ಕೋಲಾರ: ಪುಟ್ಪಾತ್ ತೆರವು ಕಾರ್ಯಾಚರಣೆ ವೇಳೆ ಪುರಸಭೆ ಅಧ್ಯಕ್ಷ ಹಾಗೂ ಸದಸ್ಯರು ಮಾರಾಮಾರಿ ಹೊಡದಾಡಿಕೊಂಡ ಘಟನೆ ಜಿಲ್ಲೆ ಮಾಲೂರು ಪಟ್ಟಣದಲ್ಲಿ ನಡೆದಿದೆ.
ಇಂದು ಮಾಲೂರು ಪುರಸಭೆ ಅಧ್ಯಕ್ಷ ರಾಮಮೂರ್ತಿ ಅವರ ಆದೇಶದಂತೆ ಫುಟ್ಪಾತ್ ತೆರವು ಕಾರ್ಯಾಚರಣೆಗೆ ಅಧಿಕಾರಿಗಳು ಮುಂದಾಗಿದ್ದರು. ಈ ವೇಳೆ ಸದಸ್ಯರಾದ ಮುರಳಿ ಹಾಗೂ ಶ್ರೀನಿವಾಸ್ ಅವರು ಇದಕ್ಕೆ ವಿರೋಧ ವ್ಯಕ್ತಪಡಿಸಿದರು.
ಅಧ್ಯಕ್ಷರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಮಾತಿನ ಚಕಮಕಿ ನಡೆಯಿತು. ಬಳಿಕ ಅಧ್ಯಕ್ಷರು ಹಾಗೂ ಸದಸ್ಯರು ಹೊಡೆದಾಡಿದರು. ಸಾರ್ವಜನಿಕರು ಜನಪ್ರತಿನಿಧಿಗಳ ಕಿತ್ತಾಟವನ್ನು ನೋಡುತ್ತ ನಿಂತಿದ್ದರು.
ಘಟನೆಯ ಕುರಿತು ಮಾಹಿತಿ ಪಡೆದ ಮಾಲೂರು ಠಾಣೆ ಪೊಲೀಸರು ಮಧ್ಯಪ್ರವೇಶಿಸಿ ಶಾಂತಿ ಕಾಪಾಡಿದರು.