಮಾಡಿದೆ.

ಬಜೆಟ್ ನಲ್ಲಿ ರೈಲ್ವೆ ಇಲಾಖೆಯಲ್ಲಿಯೂ ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ. ಸಬ್ ಅರ್ಬನ್ ರೈಲು ಯೋಜನೆಗೆ ಒಟ್ಟು 40 ಸಾವಿರ ಕೋಟಿ ರೂ. ಮೀಸಲಿಡಲಾಗಿದ್ದು, ಅದರಲ್ಲಿ ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ 17 ಸಾವಿರ ಕೋಟಿ ರೂ. ನೀಡಲಾಗುತ್ತಿದೆ ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.

ಇದರಿಂದ ನಗರ ಮತ್ತು ಸುತ್ತಮುತ್ತಲಿನ ಉಪನಗರಗಳಿಗೆ ರೈಲು ಸಂಪರ್ಕ ಏರ್ಪಡಲಿದೆ. ರಾಮನಗರ-ಬೆಂಗಳೂರು, ಬೆಂಗಳೂರು-ಮಂಡ್ಯ, ಕೇಂದ್ರ ರೈಲ್ವೇ ನಿಲ್ದಾಣ-ಯಶವಂತಪುರ, ಯಶವಂತಪುರ- ತುಮಕೂರು, ಯಲಹಂಕ-ಬೈಯಪ್ಪನಹಳ್ಳಿ, ಯಲಹಂಕ-ದೊಡ್ಡಬಳ್ಳಾಪುರ, ಯಲಹಂಕ-ಚಿಕ್ಕಬಳ್ಳಾಪುರ ನಡುವೆ ಬೆಂಗಳೂರು ಸಬ್ ಅರ್ಬನ್ ರೈಲು ಸೇವೆ ಆರಂಭವಾಗಲಿದೆ.

TRAIN 1

ನಗರದ ಜನದಟ್ಟಣೆ ಕಡಿಮೆ ಮಾಡಲು ಮತ್ತು ವಿಮಾನ ನಿಲ್ದಾಣಕ್ಕೆ ನೇರಸಂಪರ್ಕ ಕಲ್ಪಿಸುವ ಉದ್ದೇಶದಿಂದ ಬೆಂಗಳೂರಿಗೆ ಸಬ್ ಅರ್ಬನ್ ರೈಲು ಬರಬೇಕು ಎಂಬ ಪ್ರಸ್ತಾಪವನ್ನು 1996ರಿಂದಲೇ ಈಗ ಕೇಂದ್ರ ಸಚಿವರಾಗಿರುವ ಅನಂತ್ ಕುಮಾರ್ ಅವರು ಸರ್ಕಾರಗಳನ್ನು ಒತ್ತಾಯ ಮಾಡುತ್ತಲೇ ಬಂದಿದ್ದರು. ಇದೀಗ ಅವರ ಸಿಲಿಕಾನ್ ಸಿಟಿಯ ಕನಸು ಈಡೇರಿದೆ. ಒಟ್ಟಿನಲ್ಲಿ ಲಕ್ಷಾಂತರ ಜನರಿಗೆ ಅನುಕೂಲವಾಗುವ ಈ ಯೋಜನೆಯಿಂದ ಟ್ರಾಫಿಕ್ ಜಾಮ್ ತಪ್ಪಲಿದೆ.

TRAIN 2

TRAIN 3

Share This Article
Leave a Comment

Leave a Reply

Your email address will not be published. Required fields are marked *