Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇದೇ ಮೊದಲ ಬಾರಿಗೆ ಮರಾಠಿಯಲ್ಲಿ ಬರಲಿದೆ ಕರಾವಳಿಯ ಯಕ್ಷಗಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಇದೇ ಮೊದಲ ಬಾರಿಗೆ ಮರಾಠಿಯಲ್ಲಿ ಬರಲಿದೆ ಕರಾವಳಿಯ ಯಕ್ಷಗಾನ

Districts

ಇದೇ ಮೊದಲ ಬಾರಿಗೆ ಮರಾಠಿಯಲ್ಲಿ ಬರಲಿದೆ ಕರಾವಳಿಯ ಯಕ್ಷಗಾನ

Public TV
Last updated: July 15, 2019 7:51 pm
Public TV
Share
2 Min Read
udp marathi yakshagana
SHARE

ಉಡುಪಿ: ಇದೇ ಮೊದಲ ಬಾರಿಗೆ ಕರಾವಳಿಯ `ಯಕ್ಷಗಾನ’ ಮರಾಠಿ ಭಾಷೆಯಲ್ಲಿ ತರ್ಜುಮೆಗೊಳ್ಳಲಿದೆ. ಕರ್ನಾಟಕದ ಹೆಮ್ಮೆಯ ಕಲೆ ಯಕ್ಷಗಾನದ ಚಂಡೆ ನಾದವು ಇನ್ನು ಮುಂದೆ ಮಹಾರಾಷ್ಟ್ರದಲ್ಲೂ ಕೇಳಲಿದೆ.

ಭಾಷಾವಾರು ಪ್ರಾಂತ ರಚನೆಯ ನಂತರ ಮಹಾರಾಷ್ಟ್ರ ಮತ್ತು ನಾವು ಬಾಂಧವ್ಯ ಬೆಸೆದದ್ದಕ್ಕಿಂತ ಕಚ್ಚಾಡಿದ್ದೇ ಹೆಚ್ಚು. ಆದರೆ ಕನ್ನಡ ನೆಲದ ಯಕ್ಷಗಾನ ಕಲೆಯು ಪ್ರೀತಿ ಹಂಚಲು ಹೊರಟಿದೆ. ಕೋಟ ಶಿವರಾಮ ಕಾರಂತರಿಂದ ಮರುಜೀವ ಪಡೆದ ಬಡಗುತಿಟ್ಟು ಯಕ್ಷಗಾನಕ್ಕೆ ಉಡುಪಿಯ ಯಕ್ಷಗಾನ ಕೇಂದ್ರವೇ ಮೂಲಸ್ಥಾನ. ಮಹಾರಾಷ್ಟ್ರದ ಸಾಂಸ್ಕೃತಿಕ ರಾಜಧಾನಿ ಪುಣೆಯಿಂದ ವಿದ್ವಾಂಸರುಗಳ ತಂಡವೊಂದು ಉಡುಪಿಯಲ್ಲಿ ಬೀಡುಬಿಟ್ಟಿದೆ. ಕೇಂದ್ರದವರು ಕಲಿಸುವ ಯಕ್ಷಗಾನ ಪ್ರದರ್ಶನ ಕಂಡು ಈ ಕಲೆಯ ಸಾಂಸ್ಕೃತಿಕ ಶ್ರೀಮಂತಿಕೆಗೆ ದಂಗಾಗಿದ್ದಾರೆ.

udp marathi yakshagana 1

ಮರಾಠಿಯಲ್ಲಿ ಯಕ್ಷಗಾನ ಪ್ರದರ್ಶನ ಏರ್ಪಡಿಸುವ ಉದ್ದೇಶದಿಂದ ಅವರು ಕರಾವಳಿಗೆ ಬಂದಿದ್ದಾರೆ. ಕನ್ನಡ ಭಾಷೆಯಲ್ಲಿರುವ ಯಕ್ಷಗಾನದ ಅಪರೂಪದ ಕೃತಿಗಳನ್ನು ಅನುವಾದ ಮಾಡಿ, ಮರಾಠಿ ಭಾಷೆಯಲ್ಲೇ ಪ್ರದರ್ಶನ ನೀಡಲು ತಯಾರಾಗಿದ್ದಾರೆ. ಮರಾಠಿ ರಂಗಭೂಮಿಗೆ ವಿಶ್ವ ಭೂಪಟದಲ್ಲಿ ಮಹತ್ವದ ಸ್ಥಾನಮಾನ ಇದೆ. ಇನ್ನು ಮುಂದೆ ನಮ್ಮ ಯಕ್ಷಗಾನವೂ ಮರಾಠಿ ನೆಲದಲ್ಲಿ ಮನೆಮಾತಾಗಲು ಸಿದ್ಧತೆ ನಡೆಯುತ್ತಿದೆ.

udp marathi yakshagana 4

ಯಕ್ಷಗಾನ ಮಹಾರಾಷ್ಟ್ರ ಮಂದಿಗೆ ಪರಿಚಯವಾಗಿಲ್ಲ. ಅದಕ್ಕೆ ನಾವು ಯಕ್ಷಗಾನವನ್ನು ಸಂಪೂರ್ಣವಾಗಿ ಮರಾಠಿಯಲ್ಲಿ ಅನುವಾದ ಮಾಡಿದ್ದೇವೆ. ಈ ವಿಚಾರದಿಂದ ನಾವು ಉಡುಪಿಗೆ ಬಂದಿದ್ದೇವೆ. ನಾವು ಮೊದಲು ಯಕ್ಷಗಾನದ ಪ್ರಕಾರದಲ್ಲಿ ಇರುವ ಏಳೆಂಟು ಪ್ರಸಂಗಗಳನ್ನು ಅನುವಾದ ಮಾಡುತ್ತೇವೆ. ಅದರ ಕಾವ್ಯ, ಗದ್ಯವನ್ನು ಅನುವಾದ ಮಾಡಿ ಪ್ರಕಟಿಸುತ್ತೆವೆ. ಆ ಬುಕ್ ಜುಲೈ ತಿಂಗಳಿನೊಳಗೆ ಪಬ್ಲಿಶ್ ಆಗುತ್ತದೆ. ಬಳಿಕ ಅದರಲ್ಲಿ ಎರಡು ಪ್ರಸಂಗವನ್ನು ವೇದಿಕೆ ಮೇಲೆ ತರುತ್ತೇವೆ. ಇದಕ್ಕಾಗಿ ನಮಗೆ ಬೇರೆ ಬೇರೆ ಕಲಾವಿದರ ಸಹಾಯ ಬೇಕಾಗುತ್ತದೆ. ಮೊದಲು ಪುಣೆದಲ್ಲಿ ಮಾಡಿ ಯಶಸ್ವಿಯಾದರೆ ಬೇರೆ ಮಹಾರಾಷ್ಟ್ರದಲ್ಲಿ ಮಾಡುತ್ತೇವೆ ಎಂದು ಮಹಾರಾಷ್ಟ್ರ ಸಾಂಸ್ಕೃತಿಕ ತಜ್ಞರಾದ ಗುರುರಾಜ್ ಕುಲಕರ್ಣಿ ಹೇಳಿದ್ದಾರೆ.

udp marathi yakshagana 5

ಪುಣೆಯಲ್ಲಿ 3 ಲಕ್ಷಕ್ಕೂ ಅಧಿಕ ಕನ್ನಡಿಗರಿದ್ದಾರೆ. ಅವರು ಕನ್ನಡ ಭಾಷೆಯಲ್ಲಿ ನಡೆಯುವ ಯಕ್ಷಗಾನಗಳನ್ನು ಕಂಡು ಖುಷಿಪಡುತ್ತಾರೆ. ಆದರೆ ಅಲ್ಲಿರುವ ಮರಾಠಿಗರನ್ನೂ ಯಕ್ಷಗಾನ ಆಕರ್ಷಿಸಿದೆ. ತಮ್ಮ ಭಾಷೆಯಲ್ಲೇ ಯಕ್ಷಗಾನ ಮಾಡಿ ಈ ಕಲೆಯನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಈ ಮರಾಠಿ ವಿದ್ವಾಂಸರು ಯೋಜನೆ ಹಾಕಿಕೊಂಡಿದ್ದಾರೆ.

udp marathi yakshagana 2

ಮುಂದಿನ ಮೂರ್ನಾಲ್ಕು ತಿಂಗಳಲ್ಲಿ ಐದು ಮಹತ್ವದ ಯಕ್ಷಗಾನ ಕೃತಿಗಳು ಭಾಷಾನುವಾದ ಆಗಲಿದೆ. ಮುಂದೆ ಯಕ್ಷಗಾನ ಕೇಂದ್ರದ ಗುರುಗಳೇ ಪುಣೆಗೆ ತೆರಳಿ ಯಕ್ಷಗಾನ ತರಬೇತಿ ನೀಡಲಿದ್ದಾರೆ. ಅಲ್ಲಿಂದ ಮುಂದೆ ಮರಾಠಿಯಲ್ಲೇ ಯಕ್ಷಗಾನ ಪ್ರದರ್ಶನ ಏರ್ಪಾಟಾಗಲಿದೆ. ಮಹಾರಾಷ್ಟ್ರದ ಅನೇಕ ಕಲಾ ಪ್ರಕಾರಗಳಿಗೆ ಯಕ್ಷಗಾನದ ನೃತ್ಯ ಮತ್ತು ರಂಗಸೂತ್ರಗಳೇ ಮೂಲ ಎನ್ನುವುದು ಈ ವಿದ್ವಾಂಸರ ಖಚಿತ ಅಭಿಪ್ರಾಯ. ಈ ವಿದ್ವಾಂಸರ ವೀಕ್ಷಣೆಗೆಂದೇ `ವೀರ ಅಭಿಮನ್ಯು’ ಹಾಗೂ `ಜಟಾಯು ಮೋಕ್ಷ’ ಎಂಬ ಎರಡು ಪ್ರಸಂಗಗಳ ಪ್ರದರ್ಶನವೂ ಏರ್ಪಾಟಾಗಿತ್ತು.

udp marathi yakshagana 3

ಮಹಾರಾಷ್ಟ್ರದಿಂದ ಕೆಲ ವಿದ್ವಾಂಸರು ಬಂದಿದ್ದಾರೆ. ಇದಕ್ಕೆ ಶಿವರಾಮ ಕಾರಂತ ಅವರು ಮಹಾರಾಷ್ಟ್ರದಲ್ಲಿ ತುಂಬಾ ಕೆಲಸ ಮಾಡಿದ್ದಾರೆ. ಯಕ್ಷಗಾನ ಮಹಾರಾಷ್ಟ್ರಕ್ಕೆ ಹೋಗಿ ಬರುತ್ತಿದೆ. ಉಡುಪಿಯಲ್ಲಿ ಇದು ಮೂಲ ಗುರುಕುಲ ಕೇಂದ್ರ. ವಿದ್ವಾಂಸರು ಇಲ್ಲಿಗೆ ಬಂದು ಇಲ್ಲಿ ಅಧ್ಯಾಯನ ಮಾಡಿ ಬಳಿಕ ಇಲ್ಲಿಯ ತಂಡವನ್ನು ಮರಾಠಿಯಲ್ಲೂ ಮಾಡಿಸುತ್ತಿದ್ದಾರೆ. ಇದು ನಮ್ಮ ಕನ್ನಡ ಭಾಷೆಯ ಹೆಮ್ಮೆ ಎಂದು ಯಕ್ಷ ಗುರುಗಳಾದ ಸಂಜೀವ ಸುವರ್ಣ ತಿಳಿಸಿದ್ದಾರೆ.

TAGGED:marathiPublic TVScholarShivarama KarantudupiYakshaganaಉಡುಪಿಪಬ್ಲಿಕ್ ಟಿವಿಮರಾಠಿಯಕ್ಷಗಾನವಿದ್ವಾಂಸರುಶಿವರಾಮ ಕಾರಂತ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

DK Shivakumar 11
Districts

ಬಾಯಿ ಮುಚ್ಚಿಕೊಂಡಿದ್ರೆ ನನಗೂ ಒಳ್ಳೆದಾಗುತ್ತೆ – ಬೆಂಬಲಿಗರಿಗೆ ಡಿಕೆಶಿ ವಾರ್ನಿಂಗ್

Public TV
By Public TV
2 minutes ago
Meerut Metro
Latest

ದೇಶದ ಅತಿ ವೇಗದ ಮೆಟ್ರೋ ರೈಲು ಮಾರ್ಗ ʻನಮೋ ಭಾರತ್ʼ ಕಾರಿಡಾರ್‌ ಉದ್ಘಾಟಿಸಿದ ಮೋದಿ

Public TV
By Public TV
46 minutes ago
Cyber Crime
Crime

ನಕಲಿ ಬ್ಯಾಂಕ್‌ ಖಾತೆ ತೆರೆದು ಸೈಬರ್‌ ವಂಚಕರಿಗೆ ಸಹಾಯ – ಎಂಜಿನಿಯರಿಂಗ್ ವಿದ್ಯಾರ್ಥಿ ಸೇರಿ ಇಬ್ಬರು ಅರೆಸ್ಟ್‌

Public TV
By Public TV
1 hour ago
HC MAHADEVAPPA
Bengaluru City

ರಾಜ್ಯದಲ್ಲಿ ಮುಂದೆ ದಲಿತ ನಾಯಕರೇ ಸಿಎಂ ಆಗಬೇಕು – ಹೈಕಮಾಂಡ್‌ಗೆ ಸಚಿವ ಮಹದೇವಪ್ಪ ಒತ್ತಾಯ

Public TV
By Public TV
2 hours ago
2 Terrorists Killed In Major Op In JKs Kishtwar 2 AK 47 Rifles Recovered
Crime

ಕಾಶ್ಮೀರದಲ್ಲಿ ಉಗ್ರರು ಅಡಗಿದ್ದ ಮನೆಯನ್ನೇ ಸ್ಫೋಟಿಸಿದ ಸೇನೆ – ಮೋಸ್ಟ್‌ ವಾಂಟೆಡ್‌ ಸೈಫುಲ್ಲ ಸೇರಿ ಇಬ್ಬರು ಮಟಾಷ್‌

Public TV
By Public TV
2 hours ago
Priyank Kharge 1
Bengaluru City

ಸರ್ಕಾರದ ವಿರುದ್ಧ ಮಾತನಾಡೋ ಬಿಜೆಪಿ ನಾಯಕರು ಲಮಾಣಿ ಲಂಚ ಕೇಸಲ್ಲಿ ಏನು ಹೇಳ್ತಾರೆ: ಪ್ರಿಯಾಂಕ್‌ ಖರ್ಗೆ ಟಾಂಗ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?