ಧಾರವಾಡ: ಓದಿನ ಕಡೆ ಗಮನ ಕೊಡು ಎಂದು ಪೋಷಕರು ಹೇಳಿದ್ದಕ್ಕೆ ಯುವಕನೋರ್ವ ತನ್ನ ಪ್ರಾಣವನ್ನೇ ಕಳೆದುಕೊಂಡ ಘಟನೆ ಧಾರವಾಡದಲ್ಲಿ (Dharwad) ನಡೆದಿದೆ.
ಮೃತನನ್ನು ಚೇತನ್ ತೊಂಡಿಹಾಳ ಎಂದು ಗುರುತಿಸಲಾಗಿದೆ. ಈತ ಧಾರವಾಡದ ಸಾಧನಕೇರಿಯ ನಿವಾಸಿಯೇ ನಗರದ ಕಲಗೇರಿ ಕೆರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಒಳ್ಳೆಯ ಫುಟ್ಬಾಲ್ ಪ್ಲೇಯರ್ (FootBall Player) ಆಗಿದ್ದ ಈತನಿಗೆ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದನು. ಇದನ್ನೂ ಓದಿ: ಮಲೆನಾಡಲ್ಲಿ ಮತ್ತೆ ನಕ್ಸಲರ ಹೆಜ್ಜೆ – ಹೈ ಅಲರ್ಟ್ ಘೋಷಣೆ
ನಾಲ್ಕು ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಚೇತನ್, ಅದರಿಂದ ಹೊರ ಬರಲಾಗದೇ ಒದ್ದಾಡುತ್ತಿದ್ದನು. ಆತನ ಕುಟುಂಬಸ್ಥರು ಆತನಿಗೆ ಬೆಂಗಳೂರಿನ ಮಾನಸಿಕ ಆಸ್ಪತ್ರೆಯಲ್ಲೂ ಚಿಕಿತ್ಸೆ ಕೊಡಿಸಿದ್ದರು. ಆದರೆ ಖಿನ್ನತೆಯಿಂದ ಹೊರಬರಲಾಗದೇ ಚೇತನ್ ಕೊನೆಗೆ ಕೆಲಗೇರಿ ಕೆರೆಗೆ ಹಾರಿ ತನ್ನ ಪ್ರಾಣ ಕಳೆದುಕೊಂಡಿದ್ದಾನೆ.
ಚೇತನ್ ತನಗಿಷ್ಟ ಬಂದಂತೆ ಇರಲಿ ಎಂದು ನಾವು ಒತ್ತಡ ಹಾಕಿರಲಿಲ್ಲ. ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಆತನಿಗೆ ಚಿಕಿತ್ಸೆ ಸಹ ಕೊಡಿಸಿದ್ದೆವು. ಆದರೆ ಆತ ಮನೆ ಬಿಟ್ಟು ಹೊರಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಚೇತನ್ ಪೋಷಕರು ಇದೀಗ ಕಣ್ಣೀರು ಹಾಕುತ್ತಿದ್ದಾರೆ.
ಈ ಸಂಬಂಧ ಉಪನಗರ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.