ದಾವಣಗೆರೆ: ಅಪಘಾತದಲ್ಲಿ ಗಾಯಗೊಂಡಿದ್ದ ಚಿರತೆ (Leopard) ರಕ್ಷಣೆಗೆ ವೇಳೆ ಅರಣ್ಯ ಇಲಾಖೆ (Forest Department) ಸಿಬ್ಬಂದಿ ಮೇಲೆ ದಾಳಿ ನಡೆಸಿದ ಘಟನೆ ದಾವಣಗೆರೆಯ (Davanagere) ಅನಗೋಡು ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ.
ರಾತ್ರಿ 11 ಗಂಟೆ ಸುಮಾರಿಗೆ ಚಿರತೆ ರಸ್ತೆ ದಾಟುವಾಗ ಅಪರಿಚಿತ ವಾಹನ ಡಿಕ್ಕಿಯಾಗಿದೆ. ಇದರಿಂದ ಗಾಯಗೊಂಡ ಚಿರತೆ ರಸ್ತೆ ಪಕ್ಕದ ಚರಂಡಿಯಲ್ಲಿ ಬಿದ್ದುಕೊಂಡು ನರಳಾಡುತ್ತಿತ್ತು. ಇದನ್ನು ಗಮನಿಸಿದ ಸಾರ್ವಜನಿಕರು ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದರು. ಚಿಕಿತ್ಸೆಗಾಗಿ ಚಿರತೆ ಸೆರೆಹಿಡಿಯುವಾಗ ಅದು ಸಿಬ್ಬಂದಿ ಮೇಲೆ ದಾಳಿ ನಡೆಸಿದೆ. ಚಿರತೆ ದಾಳಿಯಿಂದ ಅರಣ್ಯ ಇಲಾಖೆಯ ಹೋಮ್ ಗಾರ್ಡ್ ಕೈಗೆ ಗಾಯವಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಇದನ್ನೂ ಓದಿ: ರಾತ್ರಿ ಹೊತ್ತು ಗ್ರಾಮಕ್ಕೆ ನುಗ್ಗಿ ಕುರಿ, ನಾಯಿ ಹೊತ್ತೊಯ್ಯುತ್ತಿದ್ದ ಚಿರತೆ ಸೆರೆ; ನಿಟ್ಟುಸಿರು ಬಿಟ್ಟ ಜನ
ಹೊಸಪೇಟೆಯಿಂದ ಬಂದ ವನ್ಯಜೀವಿ ಪಶುವೈದ್ಯರು ಗಾಯಗೊಂಡ ಚಿರತೆಗೆ ಅರವಳಿಕೆ ನೀಡಿದರು. ಪ್ರಜ್ಞೆ ತಪ್ಪಿದ ನಂತರ ಬಲೆ ಹಾಕಿ ಚಿರತೆಯನ್ನು ಸರೆಹಿಡಿಯಲಾಗಿದೆ. ಗಾಯಗೊಂಡ ಚಿರತೆಯನ್ನು ಶಿವಮೊಗ್ಗದ ತ್ಯಾವರೆಕೊಪ್ಪಕ್ಕೆ ಕರೆದೊಯ್ಯುವ ಸಾಧ್ಯತೆ ಇದೆ. ಇದನ್ನೂ ಓದಿ: ಕಡೂರು | ಗ್ರಾಮದೊಳಗೆ ರಾಜಾರೋಷವಾಗಿ ಓಡಾಡಿದ ಚಿರತೆ
