ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಟಾಂಗಾದಲ್ಲಿ ಆಗಮಿಸಿದ ಸೋಮಶೇಖರ್

Public TV
1 Min Read
Somashekhar Mysore 1

ಮೈಸೂರು: ಸಹಕಾರ ಸಚಿವ ಹಾಗೂ ಮೈಸೂರು, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಬುಧವಾರ ಟಾಂಗಾದಲ್ಲಿ ನಗರ ಪ್ರದಕ್ಷಿಣೆ ಹಾಕುವ ಮೂಲಕ ‘ಟಾಂಗಾ ಸವಾರಿ’ ಮಾಡಲು ಪ್ರವಾಸಿಗರಿಗೆ ಪರೋಕ್ಷವಾಗಿ ಪ್ರೇರೇಪಿಸಿದರು.

Somashekhar Mysore 3

ಒಂದು ಕಾಲದಲ್ಲಿ ಸಾರಿಗೆ ವ್ಯವಸ್ಥೆಯ ಅವಿಭಾಜ್ಯ ಅಂಗವಾಗಿದ್ದ ಟಾಂಗಾ ಸವಾರಿ ಇತ್ತೀಚಿನ ದಿನಗಳಲ್ಲಿ ಕಡಿಮೆಯಾಗುತ್ತಿದೆ. ಅದರಲ್ಲೂ ದಸರಾ ಸಂದರ್ಭದಲ್ಲಿ ಟಾಂಗಾದಲ್ಲಿ ಮೈಸೂರು ಸುತ್ತುವ ಪ್ರವೃತ್ತಿ ಕಡಿಮೆಯಾಗುತ್ತಿರುವ ದಿನಗಳಲ್ಲಿ ಸೋಮಶೇಖರ್ ಅವರ ಟಾಂಗಾ ಸವಾರಿ ಮೈಸೂರಿನ ಜನತೆಯನ್ನು ಆಕರ್ಷಿಸಿತು. ಇದನ್ನೂ ಓದಿ: ಎರಡು ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷಗಳನ್ನು ಮುಗಿಸಲು ಯತ್ನಿಸುತ್ತಿವೆ: ದೇವೇಗೌಡ

Somashekhar Mysore 2

ನಗರದ ಗವರ್ನಮೆಂಟ್ ಹೌಸ್ ನಿಂದ ಅರಮನೆ ವೇದಿಕೆಯಲ್ಲಿ ನಡೆಯುತ್ತಿದ್ದ ಸಾಂಸ್ಕøತಿಕ ಕಾರ್ಯಕ್ರಮಕ್ಕೆ ಟಾಂಗಾದಲ್ಲಿ ಆಗಮಿಸಿದ ಸೋಮಶೇಖರ್ ಅವರನ್ನು ನಗರದ ದೀಪಾಲಂಕಾರ, ದಸರಾ ನೋಡಲು ಆಗಮಿಸಿದ ಪ್ರವಾಸಿಗರನ್ನು ಕಂಡು ಸಂತಸಪಟ್ಟರು.

ಸೋಮಶೇಖರ್ ಅವರ ಟಾಂಗಾ ಸವಾರಿ ವೇಳೆ ಮೂಡಾ ಅಧ್ಯಕ್ಷ ಹೆಚ್.ವಿ.ರಾಜೀವ್, ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆಗಳ ಅಧ್ಯಕ್ಷ ಅಪ್ಪಣ್ಣ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ ಸೇರಿದಂತೆ ಹಲವರು ಜೊತೆಯಲ್ಲಿದ್ದರು. ಇದನ್ನೂ ಓದಿ: 550 ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡ ವ್ಯಕ್ತಿ – ವೀಡಿಯೋ ವೈರಲ್

Share This Article
Leave a Comment

Leave a Reply

Your email address will not be published. Required fields are marked *