ಬೆಂಗಳೂರು: ಕೆಎಸ್ಆರ್ಟಿಸಿ (KSRTC) ಬಸ್ ಚಾಲಕನ ನಿರ್ಲಕ್ಷ್ಯ ಹಾಗೂ ಅತಿ ವೇಗದ ಬಸ್ ಚಾಲನೆಗೆ ಫುಡ್ ಡೆಲಿವರಿ ಬಾಯ್ ಬಲಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬಸವಾರಾಜು ಮೃತ ಫುಡ್ ಡೆಲಿವರಿ ಬಾಯ್. ತಡರಾತ್ರಿ 2 ಗಂಟೆ ವೇಳೆ ಸ್ಯಾಟಲೈಟ್ ಬಸ್ ನಿಲ್ದಾಣದ ಮುಂಭಾಗ ಈ ಅಪಘಾತ ಸಂಭವಿಸಿದೆ. ಫುಡ್ ಡೆಲಿವರಿ ಬಾಯ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಪ್ರೇಯಸಿಯ ಬದಲು ಎಕ್ಸಾಂ ಬರೆಯಲು ಹೆಣ್ಣಿನಂತೆ ವೇಷ ತೊಟ್ಟು ಪೊಲೀಸರ ಅತಿಥಿಯಾದ!
- Advertisement 2
- Advertisement 3
ಮೈಸೂರು ರೋಡ್ ಕಡೆಗೆ ರಾತ್ರಿ ಫುಡ್ ಡೆಲಿವರಿ ಮಾಡಲು ಬಸವರಾಜು ತೆರಳುತ್ತಿದ್ದ. ಈ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿಯಾದ ರಭಸಕ್ಕೆ ಸ್ಥಳದಲ್ಲೇ ಬಸವರಾಜು ಮೃತಪಟ್ಟಿದ್ದಾನೆ.
- Advertisement 4
ಸ್ಥಳಕ್ಕೆ ಬ್ಯಾಟರಾಯನಪುರ ಸಂಚಾರಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಕೆಎಸ್ಆರ್ಟಿಸಿ ಬಸ್ ಹಾಗೂ ಚಾಲಕನನ್ನ ವಶಕ್ಕೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಓವರ್ ಟೇಕ್ ಭರದಲ್ಲಿ ಅಪಘಾತ- ಒಂದೇ ಕುಟುಂಬದ ನಾಲ್ವರ ದುರ್ಮರಣ